ವಿಭಾಗಗಳು

ಸುದ್ದಿಪತ್ರ


 

Archive for June, 2015

ಒಮ್ಮೆ ಸತ್ತ ಮೇಲೆ ಮತ್ತೆ ಹುಟ್ಟುತ್ತೇವಾ?

Monday, June 29th, 2015

‘ಅಧ್ಯಾತ್ಮ ಚರ್ಚೆ’ ಅಂತೇನಾದರೂ ಅಂದರೆ ಅನೇಕರು ಆಗಿಂದಾಗ್ಯೆ ಕಿವಿ ಕಣ್ಣುಗಳನ್ನು ಮುಚ್ಚಿಕೊಂಡು ಜಾಗ ಖಾಲಿ ಮಾಡಿಬಿಡುತ್ತಾರೆ. ಆದರೆ ಚರ್ಚೆ ಮಾಡಲಿ, ಬಿಡಲಿ.. ಆತ್ಮದಿಂದಲೇ ಜಗತ್ತು ವ್ಯಾಪ್ತಗೊಂಡಿರುವುದನ್ನು ಮರೆತೇಬಿಡುತ್ತಾರೆ. ಒಂದೇ ಒಂದು ನಿಮಿಷ ಸುಮ್ಮನೆ ಕಣ್ಮುಚ್ಚಿ ಕುಳಿತುಕೊಂಡು ನಾನು ಹೇಳುವ ವಿಚಾರಗಳ ಕುರಿತಂತೆ ಆಲೋಚಿಸಿ. ನೀವು ಖಂಡಿತ ಅಚ್ಚರಿಗೊಳಗಾಗುವಿರಿ. ನಮ್ಮ ಸುತ್ತಲೂ ನಡೆಯುವ ಅನೇಕ ಸಂಗತಿಗಳನ್ನು ವಿಜ್ಞಾನ ಆಕಸ್ಮಿಕವೆಂದು ಕರೆದು ಬದಿಗಿಟ್ಟುಬಿಟ್ಟಿದೆ. ಉದಾಹರಣೆಗೆ, ಭೂಮಿಯೇ ಮೊದಲಾದ ಗ್ರಹಗಳು ಸೂರ್ಯನ ಸುತ್ತ ಸುತ್ತುವುದಲ್ಲ ಹಾಗೆ ಎಲ್ಲ ಗ್ರಹಗಳನ್ನು ಅಧೀನದಲ್ಲಿ ಇಟ್ಟುಕೊಂಡು […]

ಧೀಶಕ್ತಿ ಪ್ರಚೋದಕನಿಗೆ ಕೋಟಿ ನಮಸ್ಕಾರ…

Monday, June 22nd, 2015

“ಬೆಳಗ್ಗೆ ಎಷ್ಟು ಗಂಟೆಗೆ ಏಳಬೇಕು?” ಹಾಗಂತರಾಮಕೃಷ್ಣಆಶ್ರಮದ ಸ್ವಾಮಿ ಪುರುಷೋತ್ತಮಾನಂದರನ್ನು ಭಕ್ತರೊಬ್ಬರು ಕೇಳಿದರಂತೆ. ಸ್ವಾಮೀಜಿತಮ್ಮ ಎಂದಿನ ಧಾಟಿಯಲ್ಲಿ, “ಎಷ್ಟು ಗಂಟೆಗಾದರೂ ಎದ್ದೇಳಿ, ಎದ್ದ ಮೇಲೆ ಪೂರ್ಣವಾಗಿಎದ್ದಿರಿ”ಎಂದಿದ್ದರಂತೆ. ಅದೂ ಸತ್ಯವೇ. ಏಳುವುದು ಅಂದರೆ ಹಾಸಿಗೆ ಬಿಟ್ಟು ಏಳುವುದು ಅಂತಲ್ಲ. ದೇಹದ ಪ್ರತಿಯೊಂದುಜೀವಕೋಶವೂ ಚೈತನ್ಯಶೀಲಗೊಳ್ಳುವುದು ಎಂದರ್ಥ. ಮಲಗುವ ಕೋಣೆಯನ್ನುಕತ್ತಲ ಕೂಪವಾಗಿಸಿ, ಕೆಲಸದಕಚೇರಿಯನ್ನು ಸದಾ ಬೆಳಕಿನ ಗೋಳವಾಗಿಸಿ ಹಗಲು ರಾತ್ರಿಗಳ ಕಲ್ಪನೆಯನ್ನೇ ಕಳೆದುಕೊಂಡಿರುವ ನಮಗೆ ಋಷಿ ಮುನಿಗಳು ಉಲ್ಲೇಖ ಮಾಡಿರುವ ಅನೇಕ ಸಂಗತಿಗಳನ್ನು ಅರ್ಥೈಸಿಕೊಳ್ಳುವುದು ಬಿಡಿ, ಕಲ್ಪಿಸಿಕೊಳ್ಳುವುದೂ ಅಸಾಧ್ಯ. ಧ ನಾವು ಬ್ರಾಹ್ಮೀ […]

