<?xml version="1.0" encoding="UTF-8"?>
<rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Viveka Bharata &#187; ದಿಲ್ ಹೈ ಹಿಂದೂಸ್ಥಾನಿ</title>
	<atom:link href="http://vivekabharata.net/category/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/feed/" rel="self" type="application/rss+xml" />
	<link>http://vivekabharata.net</link>
	<description></description>
	<lastBuildDate>Sat, 12 May 2012 09:09:17 +0000</lastBuildDate>
	<language>en</language>
	<sy:updatePeriod>hourly</sy:updatePeriod>
	<sy:updateFrequency>1</sy:updateFrequency>
	<generator>http://wordpress.org/?v=3.3.1</generator>
		<item>
		<title>ಕಾಶ್ಮೀರವಿಂದು ಹೊತ್ತುರಿಯುತ್ತಿರುವುದು ಏಕೆ ಗೊತ್ತೆ?</title>
		<link>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%95%e0%b2%be%e0%b2%b6%e0%b3%8d%e0%b2%ae%e0%b3%80%e0%b2%b0%e0%b2%b5%e0%b2%bf%e0%b2%82%e0%b2%a6%e0%b3%81-%e0%b2%b9%e0%b3%8a%e0%b2%a4%e0%b3%8d%e0%b2%a4%e0%b3%81%e0%b2%b0%e0%b2%bf%e0%b2%af%e0%b3%8-2/</link>
		<comments>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%95%e0%b2%be%e0%b2%b6%e0%b3%8d%e0%b2%ae%e0%b3%80%e0%b2%b0%e0%b2%b5%e0%b2%bf%e0%b2%82%e0%b2%a6%e0%b3%81-%e0%b2%b9%e0%b3%8a%e0%b2%a4%e0%b3%8d%e0%b2%a4%e0%b3%81%e0%b2%b0%e0%b2%bf%e0%b2%af%e0%b3%8-2/#comments</comments>
		<pubDate>Thu, 15 Jan 2009 05:00:01 +0000</pubDate>
		<dc:creator>admin</dc:creator>
				<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>
		<category><![CDATA[ಕಾಶ್ಮೀರ]]></category>
		<category><![CDATA[ನೆಹರೂ]]></category>

		<guid isPermaLink="false">http://neladamaatu.wordpress.com/?p=86</guid>
		<description><![CDATA[ನೆಹರೂ `ಜಾತ್ಯತೀತ’ ಮನಸಿನ ಬಗ್ಗೆ ಈಗಾಗಲೇ ತಿಳಿದಿದ್ದಾಗಿದೆ.  ಪರಧರ್ಮ ಸಹಿಷ್ಣುತೆ ಹಿಂದೂವಿನ ಪರಮಗುಣ. ಆದರೆ ಜಾತ್ಯತೀತತೆಯ ಹಿನ್ನೆಲೆಯಲ್ಲಿ ಅವರ ಮನದಲ್ಲಿ ಹಿಂದೂ ದ್ವೇಷ ಮನೆ ಮಾಡಿತ್ತಲ್ಲ ಅದನ್ನು ಮಾತ್ರ ಸಹಿಸುವುದು ಸಾಧ್ಯವೇ ಇಲ್ಲ. ಕಾಶ್ಮೀರದ ವಿಚಾರದಲ್ಲಾದದ್ದೂ ಅದೇ. ನೆಹರೂರ ಮೊಂಡುತನ ಇಡೀ ಕಾಶ್ಮೀರವನ್ನು ಉರಿಯುವ ಕುಂಡವಾಗಿಸಿಬಿಟ್ಟಿತು. ಸ್ವಾತಂತ್ರ್ಯಾನಂತರ ಸರ್ದಾರ ಪಟೇಲರು ರಾಜ್ಯವಿಲೀನ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡು ಅದನ್ನು ಯಶಸ್ವಿಯಾಗಿ ಮುಗಿಸಿದರು. ಹೈದರಾಬಾದ್‌ನ ನಿಜಾಮ ಕೂಡ ಮಿಸುಕಾಡದೇ ಶರಣಾಗುವಂತೆ ಮಾಡಿದ್ದು ಪಟೇಲರ ಬುದ್ಧಿಮತ್ತೆಗೆ ಸಾಕ್ಷಿ. ನೆಹರೂ ಕಾಶ್ಮೀರದ ವಿಲೀನವನ್ನು ತಾನೇ ಮಾಡುವುದಾಗಿ [...]]]></description>
			<content:encoded><![CDATA[<p>ನೆಹರೂ `ಜಾತ್ಯತೀತ’ ಮನಸಿನ ಬಗ್ಗೆ ಈಗಾಗಲೇ ತಿಳಿದಿದ್ದಾಗಿದೆ.  ಪರಧರ್ಮ ಸಹಿಷ್ಣುತೆ ಹಿಂದೂವಿನ ಪರಮಗುಣ. ಆದರೆ ಜಾತ್ಯತೀತತೆಯ ಹಿನ್ನೆಲೆಯಲ್ಲಿ ಅವರ ಮನದಲ್ಲಿ ಹಿಂದೂ ದ್ವೇಷ ಮನೆ ಮಾಡಿತ್ತಲ್ಲ ಅದನ್ನು ಮಾತ್ರ ಸಹಿಸುವುದು ಸಾಧ್ಯವೇ ಇಲ್ಲ. ಕಾಶ್ಮೀರದ ವಿಚಾರದಲ್ಲಾದದ್ದೂ ಅದೇ. ನೆಹರೂರ ಮೊಂಡುತನ ಇಡೀ ಕಾಶ್ಮೀರವನ್ನು ಉರಿಯುವ ಕುಂಡವಾಗಿಸಿಬಿಟ್ಟಿತು. ಸ್ವಾತಂತ್ರ್ಯಾನಂತರ ಸರ್ದಾರ ಪಟೇಲರು ರಾಜ್ಯವಿಲೀನ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡು ಅದನ್ನು ಯಶಸ್ವಿಯಾಗಿ ಮುಗಿಸಿದರು. ಹೈದರಾಬಾದ್‌ನ ನಿಜಾಮ ಕೂಡ ಮಿಸುಕಾಡದೇ ಶರಣಾಗುವಂತೆ ಮಾಡಿದ್ದು ಪಟೇಲರ ಬುದ್ಧಿಮತ್ತೆಗೆ ಸಾಕ್ಷಿ. ನೆಹರೂ ಕಾಶ್ಮೀರದ ವಿಲೀನವನ್ನು ತಾನೇ ಮಾಡುವುದಾಗಿ ಪಣತೊಟ್ಟು ಅದನ್ನು ಉತ್ತರಿಸಲಾಗದ ಪ್ರಶ್ನೆಯಾಗಿ ಉಳಿಸಿಬಿಟ್ಟರು! ಕಾಶ್ಮೀರ ಮಹಾರಾಜ ಹರಿಸಿಂಗರ ರಾಜ್ಯವಾಗಿತ್ತು. ಅಲ್ಲಿನ ಪ್ರಜೆಗಳಲ್ಲಿ ಬಹುಪಾಲು ಮುಸಲ್ಮಾನರೇ. ಮುಸಲ್ಮಾನರನ್ನು ಆಳುವ ಹಿಂದೂ ರಾಜ ಎಂದರೆ ನೆಹರೂರ ಜಾತ್ಯತೀತ ಮನಸ್ಸು ಸಹಿಸುವುದು ಹೇಗೆ ಹೇಳಿ. ಅವರು ಮೊದಲಿನಿಂದಲೂ ರಾಜನ ವಿರೋಧಿ ಬಣದಲ್ಲೇ ನಿಂತಿದ್ದರು. ಅತ್ತ ಕಾಶ್ಮೀರದಲ್ಲಿ ಮಹಾರಾಜರನ್ನು ಪಟ್ಟದಿಂದಿಳಿಸಿ, ರಾಜ್ಯವನ್ನೇ ಪಾಕಿಸ್ಥಾನದೊಂದಿಗೆ ವಿಲೀನಗೊಳಿಸಬೇಕೆಂಬ ತವಕ ನೆಹರೂರ ಆಪ್ತಮಿತ್ರ ಶೇಕ್ ಮೊಹಮ್ಮದ್ ಅಬ್ದುಲ್ಲಾರಿಗಿತ್ತು. ನ್ಯಾಶನಲ್ ಕಾನ್ಫರೆನ್ಸ್ ಎಂಬ ಪಾರ್ಟಿಯನ್ನು ಹುಟ್ಟುಹಾಕಿ ಅದರ ಮೂಲಕ ಮಹಾರಾಜರಿಗೆ ‘ಕಾಶ್ಮೀರ ಬಿಟ್ಟು ತೊಲಗಿ’ ಎನ್ನುವ ಆದೇಶ ನೀಡುವ ಚಳವಳಿಯನ್ನು ಶೇಕ್ ಸಾಹೇಬರು ಆರಂಭಿಸಿದ್ದರು. ‘ನಾವು ಈವರೆಗೂ ನೊಂದಿದ್ದು ಸಾಕು. ಪ್ರತಿಭಟಿಸುವ ಸಮಯ ಬಂದೇಬಿಟ್ಟಿದೆ. ನಾವೆಲ್ಲ ಗುಲಾಮಿತನದ ವಿರುದ್ಧ ಹೋರಾಡಲು ಜಿಹಾದಿನ ಸೈನಿಕರಾಗಬೇಕು. ಗಂಡು-ಹೆಣ್ಣು-ಮಕ್ಕಳು-ವೃದ್ಧರು ಯಾವೊಂದೂ ಭೇದವಿಲ್ಲದೇ ಪ್ರತಿಯೊಬ್ಬರೂ ಕಾಶ್ಮೀರ ಬಿಟ್ಟು ತೊಲಗುವ ಘೋಷಣೆ ಕೂಗಬೇಕು. ಕಾಶ್ಮೀರ ರಾಷ್ಟ್ರ ನಿರ್ಮಾಣವಾಗಬೇಕು’ ಎಂಬ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದರು! ಈ ಮಾತುಗಳಿಂದ ಕುಪಿತರಾದ ಮಹಾರಾಜರು, ರಾಜದ್ರೋಹದ ಆಪಾದನೆಯ ಮೇಲೆ ಶೇಕ್ ಅಬ್ದುಲ್ಲಾ ಮತ್ತು ಅವರ ಪಕ್ಷದ ಇತರ ಸದಸ್ಯರನ್ನು ಬಂಧಿಸಿ ಸೆರೆಮನೆಗೆ ತಳ್ಳಿದರು. ನೆಹರೂ ಕೋಪಾವಿಷ್ಟರಾದರು. ಗೆಳೆಯನನ್ನು ಜೈಲಿಗೆ ಅಟ್ಟುವುದನ್ನು ಸಹಿಸುವುದಾದರೂ ಹೇಗೆ? ಕೂಡಲೇ ನೆಹರೂ ಮಹಾರಾಜರಿಗೆ ಪಂಥಾಹ್ವಾನವಿತ್ತರು! ಈ ಬಂಧನದ ವಿರುದ್ಧ ಪ್ರತಿಭಟಿಸಲಿಕ್ಕಾಗಿಯೇ, ಕಾಶ್ಮೀರ ಗಡಿಯನ್ನು ದಾಟುತ್ತೇನೆಂದು ಘೋಷಿಸಿಬಿಟ್ಟರು. ಮಹಾರಾಜರು ನಿಷೇಧ ಹೇರಿದ ನಂತರವೂ ಕಾಶ್ಮೀರ ಗಡಿ ದಾಟಿದ ಉದ್ಧಟತನಕ್ಕಾಗಿ ಅವರು ನೆಹರೂರನ್ನು ಬಂಧಿಸಲೇಬೇಕಾಯಿತು.</p>
<p>ಮೊದಲೇ ವೈಮನಸ್ಸುಗಳ ಆಗರವಾಗಿದ್ದ ನೆಹರೂ &#8211; ಮಹಾರಾಜರ ಸಂಬಂಧ ಈಗ ಮತ್ತಷ್ಟು ಹದಗೆಟ್ಟಿತು. ಆದರೆ ಕಾಂಗ್ರೆಸ್ಸಿನ ಕಾರ್ಯಕಾರಿ ಸಮಿತಿ ನೀಡಿದ ತೀಕ್ಷ್ಣ ಆದೇಶದಿಂದಾಗಿ ನೆಹರೂ ಕಾಶ್ಮೀರದಿಂದ ಅನಿವಾರ್ಯವಾಗಿ ಮರಳಬೇಕಾಯಿತು. ದೇಶದ ಮಹಾನಾಯಕರುಗಳ ಕೃಪಾಕಟಾಕ್ಷವಿದ್ದ ನೆಹರೂರ ಆಟವೇ ಮಹಾರಾಜರ ಮುಂದೆ ಸಾಗದಿದ್ದಾಗ ಇನ್ನು ತನ್ನದೇನು ಲೆಕ್ಕ? ಎಂದರಿತ ಶೇಕ್ ಅಬ್ದುಲ್ಲಾ ಮಹಾರಾಜರಿಗೊಂದು ಕ್ಷಮಾಪಣಾ ಪತ್ರ ಬರೆದರು. ‘ನಾನು ಮಹಾರಾಜರಿಗೆ ವೈಯಕ್ತಿಕವಾಗಿ ಅಥವಾ ಸಿಂಹಾಸನಕ್ಕೆ ಯಾವುದೇ ದ್ರೋಹ ಬಗೆದಿಲ್ಲವೆಂದು ಈ ಮೂಲಕ ದೃಢಪಡಿಸುತ್ತೇನೆ. ಇನ್ನು ಮುಂದೆ ‘ನನ್ನ ಮತ್ತು ಸಂಘಟನೆಯ ಸಂಪೂರ್ಣ ಸಹಕಾರವನ್ನು ನಿಮಗೆ ನೀಡುತ್ತೇನೆ. ಯಾವುದೇ ವ್ಯಕ್ತಿ ಅಥವಾ ಸಂಘಟನೆ ಮಹಾರಾಜರ ಅಥವಾ ರಾಜ್ಯದ ವಿರುದ್ಧ ಕೆಲಸ ಮಾಡಿದರೆ ಅಂತಹವರನ್ನೇ ನಮ್ಮ ಬದ್ಧವೈರಿಗಳೆಂದು ಭಾವಿಸುತ್ತೇವೆ’ ಎಂದೂ ಹೇಳಿಕೊಂಡರು. ಇತ್ತ ಕಾಶ್ಮೀರಿಗಳೇ ಗೌರವಿಸದ ನ್ಯಾಶನಲ್ ಕಾನ್ಫರೆನ್ಸ್‌ನ್ನು ರಾಷ್ಟ್ರೀಯ ಸ್ತರಕ್ಕೇರಿಸುವ ಮೂರ್ಖ ಸಾಹಸವನ್ನು ನೆಹರೂ ಶುರುವಿಟ್ಟಿದ್ದರು. ‘ಶೇಕ್ ಅಬ್ದುಲ್ಲಾರ ನ್ಯಾಶನಲ್ ಕಾನ್ಫರೆನ್ಸ್ ನಿಜವಾಗಲೂ ರಾಷ್ಟ್ರೀಯ ಸಂಸ್ಥೆ. ಹೀಗಾಗಿಯೇ ಕಾಶ್ಮೀರಿ ಪಂಡಿತರು ಶೇಕ್ ಅಬ್ದುಲ್ಲಾರೊಂದಿಗೆ ಕೈಜೋಡಿಸಿದರೆ ಮಾತ್ರ ಅವರ ಮಾತಿಗೆ ಬೆಲೆ ಬರುತ್ತದೆ.ಇಲ್ಲವಾದಲ್ಲಿ ಅವರನ್ನು ರಕ್ಷಿಸುವವರು ಯಾರೂ ಇರುವುದಿಲ್ಲ’ ಎಂದು ಆಗಾಗ ಹಲುಬುತ್ತಲೇ ಇರುತ್ತಿದ್ದರು. ಸ್ವತಃ ಪಂಡಿತರ ಕುಲದವರಾಗಿ, ಕಾಶ್ಮೀರದಲ್ಲಿ ಪಂಡಿತರ ಮೇಲೆ ಮುಸಲ್ಮಾನರು ನಡೆಸಿದ್ದ ಅತ್ಯಾಚಾರವನ್ನು ಕಂಡಿದ್ದ ನೆಹರೂಗೆ ಈ ಮಾತು ಹೇಳುವ ಮನಸ್ಸಾದರೂ ಎಲ್ಲಿಂದ ಬಂತೋ? ದೇವರೇ ಬಲ್ಲ. ಆದರೆ ಅವರ ಇಂತಹ ಮಾತುಗಳಿಂದಾಗಿಯೇ ಮಹಾರಾಜಾ ಹರಿಸಿಂಗರು ಅಕ್ಷರಶಃ ತುಮುಲಕ್ಕೆ ಬಿದ್ದುದು. ಹಿಂದೂಗಳ ಪವಿತ್ರ ದೇಶ ಭಾರತವನ್ನು ಬಿಟ್ಟು ಪಾಕಿಸ್ಥಾನವನ್ನು ಸೇರಿಬಿಡುವ ಆಲೋಚನೆ ಅವರ ಮನ ಹೊಕ್ಕಿದ್ದು!, ನಾಲ್ಕಾರು ತಿಂಗಳುಗಳ ಕಾಲವಂತೂ ಮಹಾರಾಜರು ಅಕ್ಷರಶಃ ಚಿಂತಾಮಗ್ನರಾಗಿಯೇ ಇದ್ದುಬಿಟ್ಟಿದ್ದರು.</p>
