ವಿಭಾಗಗಳು

ಸುದ್ದಿಪತ್ರ

Your email:

 

Archive for 2008

ಏಸು ಕ್ರಿಸ್ತ ಮತ್ತು ಭಾರತ…

Friday, May 16th, 2008

ಶಿಲುಬೆಗೇರಿಸಲಾಗಿದ್ದ ಏಸುಕ್ರಿಸ್ತರು ಮೃತರಾಗಲಿಲ್ಲ. ತಮ್ಮ ಅನುಯಾಯಿಗಳ ಸಹಾಯದಿಂದ ಬದುಕುಳಿದ ಅವರು ಗ್ರೇಟ್ ಬ್ರಿಟನ್ನಿನ ಕಡೆ ಹೊರಟರು. ಅಲ್ಲಿಂದ ಮೆಡಿಟರೇನಿಯನ್ ಪ್ರಾಂತ್ಯಕ್ಕೆ, ಅಲ್ಲಿಂದ ತಮ್ಮ ಗುರಿಯಾಗಿದ್ದ ಭಾರತಕ್ಕೆ!

ಮುಂದಿನ ಓದಿಗೆ ಇಲ್ಲಿ ಕ್ಲಿಕ್ ಮಾಡಿ
ಅಂದ ಹಾಗೆ, ಡಾವಿಂಚಿ ಕೋಡ್ ನೋಡಿರುವಿರಾ? ಸುಮ್ಮನೆ ಕೇಳಿದೆ.
- ವಂದೇ,
ಚಕ್ರವರ್ತಿ, ಸೂಲಿಬೆಲೆ

ಕ್ರಾಂತಿಯೋಗಿ ಬಾಬಾ ರಾಮದೇವ್

Thursday, May 8th, 2008

ಅದು ಕ್ರಾಂತಿಯ ಹೊಸ ರೂಪ. ಸಹಸ್ರ ಸಹಸ್ರ ಸಂಖ್ಯೆಯ ಜನರನ್ನು ಒಂದೇ ದಿಕ್ಕಿನೆಡೆಗೆ ಮುನ್ನಡೆಸಿ, ಜಾಗೃತಗೊಳಿಸುವ ಕ್ರಾಂತಿ ಅದು. ಬಾಬಾ ರಾಮ್ ದೇವ್, ಆ ಕ್ರಾಂತಿಯ ಹೆಸರು. ಬಾಬಾ ರಾಮ್ ದೇವ್, ಸವಾಲುಗಳನ್ನು ಕೆಚ್ಚೆದೆಯಿಂದ ಸ್ವೀಕರಿಸುವ ಸಂಕೇತ. ಬಾಬಾ ರಾಮ್ ದೇವ್, ತಾನು ನಂಬಿದ ಸತ್ಯವನ್ನು ದೃಢವಾಗಿ ಪ್ರತಿಪಾದಿಸಬಲ್ಲ ಶ್ರದ್ಧಾ ಮೂರ್ತಿ.  ದೇಶದ ಯಾವ ಭಾಗಕ್ಕೆ ನದೆದರೂ ಇಂದು ಬೆಳಗಿನ ವೇಳೆ ‘ಆಸ್ಥಾ’ ಚಾನೆಲ್ ನಲ್ಲಿ ಬಾಬಾ ರಾಮದೇವರನ್ನು ನೋಡುತ್ತ, ಅವರ ಮಾತು ಕೇಳುತ್ತ, ಯೋಗ ಮಾಡುವವರ [...]

ಜರಾ ಯಾದ್ ಕರೋ ಕುರ್ಬಾನಿ….

