ವಿಭಾಗಗಳು

ಸುದ್ದಿಪತ್ರ


 

ಹೊಸದೊಂದು ಕ್ರಾಂತಿಗೆ ಸಜ್ಜಾಗಿದೆ ಭಾರತ. . .

The Prime minister of India has banned 500 and 1000 rupees notes today. Thanking PM reblogging my article written two weeks back..

ನೆಲದ ಮಾತು

ವಾಸ್ತವವಾಗಿ ಹಣ ಒಂದು ಮಾಧ್ಯಮ. ಅದು ಚಾಲ್ತಿಯಲ್ಲಿರಬೇಕೇ ಹೊರತು, ಜೇಬಿನಲ್ಲೋ, ಬೀರುವಿನಲ್ಲೋ, ನೆಲಮಾಳಿಗೆಯಲ್ಲೋ ಕೊಳೆಯಬಾರದು. ಹಾಗೆ ದೇಶದಲ್ಲಿ ಚಾಲನೆಗೆ ಬರದ ದುಡ್ಡು ದೇಹದಲ್ಲಿ ಸೂಕ್ತವಾಗಿ ಹರಿಯದ ರಕ್ತವಿದ್ದಂತೆ. ಅದು ಸ್ವಾಸ್ಥ್ಯವನ್ನು ಹಾಳುಗೆಡುವುದು ಖಾತ್ರಿ. ಸ್ವಾತಂತ್ರ್ಯ ಬಂದಾಗಿನಿಂದಲೂ ಭ್ರಷ್ಟಾಚಾರಕ್ಕೆ ಪ್ರೇರಣೆ ಕೊಟ್ಟ ರಾಜಕಾರಣಿಗಳು ಈ ದೇಶದ ಸಾಮಾನ್ಯ ಜನರ ಬದುಕು ಹಾಳು ಮಾಡಿದರು. ಈಗ ಅರ್ಥಕ್ರಾಂತಿಯ ಪ್ರಸ್ತಾವನೆ ಹೊಸದೊಂದು ಆಶಾಭಾವನೆ ಹುಟ್ಟಿಸಿದೆ. ಮೋದಿಯವರು ಇದನ್ನು ಒಪ್ಪಿಕೊಳ್ಳಬಹುದೆಂಬ ದೂರದ ಭರವಸೆಯೂ ಇದೆ. ಹೀಗಾಗಿಯೇ ಅವರು ಜನರನ್ನು ಬ್ಯಾಂಕಿನತ್ತ ಸೆಳೆದು ಆಥರ್ಿಕ ವಹಿವಾಟನ್ನು ನ್ಯಾಯಸಮಗೊಳಿಸಲು ಜನ್ಧನ್ ಯೋಜನೆಯನ್ನು ಜಾರಿಗೆ ತಂದರೆನಿಸುತ್ತದೆ. ಜಿಎಸ್ಟಿ ಜಾರಿಗೆ ತಂದು ತೆರಿಗೆ ವ್ಯವಸ್ಥೆಯನ್ನು ಹಿಡಿತಕ್ಕೆ ತಂದುಕೊಳ್ಳುವ ಯತ್ನ ಮಾಡಿದರು ಎಂದೂ ಎನಿಸುತ್ತದೆ.

ದೇಶದ ಆಥರ್ಿಕತೆ ಹೊಸದೊಂದು ದಿಕ್ಕಿಗೆ ತೆರೆದುಕೊಳ್ಳುವ ಲಕ್ಷಣ ಗೋಚರಿಸುತ್ತಿದೆಯಾ? ನರೇಂದ್ರ ಮೋದಿ ನಿದರ್ಾಕ್ಷಿಣ್ಯವಾಗಿ ದೇಶ ಕಟ್ಟುವ ತಮ್ಮ ಹೆಜ್ಜೆಗಳನ್ನು ಬಲವಾಗಿಯೇ ಊರುತ್ತಿದ್ದಾರೆ. ‘ಒಂದು ದೇಶಕ್ಕೆ ಒಂದು ಎಲೆಕ್ಟ್ರಿಕಲ್ ಗ್ರಿಡ್’ ಕನಸು ಕಂಡರು ಅದು ಸಾಕಾರವಾಯ್ತು. ‘ಒಂದು ದೇಶಕ್ಕೆ ಒಂದೇ ತೆರಿಗೆ’ ಎಂದರು. ಎದುರು ಪಕ್ಷದ ಅಸಮ್ಮತಿಯನ್ನೂ ಸರಿಮಾಡಿಸಿಕೊಂಡು ಚಾಣಾಕ್ಷತೆಯಿಂದ ಜಿಎಸ್ಟಿ ಜಾರಿಗೆ ತಂದುಬಿಟ್ಟರು. ಈಗ ಏಕರೂಪ ನಾಗರಿಕ ಸಂಹಿತೆಗೆ ಸಮಾಜದಿಂದ ಪ್ರತಿಕ್ರಿಯೆಗಳನ್ನು ಆಹ್ವಾನಿಸಿ ಹೊಸದೊಂದು ಮನ್ವಂತರಕ್ಕೆ ನಾಂದಿ ಹಾಡುತ್ತಿದ್ದಾರೆ ಪ್ರಧಾನ ಮಂತ್ರಿಗಳು. ಖುಷಿಯೇ ಅಲ್ಲವೇನು? ‘ನರೇಂದ್ರ ಮೋದಿ ಜಾತಿಗಳನ್ನು ಒಡೆಯುತ್ತಾರೆ, ಕೋಮುದಳ್ಳುರಿ ಹಚ್ಚುತ್ತಾರೆ. ದೇಶವನ್ನು ತುಂಡರಿಸುತ್ತಾರೆ’ ಎಂದೆಲ್ಲ ಬೊಬ್ಬೆ ಹೊಡೆಯುವವರ ನಡುವೆ ಅವರು ಸದ್ದಿಲ್ಲದೇ ದೇಶವನ್ನು ಜೋಡಿಸಿ ಒಂದು ಮಾಡುತ್ತಿದ್ದಾರೆ, ಸಾಧ್ಯವಾದರೆ ಹಿಂದಿನವರು ಕಳೆದುಕೊಂಡಿದ್ದನ್ನು ಮರಳಿ ಜೋಡಿಸುತ್ತಿದ್ದಾರೆ ಕೂಡ!

ಬಹುಶಃ…

View original post 531 more words

Comments are closed.