<p>ಒಂದೆಡೆ ಮಾತೃಧರ್ಮದ ಸೆಳೆತ, ಇನ್ನೊಂದೆಡೆ ವಿಲೀನಕ್ಕೆ ಒಪ್ಪಿಗೆ ಕೊಟ್ಟರೂ ಕಾಡುವ ನೆಹರೂರ ದರ್ಪ, ಮತ್ತೊಂದೆಡೆ ಮೌಂಟ್‌ಬ್ಯಾಟನ್ ಮೂಲಕ ಪಾಕಿಸ್ಥಾನ ಸೇರ್ಪಡೆಗೆ ಬರುತ್ತಿರುವ ಆಮಿಷ. ಯಾವುದನ್ನು ಒಪ್ಪಬೇಕು, ಯಾವುದನ್ನು ಬಿಡಬೇಕು ಎಂಬುದೇ ಅವರಿಗೆ ತಿಳಿಯದಾಯಿತು. ನೆಹರೂರ ನಂಬಿಕಸ್ತ ಗೆಳೆಯ ಮೌಂಟ್‌ಬ್ಯಾಟನ್ ಸಾಧ್ಯವಾದಷ್ಟು ಕಾಶ್ಮೀರ ಪಾಕಿಸ್ಥಾನಕ್ಕೆ ಸೇರುವಂತೆ ಪ್ರಯತ್ನ ನಡೆಸಿದ್ದ. ಮಹಾರಾಜನನ್ನು ಒಲಿಸಿಕೊಳ್ಳಬಹುದಾದ ಹೆಜ್ಜೆಯನ್ನು ಜಿನ್ನಾರಿಗೆ ಹೇಳಿಕೊಡುತ್ತಿದ್ದ. ಅಷ್ಟೇ ಅಲ್ಲ. ನಿಮ್ಮ ಯಾವುದೇ ನಿರ್ಧಾರವನ್ನು ಆಗಸ್ಟ್ ೧೪ರ ವರೆಗೆ ತಿಳಿಸಲೇಬೇಡಿ ಎಂದು ಮಹಾರಾಜರಿಗೆ ತಾಕೀತು ಮಾಡಿದ್ದ. ತೆರೆ-ಮರೆಯ ಹಿಂದೆ ಮೌಂಟ್‌ಬ್ಯಾಟನ್ ಈ ರೀತಿಯ ನಾಟಕ ಆಡುತ್ತಿರಬೇಕಾದರೆ, ನೆಹರೂ ಮಾತ್ರ ಮೌಂಟ್‌ಬ್ಯಾಟನ್‌ನ ಕುತಂತ್ರ ಅರಿಯದೇ ಮಂಕಾದವರಂತಿದ್ದರು ! ಕಾಶ್ಮೀರವನ್ನು ಭಾರತದೊಂದಿಗೆ ವಿಲೀನಗೊಳಿಸಲು ಮೌಂಟ್‌ಬ್ಯಾಟನ್ ಅಪಾರ ಶ್ರಮವಹಿಸುತ್ತಿದ್ದಾರೆ ಎಂದೇ ನಂಬಿದ್ದರು. ಇತ್ತ ಮೌಂಟ್‌ಬ್ಯಾಟನ್ ತನ್ನ ಎಲ್ಲ ಪ್ರಯತ್ನಗಳೂ ವಿಫಲವಾಗುವ ಹಂತಕ್ಕೆ ಬಂದಾಗ ಮಹಾರಾಜರಿಗೂ-ನೆಹರೂಗೂ ನಡುವಣ ಸಂಬಂಧ ಸರಿಯಿಲ್ಲ ಎಂಬುದನ್ನೇ ಮುಂದಿರಿಸಿಕೊಂಡು ಕಾಶ್ಮೀರ, ಪಾಕಿಸ್ಥಾನದೊಂದಿಗೆ ವಿಲೀನಗೊಂಡುಬಿಡುತ್ತಿದೆ ಎಂದು ಘೋಷಿಸಿದ. ಒತ್ತಡಕ್ಕೆ ಬಿದ್ದ ಮಹಾರಾಜರು ಪಾಕಿಸ್ಥಾನದೊಂದಿಗೆ ತಾತ್ಕಾಲಿಕ ಒಪ್ಪಂದ ಮಾಡಿಕೊಂಡುಬಿಟ್ಟರು. ಆದರೆ ಸಂಪೂರ್ಣ ಸ್ವಾತಂತ್ರ್ಯ ಹೊಂದುವ ಆಕಾಂಕ್ಷೆಯನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ್ದರು. ಇತ್ತ ನ್ಯಾಶನಲ್ ಕಾನ್ಫರೆನ್ಸ್ ಕೂಡ ಪಾಕಿಸ್ಥಾನಕ್ಕೆ ಸೇರುವ ವಿಧೇಯಕವನ್ನು ಅಂಗೀಕರಿಸಿಯೇ ಬಿಟ್ಟಿತು. ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸುವ ಹೊಣೆಯನ್ನು ಸರ್ದಾರ ಪಟೇಲರಿಗೆ ಕೊಡದೇ, ತಮ್ಮ ಬಳಿಯೇ ಇಟ್ಟುಕೊಂಡಿದ್ದ ನೆಹರೂಗೆ ಇದ್ಯಾವುದರ ಅರಿವೇ ಇರಲಿಲ್ಲ. ತಮ್ಮ ಗೆಳೆಯರೆಲ್ಲ ತಮ್ಮೊಂದಿಗೇ ಇರುತ್ತಾರೆ ಎಂಬ ದೃಢ ನಂಬಿಕೆ ಅವರದು.</p>
<p>ಬರಿ ಈ ವಿಚಾರವಷ್ಟೇ ಅಲ್ಲ. ದೇಶದ ರಕ್ಷಣೆಯ ದೃಷ್ಟಿಯಲ್ಲಿ , ಅಖಂಡ ಭಾರತದ ಕನಸು ಕಟ್ಟುವಲ್ಲಿ ನೆಹರೂ ಯಾವಾಗಲೂ ಹಿಂದೆಯೇ! ಗಿಲ್ಗಿಟ್ ಪ್ರದೇಶ ರಕ್ಷಣಾ ದೃಷ್ಟಿಯಿಂದ ಆಯಕಟ್ಟಿನ ಪ್ರದೇಶ. ರಷ್ಯಾದ ಮತ್ತು ಚೀನಾದ ರಕ್ಷಣಾ ತಲೆಹರಟೆಗಳ ಮೇಲೆ ಸ್ಪಷ್ಟ ನಿಗಾ ಇಡಬಹುದಾದ ಪ್ರದೇಶ. ಹೀಗಾಗಿಯೇ ಬ್ರಿಟಿಷ್ ಸರಕಾರ ಗಿಲ್ಗಿಟ್ ಏಜೆನ್ಸಿಯಿಂದ ಆ ಪ್ರದೇಶವನ್ನು ೬೦ವರ್ಷಗಳ ಕಾಲ ಗುತ್ತಿಗೆಗೆ ಪಡೆದಿತ್ತು. ಸ್ವಾತಂತ್ರ್ಯ ಬಂದ ನಂತರ ಆ ಗುತ್ತಿಗೆಗೆ ಯಾವುದೇ ಮಹತ್ವ ಇರುತ್ತಿರಲಿಲ್ಲ. ಹೀಗಾಗಿಯೇ ಮೌಂಟ್ ಬ್ಯಾಟನ್‌ನ ಮೇಲೆ ಒತ್ತಡ ಹೇರಿ ನೆಹರೂ ಅದನ್ನು ಕಸಿಯುವ ಕೆಲಸ ಮಾಡಬೇಕಿತ್ತು. ಮಾಡಲಿಲ್ಲ. ಮಹಾರಾಜಾ ಹರಿಸಿಂಗರು ಆ ಪ್ರದೇಶದಲ್ಲಿ ತಮ್ಮ ಅಧಿಕಾರಿಗಳನ್ನು ನೇಮಿಸುವ ಮುನ್ನವೇ, ಗಿಲ್ಗಿಟ್ ಸ್ಕೌಟ್ಸ್ ಆ ಪ್ರದೇಶವನ್ನು ವಶಪಡಿಸಿಕೊಂಡಿತ್ತು. ಸ್ಕೌಟ್ಸ್‌ನ ಅಧಿಕಾರಿ ಮೇಜರ್ ಚ್ರಾನನ್ನು ಸರ್ಕಾರ ಬಂಧಿಸಿತು. ಕುಪಿತಗೊಂಡ ಸ್ಕೌಟ್ಸ್ ದಂಗೆಯೆದ್ದರು. ಸ್ವಾತಂತ್ರ್ಯದ ಸುದ್ದಿ ತಿಳಿದೊಡನೇ ಪಾಕಿಸ್ಥಾನಕ್ಕೆ ಸೇರಿಕೊಂಡುಬಿಟ್ಟರು. ರಕ್ಷಣಾ ದೃಷ್ಟಿಯಿಂದ ಮಹತ್ವವಾಗಿದ್ದ ಪ್ರದೇಶವೊಂದು ಈ ರೀತಿ ಅನಾಯಾಸವಾಗಿ ಪಾಕಿಗಳ ಕೈ ಸೇರಿಹೋಯಿತು. ನೆಹರೂರಿಂದಾಗಿ ಭಾರತೀಯರು ಕೈ-ಕೈ ಹಿಸುಕಿಕೊಳ್ಳುವುದು ಮಾತ್ರ ಉಳಿಯಿತು!</p>