Tuesday, March 18th, 2008

ಅದು ೧೯೩೧ನೆ ಇಸವಿ, ಮಾರ್ಚ್ ೨೩. ಲಾಹೋರಿನ ಸೆರೆಮನೆಯ ಮುಂದೆ ಸಾವಿರಾರು ಜನ ಸೇರಿದ್ದರು. ‘ವಂದೇ ಮಾತರಂ’ ಘೋಷಣೆ ಮುಗಿಲು ಮುಟ್ಟಿತ್ತು. ಆ ಜನ ಸಂದಣಿಯಲ್ಲಿ ಎಲ್ಲರಿಗಿಂತ ವೃದ್ಧ ತಾಯ್ತಂದೆಯರು ನಿಂತಿದ್ದರು. ಅವರ ಕಂಗಳಲ್ಲಿ ಮುಂದೇನಾಗುವುದೋ ಎಂಬ ಕಾತರತೆ. ಪಾಪಿ ಬ್ರಿಟಿಷರು ತಮ್ಮ ಮಕ್ಕಳನ್ನು ನಿರ್ದಯವಾಗಿ ಗಲ್ಲಿಗೇರಿಸುತ್ತಾರಲ್ಲ ಅನ್ನುವ ದುಗುಡ. ಆದರೂ ಕಣ್ಣಲ್ಲಿ ಹನಿ ನೀರಿಲ್ಲ! ಅಂಥ ಧೀರತನ.
ಹ್ಹ್! ಆ ಎದೆಗಾರಿಕೆ ಬ್ರಿಟಿಷರಿಗಿರಬೇಕಲ್ಲ? ಹೊರಗೆ ನೆರೆದ ಜನ ಸಂದಣಿಯನ್ನು ಕಂಡೇ ನಡುಗಿಹೋಗಿದ್ದರು. ಅವರೆಲ್ಲಿ ಸೆರೆಮನೆಯ ಗೋಡೆ ಒಡೆದು [...]

ಭಾನುವಾರದ ಸುಂದರ ಸಂಜೆ…

Monday, February 18th, 2008

ನಿಜಕ್ಕೂ ಫೆಬ್ರವರಿ ಹದಿನೇಳರ ಭಾನುವಾರದ ಸಂಜೆ ನನಗೆ ಅವಿಸ್ಮರಣೀಯವಾದ ಭಾವ ಜಾಗೃತಿಯ ಸಾರ್ಥಕ ಸಮಯವಾಗಿತ್ತು. ಅತ್ಯಂತ ಉಲ್ಲಾಸದಾಯಕವಾಗಿತ್ತು.
ಹೀಗೆ ನನ್ನನ್ನು ಆಳವಾಗಿ ತಟ್ಟಿದ ಕಾರ್ಯಕ್ರಮದ ಹೆಸರು- “ವಂದೇ ಮಾತರಂ ಗೀತ ಸಂಧ್ಯಾ”
ಮೈತ್ರಿ ಸಂಸ್ಕೃತಿ ಪ್ರತಿಷ್ಟಾನದ ಸಂಸ್ಕೃತೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮಕ್ಕೆ ‘ಭಾರತ ವೈಭವ’ ಶೀರ್ಷಿಕೆಯಡಿಯಲ್ಲಿ ನಿರೂಪಣೆ ಮಾಡುವ ಸೌಭಾಗ್ಯ ನನ್ನ ಪಾಲಿಗೆ ಬಂದಿತ್ತು.
ವಂದೇ ಮಾತರಂ
‘ವಂದೇ ಮಾತರಂ…’ ಈ ಎರಡು ಪದಗಳು ಸಾಕು ಮಿಂಚಿನ ಸಂಚಾರಕ್ಕೆ. ಯಾವ ಎರಡು ಪದಗಳನ್ನು ಉಚ್ಚ ಕಂಠದಲ್ಲಿ ಮೊಳಗಿಸುತ್ತ ಸಾವಿರಾರು ರಾಷ್ಟ್ರ [...]