ನಾಶದೊಳಗೇ ಮರುಹುಟ್ಟಿನ ಬೀಜ ಅಡಗಿದೆ!

Wednesday, June 17th, 2015

ಕೊಲ್ಲುವವನಿಗೆ ಅದೊಂದು ಚಟ. ಮೊದಮೊದಲು ಶತ್ರುಗಳನ್ನು ಹುಡುಹುಡುಕಿ ಕೊಲ್ಲುತ್ತಾನೆ. ಹಾಗೆ ಗುರುತಿಸಬಲ್ಲವರು ಖಾಲಿಯಾದ ಮೇಲೆ ಎದುರಿಗಿರುವವರನ್ನೆ ಶತ್ರುಗಳೆಂದು ಭಾವಿಸುತ್ತಾನೆ. ಈಗ ಅವರ ಮಾರಣ ಹೋಮ. ತಾನು ಮಾಡುವ ಕೊಲೆಗೆ ಕಾರಣ ಹೇಳಿದರಾಯ್ತು. ಹೌದು. ನೀವು ಸರಿಯಾಗಿಯೇ ಊಹಿಸಿದಿರಿ. ಜಾಗತಿಕವಾಗಿ ಇಸ್ಲಾಮ್ ಈಗ ಎರಡನೆ ಹಂತ ತಲುಪಿಬಿಟ್ಟಿದೆ. ಮೊದಲೆಲ್ಲ ಅವರಿಗೆ ಸಂಖ್ಯೆ ವೃದ್ಧಿಸಿಕೊಳ್ಳುವ ಹಠವಿತ್ತು. ಅದಕ್ಕಾಗಿ ತಮ್ಮೊಡನೆ ಸೇರದವರನ್ನು ಕೊಂದರು. ಕೊಲ್ಲುವುದು ಚಟವಾದ ಮೇಲೆ ಈಗ ತಮ್ಮವರದೇ ಸಾವಿನ ದಾಹ ಶುರುವಾಯ್ತು. ಅಲ್ ಕೈದಾ, ಒಸಾಮ ಬಿನ್ ಲಾದೆನ್‍ನ […]