<p>ಇದೇ ರೀತಿ ಕಾಶ್ಮೀರದೊಂದಿಗೂ ನೆಹರೂ ಮೌಢ್ಯತೆಯ ಪ್ರದರ್ಶನ ಮಾಡಿದರು. ಕಾಶ್ಮೀರವನ್ನು ವಿಲೀನಗೊಳಿಸಿಕೊಳ್ಳಬೇಕೆಂಬ ಆತುರ ಅವರೆಂದಿಗೂ ತೋರಲೇ ಇಲ್ಲ. ಸ್ವಾತಂತ್ರ್ಯ ಬಂದ ಮೂರು ದಿನದ ನಂತರ ಈ ದೇಶದ ಗಡಿಯನ್ನು ಬ್ರಿಟಿಷರು ನಿರ್ಧಾರ ಮಾಡಿ ಪ್ರಕಟಪಡಿಸಿದ್ದರು. ಕಾಶ್ಮೀರಕ್ಕೆ ಭಾರತದ ಇತರ ಭಾಗವನ್ನು ಬೆಸೆಯುವ ಏಕೈಕ ದ್ವಾರ ದೊರೆತಿದ್ದು ದುರಂತ. ಗುರುದಾಸಪುರ. ಆ ನಗರದ ಮೂಲಕ ಜಮ್ಮುವಿಗೆ ಹೋಗಿ ಅಲ್ಲಿಂದ ಕಾಶ್ಮೀರದ ಕಣಿವೆಗಳಿಗೆ ಸೇರಬೇಕಿತ್ತು. ಆ ರಸ್ತೆಯೂ ಅಯೋಮಯವಾಗಿತ್ತು. ಅದೇ ವೇಳೆಗೆ ಕಾಶ್ಮೀರವನ್ನು ಸೇರಬಹುದಾದ ಎರಡು ಪುಟ್ಟ-ಪುಟ್ಟ ಚೆಂದದ ರಸ್ತೆಗಳು ಪಾಕಿಗಳ ಪಾಲಿಗಿತ್ತು. ಈ ಅವಕಾಶವನ್ನೇ ಬಳಸಿಕೊಂಡ ಜಿನ್ನಾ ಲಾಹೋರಿನಿಂದ ಹಾಗೂ ರಾವಲ್‌ಪಿಂಡಿಯಿಂದ ಕಾಶ್ಮೀರಕ್ಕೆ ಸೇರುತ್ತಿದ್ದ ನಿತ್ಯ ಬಳಕೆಯ ವಸ್ತುಗಳನ್ನು ತಡೆಹಿಡಿದುಬಿಟ್ಟ. ಕಾಶ್ಮೀರಿಗಳು ತಹತಹಿಸಿಬಿಟ್ಟರು. ಅಲ್ಲಿಯವರೆಗೂ ಈ ವಿಚಾರಗಳ ಬಗ್ಗೆ ಆಲೋಚನೆಯೂ ಮಾಡಿರದಿದ್ದ ನೆಹರೂ ತಲೆ ಕೆಟ್ಟುಹೋಯಿತು. ವಿಮಾನಗಳನ್ನು ಬಳಸಿ ಆಹಾರಪೂರೈಕೆಗೆ ಶುರುವಿಟ್ಟರು. ಅದು ಬಕಾಸುರನ ಪಾಲಿಗೆ ಅರೆಕಾಸಿನ ಮಜ್ಜಿಗೆಯಂತಾಯಿತು.</p>
<p>ಈ ವಿಚಾರದ ಬಗ್ಗೆ ಸೂಕ್ಷ್ಮ ನಿರ್ಧಾರಗಳನ್ನು ಕೈಗೊಂಡ ಪಟೇಲರು ಮಾತ್ರ ಪಠಾಣ್‌ಕೋಟ್‌ನಿಂದ ಜಮ್ಮುವರೆಗಿನ ೧೧೨ ಕಿ.ಮೀ.ರಸ್ತೆಯನ್ನು ದುರಸ್ತಿಗೊಳಿಸುವ ಕೆಲಸ ಆರಂಭಿಸಿದರು. ಪಾಕೀಗಳು ಭಾರತೀಯ ಮುಸಲ್ಮಾನರನ್ನು ಎತ್ತಿಕಟ್ಟಿ ರಸ್ತೆ ಕಾರ್ಯ ತಡೆಯುವ ಎಷ್ಟೇ ಪ್ರಯತ್ನ ಮಾಡಿದರೂ ಎಲ್ಲವೂ ವ್ಯರ್ಥವಾಯಿತು. ಪಟೇಲರ ಇಚ್ಛಾಶಕ್ತಿಯಿಂದ ಸಮರೋಪಾದಿಯಲ್ಲಿ ಶುರುವಾದ ಕಾರ್ಯ ದಾಖಲೆಯ ಸಮಯದಲ್ಲಿ ಮುಕ್ತಾಯವಾಯಿತು. ಆದರೆ ಈ ರಸ್ತೆಯನ್ನು ಕಾಶ್ಮೀರದವರೆಗೂ ಒಯ್ಯುವ ಹಕ್ಕು ಅವರಿಗಿರಲಿಲ್ಲ. ಏಕೆಂದರೆ ಕಾಶ್ಮೀರ ಸಮಸ್ಯೆಯನ್ನು ತಾನೇ ಪರಿಹರಿಸಬೇಕೆಂಬ ಹಠ ನೆಹರೂಗಿತ್ತು. ಬೇರೆ ಯಾರೂ ಪರಿಹಾರಕಾರ್ಯದಲ್ಲಿ ಮೂಗುತೂರಿಸುವುದನ್ನು ಅವರು ಒಪ್ಪುತ್ತಿರಲಿಲ್ಲ. ಅದು ಬಿಡಿ. ಪಟೇಲರು ಅಂದು ದೂರದೃಷ್ಟಿಯಿಂದ ಆ ರಸ್ತೆ ನಿರ್ಮಾಣ ಮಾಡಿದರಲ್ಲ, ಆ ರಸ್ತೆ ಇಂದಿಗೂ ಭಾರತವನ್ನು ಕಾಶ್ಮೀರದೊಂದಿಗೆ ಬೆಸೆಯುವ ರಸ್ತೆಯಾಗಿ ಉಳಿದಿದೆ! ಪಂಜಾಬ್‌ನಲ್ಲಿ ಕೋಮುಗಲಭೆ ತೀವ್ರವಾಗಿ ಉರಿಯುತ್ತಿದ್ದಾಗಲೂ, ಜಮ್ಮು ಕಾಶ್ಮೀರಗಳು ಶಾಂತವಾಗಿಯೇ ಇದ್ದವು. ಪಾಕಿಸ್ಥಾನದಿಂದ ನಿರಾಶ್ರಿತರಾಗಿ ಬರುತ್ತಿದ್ದ ಹಿಂದೂಗಳು ಕಾಶ್ಮೀರದ ಮೂಲಕ ಕಾಲ್ನಡಿಗೆಯಲ್ಲೇ ಹಾದು ಭಾರತ ಸೇರುತ್ತಿದ್ದರು. ಮಾರ್ಗದುದ್ದಕ್ಕೂ ಮುಸಲ್ಮಾನರು ಯಾವುದೇ ತೊಂದರೆ ಮಾಡದೇ ಸುಮ್ಮನಿರುತ್ತಿದ್ದರು. ಒಮ್ಮೆ ಕಾಶ್ಮೀರದ ಮಹಾರಾಜರು ಪಾಕಿಸ್ಥಾನದೊಂದಿಗೆ ವಿಲೀನವಾಗದಿರುವ ವಿಚಾರ ಪ್ರಕಟಿಸಿದರು ನೋಡಿ, ಎಲ್ಲವೂ ತಲೆಕೆಳಗಾಯಿತು. ಜಿನ್ನಾ ಇದನ್ನು ವಿಶ್ವಾಸದ್ರೋಹವೆಂದು ಭಾವಿಸಿದ. ಕಾಶ್ಮೀರದಲ್ಲಿ ತೀವ್ರ ಪ್ರಮಾಣದ ದಂಗೆಗಳಾಗುವಂತೆ ನೋಡಿಕೊಂಡ. ಜಮ್ಮು-ಕಾಶ್ಮೀರಗಳೂ ಕೋಮುಗಲಭೆಗಳ ಕೇಂದ್ರಗಳಾಗಿಬಿಟ್ಟವು. ಇತ್ತ ಪಾಕಿಸ್ಥಾನ ಒಂದಿನಿತೂ ತಡಮಾಡದೇ ಕಾಶ್ಮೀರದ ಮೇಲೆ ದಾಳಿ ಮಾಡಿಯೇ ಬಿಟ್ಟಿತು.</p>
<p>೧೯೪೭ರ ಅಕ್ಟೋಬರ್ ೨೧ರ ರಾತ್ರಿ ಪಾಕಿಸ್ಥಾನ ದಾಳಿಗೆ ಶುರುವಿಟ್ಟಿತು. ಸ್ವತಂತ್ರಗೊಂಡ ಎರಡೇ ತಿಂಗಳಲ್ಲಿ ಪಾಕಿಸ್ಥಾನ ಭಾರತದ ಮೇಲೆ ಯುದ್ಧ ಘೋಷಿಸಿದಂತಾಗಿತ್ತು. ರಾವಲ್ಪಿಂಡಿಯಿಂದ ಆರಂಭವಾದ ಸೈನ್ಯದ ಯಾತ್ರೆ ಮುಜಪ್ಫರಾಬಾದ್‌ಗೆ ಬಂದಿತು. ಡೈನಮೈಟ್‌ಗಳ ಕೊರತೆಯಿಂದಾಗಿ ಮುಜಪ್ಫರಾಬಾದ್‌ನ ಕೃಷ್ಣಾ ಗಂಗಾ ಸೇತುವೆಯನ್ನು ಸ್ಫೋಟಿಸಲಾಗದಿದ್ದುದಕ್ಕೆ ಆ ನಗರದ ಬೆಲೆ ತೆತ್ತಿದ್ದಾಯ್ತು. ಪಠಾಣ ಮತ್ತು ಅರೆ ಸೈನಿಕರ ಪಡೆಯ ನೇತೃತ್ವ ಹೊಂದಿದ್ದ ಮೇಜರ್ ಜನರಲ್ ಅಕ್ಬರ್ ಖಾನ್ ಶ್ರೀನಗರದತ್ತ ವೇಗವಾಗಿ ಧಾವಿಸಲಾರಂಭಿಸಿದರು. ಬಾರಮುಲ್ಲಾ ವ್ಯಾಪ್ತಿಯಲ್ಲಿ ವ್ಯಾಪಕ ಅತ್ಯಾಚಾರಗಳು ನಡೆದವು. ಪಾಪಿ ಸೈನಿಕರು, ಹಿಂದೂ &#8211; ಮುಸಲ್ಮಾನ ಭೇದವೆಣಿಸದೇ ಮಾತಾ-ಭಗಿನಿಯರ ಮಾನಹರಣಗೈದರು. ಅವ್ಯಾಹತವಾಗಿ ಲೂಟಿಗಳಾದವು. ನೆಹರೂ ಆಕಾಶವಾಣಿಯ ಮೂಲಕ ಜನತೆಗೆ ಕರೆ ಇತ್ತರು. ಅದು ಹೋರಾಟದ ಕೆಚ್ಚಿನ ಸ್ವಾಭಿಮಾನದ ಕರೆಯಾಗಿರಲಿಲ್ಲ. ಅದು ಎಲ್ಲವನ್ನು ಕಳೆದುಕೊಂಡವನ ಪ್ರಲಾಪದಂತಿತ್ತು, ಅಸಹಾಯಕನೊಬ್ಬನ ರೋದನದಂತಿತ್ತು ! ಚರ್ಚಿಲ್‌ನ ಸಿಂಹದ ಎದೆ ನೆಹರೂಗಿರಲಿಲ್ಲ. ಆತನದು