ಸಾಂಸ್ಕೃತಿಕ ಆಕ್ರಮಣಗಳು ಮತ್ತು ಪರಿಣಾಮಗಳು
Tuesday, December 23rd, 2008ರಾಷ್ಟ್ರವೆಂದರೇನು? ಬರಿಯ ಕಲ್ಲು – ಮಣ್ಣೇ? ನಾವು ಕಟ್ಟಿ ನಿಲ್ಲಿರುವ ಕಟ್ಟಡಗಳೇ? ಹರಿಯುವ ನದಿಯೇ? ಎದೆಯೆತ್ತಿ ನಿಂತಿರುವ ಪರ್ವತ ಸಮೂಹಗಳೇ? ಅಲ್ಲಿ ಜನಿಸಿರುವ ಮಹಾಪುರುಷರೇ? ಅಥವಾ ಅವರು ಬರೆದಿರುವ ಗ್ರಂಥಗಳೇ? ಊಹೂಂ… ಉತ್ತರ ಅಷ್ಟು ಸುಲಭವೇನಲ್ಲ. ಬಹಳ ಬಾರಿ ರಾಷ್ಟ್ರವೆಂದೊಡನೆ ನಾವು ಇಂಥ ವಿಷಯಗಳ ಸುತ್ತಲೇ ಅಡ್ಡಾಡುತ್ತಿರುತ್ತೇವೆ. ವಾಸ್ತವವಾಗಿ, ರಾಷ್ಟ್ರ ಸಂಸ್ಕೃತಿಯ ಪ್ರವಾಹ. ಸಂಸ್ಕೃತಿ ಇವುಗಳೆಲ್ಲವನ್ನೂ ಒಳಗೊಂಡಂತಹ, ಇವುಗಳನ್ನೂ ಮೀರಿದಂತಹ ಅಂಶ. ರಾಷ್ಟ್ರಕವಿ ಕುವೆಂಪು ಇದನ್ನು ಸಮರ್ಥವಾಗಿ ಚಿತ್ರಿಸುತ್ತಾರೆ. ಮಾನವನನ್ನು ದೃಷ್ಟಿಯಲ್ಲಿರಿಸಿಕೊಂಡು ಅವರು ಪ್ರಗತಿಯ ಬಗೆಗಳನ್ನು ವಿವರಿಸುತ್ತಾರೆ. […]