ಸರ್ವಾಂತರ್ಯಾಮಿ, ಸರ್ವಪ್ರೇರಕ ಸೂರ್ಯ

Monday, June 15th, 2015

ಕಾಲ ಗಣನೆಯ ಚರ್ಚೆ ಬಂದಾಗ ಜಗತ್ತಿನ ಯಾವ ವಿಜ್ಞಾನಿಯೂ ಭಾರತವನ್ನು ಕಡೆಗಣಿಸುವುದು ಸಾಧ್ಯವೇ ಇಲ್ಲ. ಈ ವಿಚಾರದಲ್ಲಿ ಜಗತ್ತಿನ ಆಧುನಿಕ ಮತಗಳೂ, ಮತ ಗ್ರಂಥಗಳೂ ಹಿಂದೂ ಚಿಂತನೆಗಳಿಗಿಂತ ಬಲು ಹಿಂದು! ಅನುಮಾನವೇ ಇಲ್ಲ. ‘ವಿಶ್ವದ ಕೇಂದ್ರ ಭೂಮಿ. ಸೂರ್ಯನೂ ಇದೇ ಭೂಮಿಯನ್ನು ಸುತ್ತುತ್ತಾನೆ’ ಹಾಗಂತ ಸೆಮೆಟಿಕ್ ಮತಗಳು ನಂಬಿದ್ದವು.  ದೇವರ ಮಕ್ಕಳು, ಪ್ರವಾದಿಗಳು ಇಲ್ಲಿ ಹುಟ್ಟುತ್ತಾರೆಂದರೆ ಇದೇ ಸರ್ವಶ್ರೇಷ್ಠವಾಗಿರಬೇಕೆಂಬ ಸಹಜ ಸಿದ್ಧಾಂತ ಅದು. ಜೊತೆಗೆ ಬೆಳಗಾಗಿ ಎದ್ದಾಗ ಪೂರ್ವಕ್ಕೆ ಕಾಣುವ ಸೂರ್ಯ ಸಂಜೆಯಾಗುವಾಗ ಪಶ್ಚಿಮದಲ್ಲಿ ಅಸ್ತಂಗತನಾಗುತ್ತಾನೆ. ಸಾಮಾನ್ಯನಾದ […]

ನಮೋ ಬ್ರಿಗೇಡಿನ ಆ ಒಂದು ವರ್ಷದ ನೆನಪು

Wednesday, June 10th, 2015

ನರೇಂದ್ರ ಮೋದಿ ಪ್ರಧಾನಿ ಗದ್ದುಗೆಯಲ್ಲಿ ಕೂತು ಬರೋಬ್ಬರಿ ಒಂದು ವರ್ಷವಾಯ್ತು. ಎಲ್ಲರೂ ಒಂದು ವರ್ಷದ ಅವರ ಸಾಧನೆ, ತಿರುಗಾಟ, ಕೊರತೆ, ಗೆದ್ದಿದ್ದು – ಎಡವಿದ್ದು ಎಲ್ಲವನ್ನೂ ವಿಶ್ಲೇಷಿಸುತ್ತಿದ್ದಾರೆ. ವರ್ಷ ಏಕ, ಸಾಧನೆ ಅನೇಕ ಎನ್ನುವ ಹೆಸರಲ್ಲಿ ಕೇಂದ್ರ ಸರ್ಕಾರದ ಜಾಹೀರಾತುಗಳು ಎಲ್ಲಡೆ ರಾರಾಜಿಸುತ್ತಿವೆ. ನಾನು ಅವುಗಳನ್ನೆ ಮತ್ತೆ ನಿಮ್ಮ ಮುಂದಿರಿಸಲು ಬಯಸುವುದಿಲ್ಲ. ನನ್ನ ಮನಸ್ಸು ಸುಮಾರು ಎರಡು ವರ್ಷಗಳ ಹಿಂದೋಡುತ್ತದೆ. ಆಗಿನ್ನೂ ಮನಮೋಹನ ಸಿಂಗರು ಅಧಿಕಾರದಲ್ಲಿದ್ದರು. ಹತ್ತು ವರ್ಷಗಳಲ್ಲಿ ಹತ್ತಾರು ಹಗರಣಗಳ ಮೂಲಕ ಈ ಹಿಂದಿನ ಕಾಂಗ್ರೆಸ್ […]