ಕ್ಷೀಣ ಪ್ರತಿರೋಧವಾಗಿತ್ತು ಅಷ್ಟೆ! ಆದರೆ ಪಟೇಲರು ಕೈಕಟ್ಟಿ ಕುಳಿತುಕೊಳ್ಳಲಿಲ್ಲ. ಪರಿಸ್ಥಿತಿಯನ್ನು ನಿಭಾಯಿಸುವ ಕೆಲಸಕ್ಕೆ ಶುರುವಿಟ್ಟರು. ದೆಹಲಿಯಿಂದ ಎಲ್ಲ ವಿಮಾನಗಳೂ ಶ್ರೀನಗರಕ್ಕೆ ಧಾವಿಸುವಂತೆ ನೋಡಿಕೊಂಡರು. ಆ ಮೂಲಕ ಜಮ್ಮು ಮತ್ತು ಪಠಾಣ್‌ಕೋಟ್‌ಗಳ ನಡುವೆ ವೈರ್‌ಲೆಸ್ ಸಂಪರ್ಕ ಸಾಧಿಸಿದರು. ಪಂಜಾಬ್ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮೇಹರ್ ಚಂದ್ ಮಹಾಜನರನ್ನು ತುರ್ತು ರಜೆಯ ಮೇಲೆ ಕಾಶ್ಮೀರಕ್ಕೆ ಕಳಿಸಿಕೊಟ್ಟರು. ರಾಜಾ ಹರಿಸಿಂಗರ ಮೇಲೆ ಒತ್ತಡ ಹೇರುವ ಕೆಲಸ ಶುರುವಿಟ್ಟರು. ಕಾಶ್ಮೀರ ಭಾರತದೊಂದಿಗೆ ವಿಲೀನವಾದರೆ ಅದನ್ನು ರಕ್ಷಿಸುವ ಹೊಣೆ ತಮ್ಮದೆಂದರು. ಮಹಾರಾಜರೂ ಅಷ್ಟೇ. ಅವರಿಗೆ ನೆಹರೂರ ಮೇಲೆ ದ್ವೇಷವಿತ್ತು. ಆದರೆ ಪಟೇಲರ ಮೇಲೆ ಗೌರವವಿತ್ತು. ಅವರ ಸಾಹಸದ ಬಗ್ಗೆ ಹೆಮ್ಮೆಯಿತ್ತು. ನೆಹರೂ ಜಾಗದಲ್ಲಿ ಪಟೇಲರು ಭಾರತದ ಪ್ರಧಾನಿಯಾಗಿದ್ದರೆ ಅವರು ಯಾವುದೇ ದ್ವಂದ್ವಕ್ಕೆ ಒಳಗಾಗದೇ ಭಾರತದೊಂದಿಗೆ ವಿಲೀನವಾಗಿ ಬಿಡುತ್ತಿದ್ದರು. ಆದರೆ ಈಗ ಅವೆಲ್ಲ ಯೋಚಿಸಲಿಕ್ಕೆ ಪುರುಸೊತ್ತಿಲ್ಲ. ಮೊದಲು ಪಾಕಿಸ್ಥಾನದ ಆಕ್ರಮಣವನ್ನು ತಡೆಯಬೇಕು. ಮಹಾರಾಜರು ತಮ್ಮ ಸೈನ್ಯವನ್ನು ಯುದ್ಧ ಸನ್ನದ್ಧವಾಗಿಸಿದರು. ಆದರೆ ಪರಿಸ್ಥಿತಿ ಕೈಮೀರುವ ಹಂತ ತಲುಪಿದಾಗ, ಭಾರತದ ಸಹಾಯ ಕೇಳಲು ಒಪ್ಪಿಕೊಂಡರು.</p>
<p>ಅಕ್ಟೋಬರ್ ೨೬ರ ಮಧ್ಯಾಹ್ನ ನೆಹರೂ ಮನೆಯಲ್ಲಿ, ಮಹತ್ವದ ಸಭೆ ನಡೆಯಿತು. ಮೌಂಟ್ ಬ್ಯಾಟನ್, ಶೇಕ್ ಅಬ್ದುಲ್ಲಾ , ಮಹಾಜನರಾದಿಯಾಗಿ ಅತಿಮುಖ್ಯ ಮುತ್ಸದ್ದಿಗಳು ಪಾಲ್ಗೊಂಡಿದ್ದರು. ಮಹಾಜನರು ಕಡ್ಡಿ ಮುರಿದಂತೆ ಹೇಳಿದರು. ‘ಭಾರತ ಸರಕಾರ ನಮಗೆ ಸಹಕರಿಸಲಿಲ್ಲವೆಂದಾದರೆ, ಅನಿವಾರ್ಯವಾಗಿ ಪಾಕಿಸ್ಥಾನದ ತೆಕ್ಕೆಗೆ ಹೋಗಬೇಕಾಗಬಹುದು’. ಅವರು ಹಾಗೆ ಹೇಳಿದ್ದರಲ್ಲಿ ತಪ್ಪಿರಲಿಲ್ಲ. ಮೊದಲಿನಿಂದಲೂ ಮಹಾರಾಜರ ವಿರುದ್ಧ ಕುದಿಯುತ್ತಿದ್ದ ನೆಹರೂ ಇಂತಹ ಸಂದರ್ಭಗಳಲ್ಲೂ ಅತಿ ಕೆಟ್ಟದಾಗಿ ವರ್ತಿಸುತ್ತಿದ್ದರು. ತಮ್ಮ ದ್ವೇಷ ಸಾಧನೆಗೆ ದೇಶದ ಹಿತವನ್ನು ಬಲಿಕೊಡುವ ಪ್ರಯತ್ನ ನಡೆಸುತ್ತಿದ್ದರು. ಮೌಂಟ್‌ಬ್ಯಾಟನ್ ಮಾತು ಕೇಳಿ ಕಾದು ನೋಡುವ ಕಹಳೆಯನ್ನೇ ಊದುತ್ತಿದ್ದರು. ಹೀಗಾಗಿ ಎಲ್ಲರ ಮುಂದೆ ಮಹಾಜನರು ತೀಕ್ಷ್ಣವಾಗಿ ಹೇಳಿದ್ದು ನೆಹರೂಗೆ ಹಿಡಿಸಿರಲಿಲ್ಲ. ಸಭೆಯಿಂದ ಹೊರನಡೆಯುವಂತೆ ಮಹಾಜನರಿಗೆ ಆದೇಶ ನೀಡಿದರು. ಕುಪಿತರಾಗಿ ಹುಬ್ಬುಗಳನ್ನು ಗಂಟಿಕ್ಕಿ ಹೊರಟಿದ್ದ ಮಹಾಜನರನ್ನು ಬಾಗಿಲ ಬಳಿ ತಡೆದು ನಿಲ್ಲಿಸಿದ ಪಟೇಲರು ‘ಖಂಡಿತ ಮಹಾಜನರೇ, ಪಾಕಿಸ್ಥಾನದೊಂದಿಗೆ ಹೋಗುವ ಅಗತ್ಯ ನಿಮಗಿಲ್ಲ ’ ಎಂದರು.</p>
<p>ಈ ಸಂದರ್ಭದ ಒಂದು ಚರ್ಚೆಯನ್ನು ಫೀಲ್ಡ್‌ಮಾರ್ಶಲ್ ಮಾಣಿಕ್‌ಶಾ ಮುಂದೆ ತಮ್ಮ ಭಾಷಣದಲ್ಲಿ ಹೇಳಿದ್ದರು. “ಪಟೇಲರು ಸಹನೆ ಕಳೆದುಕೊಂಡು, ‘ಜವಾಹರಲಾಲರೇ ನಿಮಗೆ ಕಾಶ್ಮೀರ ಬೇಕೇ? ಬೇಡವೇ? ಎನ್ನುವವರೆಗೆ ನೆಹರೂ ರಷ್ಯಾ, ಆಫ್ರಿಕಾ, ವಿಶ್ವಸಂಸ್ಥೆ, ದೇವರು-ದಿಂಡರು ಎಲ್ಲರ ಬಗ್ಗೆಯೂ ಮಾತನಾಡುತ್ತಿದ್ದರು. ಅನಂತರ ತಣ್ಣಗಾದ ನೆಹರೂ ಖಂಡಿತ, ನನಗೆ ಕಾಶ್ಮೀರ ಬೇಕು ಎಂದರು. ಹಾಗಿದ್ದರೆ ಆದೇಶ ಕೊಡಿ ಎಂದವರೇ ನೆಹರೂರ ಪ್ರತಿಕ್ರಿಯೆ ಹೊರಬೀಳುವ ಮೊದಲೇ, ‘ನಿಮಗೆ ಆದೇಶ ಸಿಕ್ಕಿದೆ’ ಎಂದು ನನಗೆ ಹೇಳಿದರು&#8221;. ಹೌದು. ಪಟೇಲರ ಧೈರ್ಯ-ಸ್ಥೈರ್ಯಗಳು ಅಂದು ಕೆಲಸ ಮಾಡದಿದ್ದರೆ ನೆಹರೂ ಮೌಂಟ್ ಬ್ಯಾಟನ್‌ನ ಮಾತಿಗೆ ತಲೆದೂಗಿ ಇಡಿಯ ಜಮ್ಮು ಕಾಶ್ಮೀರವನ್ನು ಪಾಕೀಯರಿಗೆ ತಟ್ಟೆಯಲ್ಲಿಟ್ಟು ಕೊಡುತ್ತಿದ್ದರು!</p>