ಇತಿಹಾಸದ ಪುಟಗಳಲ್ಲಿ ಮುಲಾಜಿನ ಗೋಜಲು

Thursday, February 7th, 2008

ರಾಮಾಯಣದ ಅತ್ಯಂತ ಮಹತ್ವದ ತಿರುವ ಕಂಡ ಪ್ರಸಂಗ ಅದು. ದಶರಥ ತಾನು ಕೈಕೇಯಿಗೆ ಯಾವಗಲೋ ಕೊಟ್ಟ ಮಾತನ್ನು ಈಡೇರಿಸಲಿಕ್ಕಾಗಿ ಪಟ್ಟಾಭಿಷಕ್ತನಾಗಬೇಕಿದ್ದ ರಾಮನನ್ನು ಹದಿನಾಲ್ಕು ವರ್ಷ ವನವಾಸಕ್ಕೆ ತೆರಳುವಂತೆ ಕೇಳಿಕೊಳ್ಳುತ್ತಾನೆ. ರಾಮನೇನೋ ತಂದೆಯ ಆಜ್ಞಾಪಾಲನೆಗೆ ಸಿದ್ಧನಾಗಿಬಿಟ್ಟ. ಆದರೆ ಲಕ್ಷ್ಮಣನ ಮುಖ ಕೆಂಪುಕೆಂಪಾಯಿತು. “ಅಣ್ಣ, ಅಪ್ಪನನ್ನು ಕೊಂದು ರಾಜ್ಯ ವಶಪಡಿಸಿಕೊಳ್ಳೋಣ” ಎಂದ. ರಾಮ ತಮ್ಮನನ್ನು ಸಂತೈಸುತ್ತ, ” ತಂದೆಯ ಮಾತನ್ನು ನಡೆಸಿಕೊದುವುದೆ ಪುತ್ರಧರ್ಮ. ಅದರಲ್ಲಿಯೆ ನಮಗೆ ಶ್ರೇಯಸ್ಸು” ಎಂದುಬಿಟ್ಟ. ತಂದೆಯ ಮಾತಿಗಾಗಿ ರಾಜ್ಯಬಿಟ್ಟು ತೆರಳಿದ ರಾಮ, ಮರಳಿ ಬರುವ ವೇಳೆಗೆ [...]

ಗಾಂಧಿ ಎಂಬ ‘ಮಹಾತ್ಮ’

Saturday, February 2nd, 2008

ಸೋಮನಾಥ ದೇವಾಲಯ ಹಿಂದೂಗಳ ಮೇಲಿನ ಅತ್ಯಾಚಾರದ ಪ್ರತೀಕವಾಗಿ ನಿಂತಿತ್ತು. ಅದನ್ನು ಮತ್ತೆ ನಿರ್ಮಣ ಮಡಿ, ದಾಳಿಕೋರರ ಅತ್ಯಾಚಾರದ ನೆನಪುಗಳನ್ನು ಮೆಟ್ಟಿನಿಲ್ಲುವ ಕೆಲಸ ಆಗಬೇಕಿತ್ತು. ವಿಷಯ ಪ್ರಧಾನಿ ನೆಹರೂ ಬಳಿ ಬಂದಾಗ, ಸರ್ಕಾರ ಒಂದು ಪೈಸೆ ಕೊಡಲಾರದು ಎಂದುಬಿಟ್ಟರು. ಸೋಮನಾಥ ಮಂದಿರ ಕಟ್ಟುವುದರಿಂದ ಮುಸಲ್ಮಾನರಿಗೆ ನೋವಾದೀತೆಂಬ ಭಯ ಅವರಿಗಿತ್ತು. ಗೃಹ ಮಂತ್ರಿ ಪಟೇಲರು ಕಂಗಾಲಾದರು, ಗಾಂಧೀಜಿ ಬಳಿ ಓಡಿದರು. ನೆಹರೂಗೆ ಬುದ್ಧಿ ಹೇಳುವಂತೆ ಗೋಗರೆದರು. ಆಗ ‘ಸೋಮನಾಥ ದೇವಾಲಯ ಹಿಂದೂಗಳ ಶ್ರದ್ಧೆಯ ತಾಣ. ಅದರ ನಿರ್ಮಾಣಕ್ಕೆ ಸರ್ಕಾರ ಹಣ [...]

ಮಗೂ, ಶ್ವೇತಕೇತೂ….

