ಭಾನುವಾರದ ಸುಂದರ ಸಂಜೆ…
Monday, February 18th, 2008ನಿಜಕ್ಕೂ ಫೆಬ್ರವರಿ ಹದಿನೇಳರ ಭಾನುವಾರದ ಸಂಜೆ ನನಗೆ ಅವಿಸ್ಮರಣೀಯವಾದ ಭಾವ ಜಾಗೃತಿಯ ಸಾರ್ಥಕ ಸಮಯವಾಗಿತ್ತು. ಅತ್ಯಂತ ಉಲ್ಲಾಸದಾಯಕವಾಗಿತ್ತು. ಹೀಗೆ ನನ್ನನ್ನು ಆಳವಾಗಿ ತಟ್ಟಿದ ಕಾರ್ಯಕ್ರಮದ ಹೆಸರು- “ವಂದೇ ಮಾತರಂ ಗೀತ ಸಂಧ್ಯಾ” ಮೈತ್ರಿ ಸಂಸ್ಕೃತಿ ಪ್ರತಿಷ್ಟಾನದ ಸಂಸ್ಕೃತೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮಕ್ಕೆ ‘ಭಾರತ ವೈಭವ’ ಶೀರ್ಷಿಕೆಯಡಿಯಲ್ಲಿ ನಿರೂಪಣೆ ಮಾಡುವ ಸೌಭಾಗ್ಯ ನನ್ನ ಪಾಲಿಗೆ ಬಂದಿತ್ತು. ವಂದೇ ಮಾತರಂ ‘ವಂದೇ ಮಾತರಂ…’ ಈ ಎರಡು ಪದಗಳು ಸಾಕು ಮಿಂಚಿನ ಸಂಚಾರಕ್ಕೆ. ಯಾವ ಎರಡು ಪದಗಳನ್ನು ಉಚ್ಚ ಕಂಠದಲ್ಲಿ […]