<p>ಪಟೇಲ್ ಸ್ವತಃ ತಾವೇ ವಿಲ್ಲಿಂಗ್ಟನ್ ನಿಲ್ದಾಣಕ್ಕೆ ಹೋಗಿ ಒಂದೊಂದೇ ವಿಮಾನ ಶ್ರೀನಗರದತ್ತ ನೆಗೆಯುವುದನ್ನು ನೋಡಿ ಬಂದರು. ಅವರ ಒಂದೊಂದು ಮಾತೂ ಸೈನಿಕರಿಗೆ ಅಪಾರ ಸ್ಫೂರ್ತಿ ತುಂಬುತ್ತಿದ್ದವು. ಭಾರತದ ಮೇಲೆ ಆಕ್ರಮಣ ಮಾಡಿರುವ ಅನಾಗರಿಕ ಪಾಕಿಸ್ಥಾನಿಯರಿಗೆ ಬುದ್ಧಿ ಕಲಿಸಲೇಬೇಕೆಂಬ ತುಡಿತ ಹೆಚ್ಚಿಸುತ್ತಿದ್ದವು. ನೋಡುತ್ತ-ನೋಡುತ್ತಲೇ ಭಾರತೀಯ ಸೈನ್ಯ ಶ್ರೀನಗರ ತಲುಪಿತು. ಅಲ್ಲಿಯವರೆಗೂ ಶ್ರೀನಗರದ ಮೇಲೆ ಪಾಕಿಸ್ಥಾನಿ ಬಾವುಟ ಹಾರಿಸುವ ಕನಸು ಕಾಣುತ್ತಿದ್ದ ಜಿನ್ನಾ ಈಗ ದಂಗಾದ. ಇಷ್ಟು ದಿನ ನೆಹರೂರನ್ನೇ ವಿರೋಧಿ ಎಂದುಕೊಂಡು ಮೆರೆಯುತ್ತಿದ್ದವನಿಗೆ, ದಾಳಿಯ ನೇತೃತ್ವ ವಹಿಸಿರುವುದು ಪಟೇಲರು ಎಂದು ಗೊತ್ತಾದೊಡನೆ ಸೋಲು ಖಚಿತವಾಯಿತು. ನವೆಂಬರ್ ೮ರ ವೇಳೆಗೆ ಬಾರಾಮುಲ್ಲಾ ಭಾರತೀಯ ಸೈನಿಕರ ಕೈಸೇರಿತು. ಹೊಸ ಹೊಸ ಯುದ್ಧನೀತಿ, ಅನಿರೀಕ್ಷಿತ ಯೋಜನೆಗಳ ಮೂಲಕ ಪಾಕಿಸ್ಥಾನಿ ಸೈನಿಕರನ್ನು ದಂಗುಬಡಿಸಿದ ನಮ್ಮ ಸೈನಿಕರು ಒಂದೊಂದೇ ಪ್ರದೇಶಗಳನ್ನು ವಶಪಡಿಸಿಕೊಳ್ಳುತ್ತಾ ಸಾಗಿದರು. ರಜೌರಿ, ಪೂಂಛ್‌ಗಳೆಲ್ಲ ಸುಲಭದ ತುತ್ತಾಗಿಬಿಟ್ಟವು. ನಮ್ಮ ಸೈನಿಕರು ವೀರಾವೇಶದಿಂದ ಹೋರಾಡುತ್ತಾ ಪಾಕಿಸ್ಥಾನ ಗಡಿ ದಾಟುತ್ತಿರಬೇಕಾದರೆ, ಜಿನ್ನಾರ ಎದೆಯಲ್ಲಿ ಅವಲಕ್ಕಿ ಕುಟ್ಟಿದಂತಾಗುತ್ತಿತ್ತು. ಇನ್ನು ತನ್ನದೇ ಸಿಂಹಾಸನ ಹೋದಂತೇ ಎಂದು ರೋದಿಸುತ್ತಾ ಕುಳಿತ.</p>
<p>ಅದೇ ವೇಳೆಗೆ ನೆಹರೂ ತಮ್ಮ ಜೀವನದ ಮಹಾನ್ ಮೂರ್ಖ ಕೆಲಸ ಮಾಡಿದ್ದು. ಕಾಶ್ಮೀರವನ್ನು ನಿರಂತರ ಬೆಂಕಿಯ ಉಂಡೆಯಾಗಿ ಮಾಡಿದ್ದು . ಮೌಂಟ್ ಬ್ಯಾಟನ್‌ನ ಮಾತು ಕೇಳಿದ ನೆಹರೂ, ನಮ್ಮ ಸೈನಿಕರು ವಿಜಯದ ಹೊಸ್ತಿಲಲ್ಲಿರುವಾಗಲೇ ವಿಶ್ವಸಂಸ್ಥೆಯ ಬಾಗಿಲು ಬಡಿದರು. ಕಾಶ್ಮೀರದ ವಿಚಾರದಲ್ಲಿ ಮಧ್ಯಸ್ತಿಕೆ ವಹಿಸಬೇಕು ಎಂದು ಗೋಗರೆದರು. ಅಲ್ಲಿಗೆ ಕಾಶ್ಮೀರ ಅಂತಾರಾಷ್ಟ್ರೀಯ ಸ್ತರದಲ್ಲಿ ಚರ್ಚೆಯಾಗುವ ವಿಷಯವಾಯಿತು. ಪ್ರತಿಯೊಂದು ರಾಷ್ಟ್ರವೂ ನಮ್ಮ ಮೇಲೆ ಬೆರಳೆತ್ತಿ ‘ಕಾಶ್ಮೀರ’ ಎನ್ನುವಂತಾಯ್ತು. ಇದಕ್ಕೂ ಮುನ್ನ ನೆಹರೂ ಮೌಂಟ್ ಬ್ಯಾಟನ್‌ನ ಮಾತು ಕೇಳಿ ಲಾಹೋರಿಗೆ ಹೋಗಿ, ಜಿನ್ನಾ ಮತ್ತು ಲಿಯಾಕತ್ ಅಲಿ ಖಾನರೊಂದಿಗೆ ಮಾತುಕತೆ ನಡೆಸುವವರಿದ್ದರು. ಪಟೇಲರು ‘ಗೆಲುವಿನ ಹೊಸ್ತಿಲಲ್ಲಿರುವ ನಾವು, ಅವರ ಮುಂದೆ ಹೋಗಿ ಕಣ್ಣೀರಿಡುವುದು ಸರಿಯಲ್ಲ’ ಎಂದು ದಬಾಯಿಸಿದ ಅನಂತರವೇ ಅವರು ಸುಮ್ಮನಾಗಿದ್ದು! ಆದರೆ ನೆಹರೂ ವಿಶ್ವಸಂಸ್ಥೆಗೆ ಕಾಶ್ಮೀರದ ಸಮಸ್ಯೆ ಒಯ್ಯುವ ವಿಚಾರವನ್ನು ಪಟೇಲರಿಗೆ ತಿಳಿಸಲೇ ಇಲ್ಲ.</p>
<p>ಅಂದು ನೆಹರೂ ಮಾಡಿದ ಮೂರ್ಖತನ ಇಂದಿಗೂ ಭಾರತದ ಪಾಲಿಗೆ ಸಮಸ್ಯೆಯಾಗಿ ಕಾಡುತ್ತಿದೆ. ಕಾಶ್ಮೀರದಲ್ಲೊಂದು ಪಾಕ್ ಆಕ್ರಮಿತ ಕಾಶ್ಮೀರ ನಿರ್ಮಾಣವಾಗಿದೆ. ಸ್ವತಃ ಕಾಶ್ಮೀರದ ರಾಜನೇ ಭಾರತದೊಂದಿಗೆ ವಿಲೀನವಾದಾಗಲೂ ಅಲ್ಲಿನ ಜನ ಪಾಕಿಸ್ಥಾನ-ಪಾಕಿಸ್ಥಾನ ಎಂದು ಬೊಬ್ಬಿಡುವುದು ನಿಂತಿಲ್ಲ. ಯಾವ ಕಾಶ್ಮೀರ ಒಂದು ಕಾಲದಲ್ಲಿ ಧರೆಯ ಸ್ವರ್ಗ ಎಂದು ಕರೆಯಲ್ಪಡುತ್ತಿತ್ತೋ ಅದು ಇಂದು ಅಕ್ಷರಶಃ ನರಕವಾಗಿಬಿಟ್ಟಿದೆ. ಅಲ್ಲಿ ನಿತ್ಯ ಹಿಂದೂಗಳ ಮಾರಣಹೋಮ. ಕಾಶ್ಮೀರದ ಆಸ್ತಿಯಾಗಿದ್ದ ಪಂಡಿತರು ಇಂದು ಅಲ್ಲಿ ನಿರಾಶ್ರಿತರು. ಪಂಡಿತರ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಸಾಮಾನ್ಯ. ನಾವುಗಳು ಕಾಶ್ಮೀರದ ಕೊಳ್ಳಕ್ಕೆ ಹೋಗಬೇಕಾದರೆ, ಅಬ್ಬೇಪಾರಿಗಳಂತೆ, ಪರರಾಷ್ಟ್ರದವರಂತೆ ಹೋಗಬೇಕು. ಇವೆಲ್ಲವನ್ನೂ ನೆನೆದು ಕಣ್ಣೀರಿಡುವಾಗಲೆಲ್ಲ, ಆ ಹನಿಗಳಲ್ಲಿ ನೆಹರೂವಿನದೇ ಬಿಂಬ ಮೂಡುತ್ತದೆ!</p>
]]></content:encoded>
			<wfw:commentRss>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%95%e0%b2%be%e0%b2%b6%e0%b3%8d%e0%b2%ae%e0%b3%80%e0%b2%b0%e0%b2%b5%e0%b2%bf%e0%b2%82%e0%b2%a6%e0%b3%81-%e0%b2%b9%e0%b3%8a%e0%b2%a4%e0%b3%8d%e0%b2%a4%e0%b3%81%e0%b2%b0%e0%b2%bf%e0%b2%af%e0%b3%8-2/feed/</wfw:commentRss>
		<slash:comments>3</slash:comments>
		</item>
		<item>
		<title>ಸಾಂಸ್ಕೃತಿಕ ಆಕ್ರಮಣಗಳು ಮತ್ತು ಪರಿಣಾಮಗಳು</title>
		<link>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%b8%e0%b2%be%e0%b2%82%e0%b2%b8%e0%b3%8d%e0%b2%95%e0%b3%83%e0%b2%a4%e0%b2%bf%e0%b2%95-%e0%b2%86%e0%b2%95%e0%b3%8d%e0%b2%b0%e0%b2%ae%e0%b2%a3%e0%b2%97%e0%b2%b3%e0%b3%81-%e0%b2%ae%e0%b2%a4%e0%b3%-2/</link>