Sunday, January 20th, 2008

ಅಹಂಕಾರದಿಂದ ಬೀಗಿದ ಮಗ
ಅಪ್ಪನೆದುರು ನಿಂತ.
“ತಂದೆ, ನಾ ಎಲ್ಲ ಕಲಿತಿರುವೆ
ನಿನಗಿಂತ ನಾ ತಿಳಿದವನೀಗ”
ಎಂದ.
ಅಪ್ಪ ನಕ್ಕ,
“ಓಹೋ! ಯಾವುದನರಿತು
ಮತ್ತೇನೂ ಕಲಿಯಬೇಕಿಲ್ಲವೋ ಅದನ್ನೂ….
ಅದನ್ನೂ ಅರಿತುಬಿಟ್ಟೆಯಾ!?”
ಮಗ ತಬ್ಬಿಬ್ಬು.
ಅಪ್ಪ ಕೇಳುತ್ತಲೇ ಹೋದ,
ಯಾರು ನೀನು?
ನೀನು ಯಾರು?
ದೇಹ ನೀನಾದರೆ, ನಿನ್ನ ಶವ ನೀನಾ?
ಮನವು ನೀನಾದರೆ, ಬುದ್ಧಿ ಯಾರದು?
ಬುದ್ಧಿ ನೀನಾದರೆ, ಚೈತನ್ಯವದೆಲ್ಲಿ?
ತಿಳಿಯಲಿರುವುದದೆಷ್ಟು?
ಇದನರಿತರೆ ಉಳಿಯುವುದು ಇನ್ನೆಷ್ಟು!?
ಮಗೂ ಶ್ವೇತಕೇತು,
ನಿನ್ನನರಿ.
ನಿನ್ನನರಿ, ನಿನ್ನನರಿ.
ಅದಕ್ಕಾಗಿ ‘ನಿನ್ನ’ ಮರಿ!

ವಾಲ್ ಮಾರ್ಟ್ ಮತ್ತು ಇತಿಹಾಸದ ಪಾಠ…

Friday, January 11th, 2008

ಎಲ್ಲರಿಗೂ ನಮಸ್ತೇ.
ವಿಕ್ರಮ್ ಹತ್ವಾರ್ ಅವರು ತಮ್ಮ ಕಮೆಂಟಿನಲ್ಲಿ ವಾಲ್ ಮಾರ್ಟ್ ಬಗ್ಗೆ ಮಾತನಾಡಿದ್ದರು. ಹೀಗೆ ವಾಲ್ ಮಾರ್ಟ್ ವಿಷಯ ಬಂದಾಗ ನಾನು ಹೇಳಲೇಬೇಕಾದ ಒಂದಷ್ಟಿದೆ. ಅದನ್ನೀಗ ಇಲ್ಲಿ ನಿಮ್ಮೆದುರಿಡುವೆ.
ನಿಮ್ಮಲ್ಲಿ ಬಹುತೇಕರಿಗೆ ಶೂ ಕಂಪೆನಿಯ ಸೇಲ್ಸ್ ಮನ್ ಗಳಿಬ್ಬರು ಆಫ್ರಿಕಾಕ್ಕೆ ಹೋದ ಹಳೆಯ ಕಥೆ ಗೊತ್ತಿರಬಹುದು.
ಹಾಗೆ ಹೋದ ಇಬ್ಬರಲ್ಲಿ ಒಬ್ಬ ವಾಪಸು ಬಂದು ಮ್ಯಾನೇಜರನ ಬಳಿ ದೂರಿದ. “ಅಲ್ಲಿನ ಜನರಿಗೆ ಶೂ ಅಂದರೇನೆಂದೇ ಗೊತ್ತಿಲ್ಲ, ಅಲ್ಲಿ ವ್ಯಾಪಾರ ಕಷ್ಟ!” ಸ್ವಲ್ಪ ಹೊತ್ತಿನಲ್ಲೇ ಮತ್ತೊಬ್ಬ ಏದುಸಿರು ಬಿಡುತ್ತಾ ಬಂದು ಹೇಳಿದ, [...]