ಪುರಾಣಗಳೆಂದು ಜರಿಯದಿರಿ! ~ ವಿಶ್ವಗುರು 12

Monday, June 8th, 2015

‘ಶಿವ’ ಯಾವಾಗಲೂ ಕಾಡುವ ದೇವರೇ. ಅವನ ಆಕಾರ, ಬಣ್ಣ, ವೇಷ, ವಾಸ ಸ್ಥಳ, ಆಭರಣ ಇವ್ಯಾವುವೂ ಸರಳವಾದುದಲ್ಲ. ಅತ್ಯಂತ ಗೂಢವಾದುದೇನನ್ನೋ ವಿವರಿಸುವ ಪ್ರಯತ್ನ ಅದರ ಹಿಂದಿದೆ. ಕೊರಳಲ್ಲಿ ಹಾವು, ಮೈ ಪೂರಾ ಭಸ್ಮ, ಸೊಂಟಕ್ಕೆ ವ್ಯಾಘ್ರ ಚರ್ಮ, ಕತ್ತಲ್ಲಿ ರುಂಡ ಮಾಲೆ. ತಲೆಯ ಮೇಲೆ ಗಂಗೆ, ಹಣೆಯಲ್ಲಿ ಉರಿವ ಕಣ್ಣು. ಸ್ಮಶಾನ ವಾಸಿ, ಹಿಮಾಲಯದ ಒಡೆಯ. ಉಫ್.. ಎಲ್ಲವೂ ವಿಚಿತ್ರ. ಆತನ ಲಿಂಗ ರೂಪವಂತೂ ಅನೇಕ ವೈಜ್ಞಾನಿಕ ಸತ್ಯಗಳ ಮೂರ್ತ ರೂಪ. ಅಲ್ಲದೆ ಮತ್ತೇನು? ಪ್ರಳಯ ಕಾಲದಲ್ಲಿ […]

ನಟರಾಜ ನರ್ತನದ ಚಿದಂಬರ ರಹಸ್ಯ!

Monday, June 1st, 2015

‘ಕಣ್ಣಿನಿಂದ ನೋಡಿದ್ದು ಮಾತ್ರ ಸತ್ಯ’ – ಹಾಗಂತ ಅನೇಕರು ವಾದಿಸುತ್ತಾರೆ. ಅಚ್ಚರಿ ಏನು ಗೊತ್ತೆ? ಕಣ್ಣು ತನ್ನನ್ನು  ತಾನು ನೋಡಿಯೇ ಇಲ್ಲ! ಚರ್ಮಕ್ಕೆ ಸ್ಪರ್ಶಾನುಭೂತಿ ಬೇಕೆಂದರೆ ಮತ್ತೊಂದರ ಸಂಪರ್ಕ ಬೇಕೇಬೇಕು. ನಾಲಗೆಯ ರುಚಿ ಸ್ವತಃ ನಾಲಗೆಗೆ ಗೊತ್ತಿಲ್ಲ. ಹೀಗೆ ಐದು ಇಂದ್ರಿಯಗಳೂ ಒಟ್ಟಿಗೆ ಗ್ರಹಿಸಲಾಗದ ಅನೇಕ ಸಂಗತಿಗಳಿವೆ. ಅದರ ಹುಡುಕಾಟವೇ ಭಾರತದ ಶ್ರೇಷ್ಠತೆಯ ಮೂಲ ವಸ್ತು. ಕೇನೋಪನಿಷತ್ತಿನಲ್ಲಿ ಋಷಿಗಳು ಸ್ಪಷ್ಟಪಡಿಸುತ್ತಾರೆ – “ಅಲ್ಲಿಗೆ ಕಣ್ಣು ಹೋಗಲಾರದು, ಮಾತೂ ಇಲ್ಲ. ಮನಸ್ಸೂ ಹೋಗುವುದಿಲ್ಲವಾದ್ದರಿಂದ ಇದನ್ನು ಹೇಗೆ ತಿಳಿಸಿಕೊಡಬೇಕೋ ಗೊತ್ತಾಗುತ್ತಿಲ್ಲ” […]