		<comments>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%b8%e0%b2%be%e0%b2%82%e0%b2%b8%e0%b3%8d%e0%b2%95%e0%b3%83%e0%b2%a4%e0%b2%bf%e0%b2%95-%e0%b2%86%e0%b2%95%e0%b3%8d%e0%b2%b0%e0%b2%ae%e0%b2%a3%e0%b2%97%e0%b2%b3%e0%b3%81-%e0%b2%ae%e0%b2%a4%e0%b3%-2/#comments</comments>
		<pubDate>Tue, 23 Dec 2008 06:40:36 +0000</pubDate>
		<dc:creator>admin</dc:creator>
				<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>
		<category><![CDATA[ರಾಷ್ಟ್ರ]]></category>
		<category><![CDATA[ಸಂಸ್ಕೃತಿ]]></category>

		<guid isPermaLink="false">http://neladamaatu.wordpress.com/?p=74</guid>
		<description><![CDATA[ರಾಷ್ಟ್ರವೆಂದರೇನು? ಬರಿಯ ಕಲ್ಲು &#8211; ಮಣ್ಣೇ? ನಾವು ಕಟ್ಟಿ ನಿಲ್ಲಿರುವ ಕಟ್ಟಡಗಳೇ? ಹರಿಯುವ ನದಿಯೇ? ಎದೆಯೆತ್ತಿ ನಿಂತಿರುವ ಪರ್ವತ ಸಮೂಹಗಳೇ? ಅಲ್ಲಿ ಜನಿಸಿರುವ ಮಹಾಪುರುಷರೇ? ಅಥವಾ ಅವರು ಬರೆದಿರುವ ಗ್ರಂಥಗಳೇ? ಊಹೂಂ&#8230; ಉತ್ತರ ಅಷ್ಟು ಸುಲಭವೇನಲ್ಲ. ಬಹಳ ಬಾರಿ ರಾಷ್ಟ್ರವೆಂದೊಡನೆ ನಾವು ಇಂಥ ವಿಷಯಗಳ ಸುತ್ತಲೇ ಅಡ್ಡಾಡುತ್ತಿರುತ್ತೇವೆ. ವಾಸ್ತವವಾಗಿ, ರಾಷ್ಟ್ರ ಸಂಸ್ಕೃತಿಯ ಪ್ರವಾಹ. ಸಂಸ್ಕೃತಿ ಇವುಗಳೆಲ್ಲವನ್ನೂ ಒಳಗೊಂಡಂತಹ, ಇವುಗಳನ್ನೂ ಮೀರಿದಂತಹ ಅಂಶ. ರಾಷ್ಟ್ರಕವಿ ಕುವೆಂಪು ಇದನ್ನು ಸಮರ್ಥವಾಗಿ ಚಿತ್ರಿಸುತ್ತಾರೆ. ಮಾನವನನ್ನು ದೃಷ್ಟಿಯಲ್ಲಿರಿಸಿಕೊಂಡು ಅವರು ಪ್ರಗತಿಯ ಬಗೆಗಳನ್ನು ವಿವರಿಸುತ್ತಾರೆ.  [...]]]></description>
			<content:encoded><![CDATA[<p>ರಾಷ್ಟ್ರವೆಂದರೇನು?<br />
ಬರಿಯ ಕಲ್ಲು &#8211; ಮಣ್ಣೇ? ನಾವು ಕಟ್ಟಿ ನಿಲ್ಲಿರುವ ಕಟ್ಟಡಗಳೇ? ಹರಿಯುವ ನದಿಯೇ? ಎದೆಯೆತ್ತಿ ನಿಂತಿರುವ ಪರ್ವತ ಸಮೂಹಗಳೇ? ಅಲ್ಲಿ ಜನಿಸಿರುವ ಮಹಾಪುರುಷರೇ? ಅಥವಾ ಅವರು ಬರೆದಿರುವ ಗ್ರಂಥಗಳೇ?<br />
ಊಹೂಂ&#8230; ಉತ್ತರ ಅಷ್ಟು ಸುಲಭವೇನಲ್ಲ. ಬಹಳ ಬಾರಿ ರಾಷ್ಟ್ರವೆಂದೊಡನೆ ನಾವು ಇಂಥ ವಿಷಯಗಳ ಸುತ್ತಲೇ ಅಡ್ಡಾಡುತ್ತಿರುತ್ತೇವೆ. ವಾಸ್ತವವಾಗಿ, ರಾಷ್ಟ್ರ ಸಂಸ್ಕೃತಿಯ ಪ್ರವಾಹ. ಸಂಸ್ಕೃತಿ ಇವುಗಳೆಲ್ಲವನ್ನೂ ಒಳಗೊಂಡಂತಹ, ಇವುಗಳನ್ನೂ ಮೀರಿದಂತಹ ಅಂಶ.</p>
<p>ರಾಷ್ಟ್ರಕವಿ ಕುವೆಂಪು ಇದನ್ನು ಸಮರ್ಥವಾಗಿ ಚಿತ್ರಿಸುತ್ತಾರೆ. ಮಾನವನನ್ನು ದೃಷ್ಟಿಯಲ್ಲಿರಿಸಿಕೊಂಡು ಅವರು ಪ್ರಗತಿಯ ಬಗೆಗಳನ್ನು ವಿವರಿಸುತ್ತಾರೆ.  ಮಾನವನ ಆಂತರಿಕ ಬೆಳವಣಿಗೆಯನ್ನು ಸಂಸ್ಕೃತಿ ಎಂದು ಗುರುತಿಸಿ, ಬಾಹ್ಯ ಬೆಳವಣಿಗೆಯನ್ನು ನಾಗರಿಕತೆ ಎನ್ನುತ್ತಾರೆ. ಇದೇ ಚಿಂತನೆಯನ್ನು ವಿಸ್ತರಿಸಿ ರಾಷ್ಟ್ರಕ್ಕೆ ಹೇಳುವುದಾದರೆ, ಪ್ರತಿಯೊಂದು ರಾಷ್ಟ್ರಕ್ಕೂ ಒಂದು ಅಂತರ್ಪ್ರವಾಹ ಇರುತ್ತದೆಯಲ್ಲ, ಅದನ್ನೇ ‘ಸಂಸ್ಕೃತಿ’ ಎನ್ನುವುದು. ಈ ಅಂತರ್ಪ್ರವಾಹಕ್ಕೆ ಧಕ್ಕೆ ಬಂದಾಗಲೆಲ್ಲ ದೇಶ ಸಾಂಸ್ಕೃತಿಕವಾಗಿ ನಲುಗಿಹೋಗುತ್ತದೆ.</p>
<p>ಭಾರತದ ಪಾಲಿನ ಅಂತರ್ಪ್ರವಾಹ ಇತರೆಲ್ಲ ರಾಷ್ಟ್ರಗಳಿಗಿಂತಲೂ ವಿಭಿನ್ನವಾದುದು. ಈ ಪ್ರವಾಹದ ಮೂಲ ಋಷಿಗಳ ಪಾದದಲ್ಲಿದೆ. ಆತ್ಮ ಚಿಂತನೆಯತ್ತ ತಮ್ಮನ್ನು ತಾವು ತೊಡಗಿಸಿಕೊಂಡು, ಇಂದ್ರಿಯಗಳನ್ನು ನಿಗ್ರಹಿಸಿ, ಮನಸ್ಸಿನ ತೆರೆಗಳನ್ನು ಸರಿಸುತ್ತ ಹೋದ ಋಷಿಗಳು ಶಾಶ್ವತ ಸತ್ಯವನ್ನು ಅಲ್ಲಿಂದ ಅರಸಿ ತಂದರು. ಅವರ ಇಡಿಯ ಜೀವನವೇ ಸತ್ಯಾನ್ವೇಷಣೆಯದಾಯಿತು. ಹೀಗೆ ಅರಸಿದ ಸತ್ಯವನ್ನು ಎಲ್ಲರಿಗೂ ತಿಳಿಸಿ, ಅವರನ್ನೂ ಸತ್ಯ ಮಾರ್ಗಿಗಳಾಗಿಸಬೇಕೆನ್ನುವ ಋಷಿಗಳ ಪ್ರಯತ್ನ ಸ್ತುತ್ಯರ್ಹವಾಗಿತ್ತು. ಈ ಹಿನ್ನೆಲೆಯಲ್ಲಿಯೇ ಜಗತ್ತಿಗೆ ಒಳಿತಾಗಲಿ, ಜಗತ್ತೇ ಕುಟುಂಬವಾಗಲಿ ಎಂಬ ಚಿಂತನೆ ಈ ನೆಲದಿಂದ ಹೊರಟಿದ್ದು. ಆರ್ಥಿಕ ದೃಷ್ಟಿಕೋನದಿಂದ ‘ಎಲ್ಲರಿಗೂ ಸಮಬಾಳು,ಎಲ್ಲರಿಗೂ ಸಮಪಾಲು’ ಎನ್ನುವ ಆಧುನಿಕ ಸಮಾಜವಾದ ಚಿಗಿತುಕೊಳ್ಳುವ ಸಾವಿರಾರು ವರ್ಷಗಳ ಮೊದಲೇ ಆಧ್ಯಾತ್ಮಿಕ ದೃಷ್ಟಿಯಿಂದ ಎಲ್ಲರೂ ಸಮಾನರು ಎಂಬ ಸತ್ಯವನ್ನು ಭಾರತ ಸಾಕ್ಷಾತ್ಕರಿಸಿಕೊಂಡಿತ್ತು. ಅದನ್ನು ಜಗತ್ತಿನ ಮುಂದಿರಿಸಿತು. ಜಗತ್ತಿನ ವಿವಿಧೆಡೆಗಳಿಂದ ಜ್ಞಾನಾಕಾಂಕ್ಷಿಗಳು ಭಾರತದತ್ತ ನಡೆದುಬಂದರು. ತಾನೇ ತಾನಾಗಿ ಭಾರತ ಜಗತ್ತಿನ ಗುರುಪೀಠವನ್ನು ಅಲಂಕರಿಸಿಬಿಟ್ಟಿತ್ತು.  ಭಾರತೀಯ ಸಂಸ್ಕೃತಿ ಎಂದರೆ, ಜ್ಞಾನ ಅರಸುವ, ಜ್ಞಾನ ನೀಡುವ ಸಂಸ್ಕೃತಿ ಎಂದು ಸ್ಥಾಪಿತವಾಯ್ತು.</p>