ರಾಮಕೃಷ್ಣಾಶ್ರಮದಲ್ಲಿ ಪುಸ್ತಕ (ಪ್ರ)ದರ್ಶನ

Sunday, January 6th, 2008

ಸ್ವಾಮಿ ವಿವೇಕಾನಂದ! ಅದು ಬರಿಯ ಹೆಸರಲ್ಲ. ಅದೊಂದು ಶಕ್ತಿ. ಅಸೀಮ ಸ್ಫೂರ್ತಿ. ಅವರನ್ನು ಆಲಿಸುತ್ತ, ಅವರು ನಡೆದು ತೋರಿದ ದಾರಿಯಲ್ಲಿ ಹೆಜ್ಜೆಗಳನ್ನಿಡುತ್ತ ನಡೆದು ಬದುಕಿನ ಉನ್ನತ ಮಜಲುಗಳಿಗೇರಿದ ಯುವಕರ ಸಂಖ್ಯೆ ಅದೆಷ್ಟೋ… ಅದು ರಾಷ್ಟ್ರ ಪ್ರೇಮದ ಮಾತಾಗಿರಲಿ, ಸಮಾಜ ಸೇವಾ ಕ್ಷೇತ್ರವಿರಲಿ, ಅಥವಾ ಸಾಹಿತ್ಯ ಕ್ಷೇತ್ರವೇ ಆಗಿರಲಿ… ಎಲ್ಲೆಲ್ಲೂ ಹೊಸ ಹುಮ್ಮಸ್ಸಿನ ಅಲೆ ಎಬ್ಬಿಸುತ್ತ ಉತ್ಕೃಷ್ಟತೆಯ ಪತಾಕೆ ಹಾರಿಸುತ್ತ ಮೆರೆಯುವ ಏಕೈಕ ಹೆಸರು, ಸ್ವಾಮಿ ವಿವೇಕಾನಂದ.
ನಾವು ಮಾಡುವ ಯಾವುದೇ ಕೆಲಸದಲ್ಲಿ ಪರಿಪೂರ್ಣತೆ ಸಾಧಿಸಲು ವಿವೇಕಾನಂದರ ಮಾತುಗಳು ಸಮರ್ಥ [...]

ಅನುಭಾವ ಬಿಂದುಗಳು…

Wednesday, January 2nd, 2008

- 1 - 
ಕಾಣದ ನಿನ್ನ
ಅರಸಿ ಅರಸಿಯೇ ಬೇಸತ್ತೆ.
ಊಹೂಂ…!
ಇಲ್ಲಿಯೂ ದಕ್ಕಲಿಲ್ಲ
ಅಲ್ಲೂ ದಕ್ಕಲಿಲ್ಲ.
ಮಾಡಿಟ್ಟ ಅಡುಗೆಯ ಬಿಟ್ಟು
ಭಿಕ್ಷಾಟನೆಗೆ
ಹೋಗಿದ್ದೇ ತಪ್ಪಾಯಿತೇನೋ?
- 2 -
ಮಾತಿಗೆ ನಿಲುಕದವನು
ಎನ್ನುತ್ತಲೇ
ಮಾತಾಡುತ್ತಾರೆ
ನಿನ್ನ ಬಗ್ಗೆ
ರೇಜಿಗೆ ಹುಟ್ಟುವುಷ್ಟು
ನಿನ್ನ ಕಂಡ ಮೇಲೆ
ಮಾತಾಡಲು
ಅವರಿಗೆ ಅದೆಲ್ಲಿ
ಪುರುಸೊತ್ತು!?
- 3 - 
ಹೂವು ಚೆಂದ, ಸುಂದರ
ಅನ್ನುತ್ತಲೇ ಉಳಿದೆವು,
ದುಂಬಿ ಹೀರಿತು ಮಕರಂದ.
ನಿನ್ನ ಬಗ್ಗೆ
ಹೇಳಿದ್ದೇ ಬಂತು,
ಅವ ಸವಿದ ನಿನ್ನಂದ!
- 4 - 
ಬದುಕಿಗಿಂತ ಸಾವೇ ಮೇಲು
ಅನ್ನುತ್ತಾರೆ ಕೆಲವರು.
ಬದುಕಿನ ಸವಿ ಹೀರಲಾಗದೆ,
ಸಾವಿನ ಸಾಹಸ ಮಾಡಲಾಗದೆ
ನಿತ್ಯ ಸಾಯುತ್ತಾರೆ,
ಬದುಕಿದ್ದೂ ಸತ್ತಂತಿರುತ್ತಾರೆ.
- 5 - 
ಹುಟ್ಟಿದೊಡನೆ ಅಮ್ಮನ್ನ ಕಳಕೊಂಡೆ
ಅವಳು ಹಾಲೂಡಿಸಿದ್ದರೆ,
ಈ ಅಲ್ಕೋಹಾಲು ನಾನೇಕೆ ಕುಡಿಯುತ್ತಿದ್ದೆ?
ಹಾಗಂತ ಹಲುಬುತ್ತಲೇ ಇದ್ದೆ.
ನೆನ್ನೆಯಷ್ಟೇ ಸಮಾಧಾನವಾಯಿತು
ಬಾರಿನ ನನ್ನ ಟೇಬಲ್ಲ ಪಕ್ಕದಲ್ಲಿ
ಪಾರ್ಟಿ [...]