<p>ಸ್ವಾಮಿ ವಿವೇಕಾನಂದರು ಒಂದೆಡೆ, ‘ಭಾರತದ ಆತ್ಮ ಆಧ್ಯಾತ್ಮ’ ಎಂದು ಹೇಳಿರುವರು. ಈ ಕೇಂದ್ರವನ್ನು ಬದಲಾಯಿಸಲು ಪ್ರಯತ್ನ ನಡೆದಾಗಲೆಲ್ಲ ಇಲ್ಲಿ ಅಲ್ಲೋಲಕಲ್ಲೋಲವಾಗಿದೆ. ಪ್ರತಿ ಬಾರಿ ಮಹಾ ಪುರುಷರು ಜನ್ಮವೆತ್ತಿ ಬಂದು ಅದನ್ನು ಮತ್ತೆ ಕೇಂದ್ರದಲ್ಲಿ ತಂದು ನಿಲ್ಲಿಸಿದ್ದಾರೆ. ಪ್ರತಿ ಬಾರಿಯ ಆಕ್ರಮಣದಲ್ಲೂ ಭಾರತದ ಕೇಂದ್ರಕ್ಕೆ ಧಕ್ಕೆ ಉಂಟಾಗಿದೆ.</p>
<p>ಇರಲಿ. ಈ ರಾಷ್ಟ್ರದ ಮೇಲೆ ಆಕ್ರಮಣವಾಗಿದೆ ಎಂದಾಗ ಅದು ಬರಿಯ ಭೂಕಬಳಿಕೆಯ ಆಕ್ರಮಣವಲ್ಲ. ಅದು ಸಂಸ್ಕೃತಿಯ ಮೇಲಿನ ಆಕ್ರಮಣ. ಹಾಗೆ ನೋಡಿದರೆ ಭೂಕಬಳಿಕೆ ಶಾಶ್ವತವಾಗುವುದೂ ಸಂಸ್ಕೃತಿಯ ನಾಶದಿಂದಲೇ. ಈಗಿನ ಆಫ್ಘಾನಿಸ್ಥಾನ, ಗಾಂಧಾರಿಯ ತವರು. ಇತಿಹಾಸಕ್ಕೆ ಹೋದರೆ, ಬುದ್ಧ ತತ್ತ್ವದಿಂದ ಸಂಪನ್ನವಾಗಿದ್ದ ನಾಡು. ಈ ಭೂಮಿಯ ಮೇಲೆ ಇಸ್ಲಾಮೀಯ ದಾಳಿಗಳು ನಡೆದವು. ಅವರಂತೂ ಸಂಸ್ಕೃತಿಗೇ ಕೊಡಲಿಯಿಟ್ಟರು. ಜನರ ಸತ್ತ್ವ ನಾಶವಾಯ್ತು. ಪರಿಣಾಮವಾಗಿ ಆ ನಾಡು ನಮ್ಮಿಂದ ದೂರವಾಗುತ್ತ ಹೋಯ್ತು. ಅಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ನಮ್ಮ ವಿರೋಧಿಯೂ ಆಗಿಹೋಯ್ತು!</p>
<p>ಸಂಸ್ಕೃತಿಯ ಮೇಲಿನ ಆಕ್ರಮಣ ಉದ್ದೇಶಪೂರ್ವಕವಾದುದು. ಬೇರೊಂದು ಸಂಸ್ಕೃತಿಯನ್ನು ನಾಶಮಾಡಿ ತಮ್ಮ ಸಂಸ್ಕೃತಿಯನ್ನು ಹೇರುವ ಪ್ರಯತ್ನ ಅದು.<br />
ಭಾರತೀಯ ಸಂಸ್ಕೃತಿ ಕೂಡ ಜಗತ್ತಿನ ಇತರೆಡೆಯಲ್ಲಿ ವ್ಯಾಪಿಸಿದೆ. ಮಲಯ, ಜಾವಾ, ಸುಮಾತ್ರ, ಬಾಲಿ ಮೊದಲಾದೆಡೆಗಳಲ್ಲಿ ಸೂಕ್ಷ್ಮವಾಗಿ ನಮ್ಮ ಸಂಸ್ಕೃತಿ ಹಾಸುಹೊಕ್ಕಾಗಿರುವುದನ್ನು ನಾವು ಗಮನಿಸಬಹುದು. ಆದರೆ ಅದು ಒತ್ತಾಯದ ಹೇರಿಕೆಯಲ್ಲ. ಜ್ಞಾನ ದಾನಕ್ಕೆ, ವ್ಯಾಪಾರಕ್ಕೆ, ಸಾಂಸ್ಕೃತಿಕ ರಾಯಭಾರಕ್ಕೆಂದೇ ಭಾರತದಿಂದ ತೆರಳಿದ ಜನರು ಅಲ್ಲಿ ಪಸರಿಸಿದ, ಅಲ್ಲಿನ ಜನ ಆದರದಿಂದ ಸ್ವೀಕರಿಸಿದಂಥದ್ದು ಅದು. ಭಾರತೀಯರು ತಮ್ಮಲ್ಲಿರುವ ಸತ್ತ್ವಯುತ ಚಿಂತನೆಗಳನ್ನು ಹಂಚಿ ಜನಮನ್ನಣೆ ಗಳಿಸಿದರು. ಅವರೆಂದೂ ಖಡ್ಗ ಹಿಡಿದು ತಮ್ಮ ವಿಚಾರಗಳನ್ನು ಹೇರಲಿಲ್ಲ. ಹೀಗಾಗಿ ಭಾರತೀಯ ಸಂಸ್ಕೃತಿಯನ್ನು ಸ್ವೀಕರಿಸಿದ ಯಾವ ದೇಶಕ್ಕೂ ನಷ್ಟವಾಗಲಿಲ್ಲ. ಬದಲಿಗೆ ಲಾಭವೇ ಆಯಿತು. ಭಾರತದ ಮೇಲೆ ಆಕ್ರಮಣ ಮಾಡಿದ ಶಕರು, ಹೂಣರು ಕೇವಲ ಸಂಪತ್ತಿಗಾಗಿ ಆಕ್ರಮಣ ಮಾಡಿದ್ದರಿಂದ, ಕ್ರಮೇಣ ಅವರು ಭಾರತೀಯರಲ್ಲಿ ಒಂದಾಗಿ ಬೆರೆತು ಹೋದರು.</p>
<p>ಆದರೆ&#8230;. ಒಂದು ಸಾಮ್ರಾಜ್ಯ ಕಟ್ಟುವ ಬಯಕೆಯಿಂದ, ತಾವು ಅನುಸರಿಸುವ ಮತವನ್ನು ಹೇರುವ ಉದ್ದೇಶದಿಂದ ಆಕ್ರಮಣ ಮಾಡಿದ ಇಸ್ಲಾಮೀಯರು ನಮ್ಮ ದೇಶದ ಕೇಂದ್ರಕ್ಕೆ ಕೈಹಾಕಿದರು. ಹೆಣ್ಣನ್ನು ತಾಯಿಯೆಂದು ಪೂಜಿಸುವ ಸಂಸ್ಕೃತಿಯ ಮೇಲೆ ಹೆಣ್ನನ್ನು ಭೋಗದ ವಸ್ತುವೆಂದು ಕಾಣುವ ಸಂಸ್ಕೃತಿಯ ಅಕ್ರಮಣವಾಯ್ತು. ಅವರ ಕ್ರೌರ್ಯದೆದುರು ಭಾರತೀಯರ ಒಗ್ಗಟ್ಟು ಕದಡಿ ಹೋಯ್ತು. ಉತ್ತರ ಭಾರತದ ಅನೇಕ ಭೂಭಾಗಗಳಂತೂ ತತ್ತರಿಸಿಹೋದವು. ಹೆಣ್ಣು ಮಕ್ಕಳನ್ನು ಕಾಪಾಡಿಕೊಳ್ಳುವ ಸಲುವಾಗಿ ಹಿಂದೆಲ್ಲೂ ಇಲ್ಲದ ಬಾಲ್ಯ ವಿವಾಹ ಜಾರಿಗೆ ಬಂತು. ಬುರ್ಖಾ ಪದ್ಧತಿ ಆರಂಭವಾಯ್ತು. ಮಾನ ರಕ್ಷಣೆಗೆ ಜೌಹರ್ ಪದ್ಧತಿ ವಾಪಕವಾಯ್ತು.</p>
<p>ಈ ದೇಶಕ್ಕೆ ಒಗ್ಗದ ಸಂಸ್ಕೃತಿಯನ್ನು ಹೇರಲು ಹೊರಟವರ ವಿರುದ್ಧ ಎದೆ ಸೆಟೆದು ನಿಂತ ಸಿಖ್ ಪಂಥ, ಕತ್ತಿಯನ್ನೇ ಕುತ್ತಿಗೆಗೆ ಇಳಿಬಿಟ್ಟುಕೊಂಡಿತು. ಜನರ ಆಚಾರ ವಿಚಾರಗಳು ಆತ್ಮ ರಕ್ಷಣೆಯ ಅನಿವಾರ್ಯಕ್ಕೆ ಸಿಲುಕಿ ಬದಲಾಗುತ್ತ ಸಾಗಿದವು. ಒತ್ತಾಯವಾಗಿ ಹೇರಲ್ಪಟ್ಟ ಹೊರಗಿನ ಸಂಸ್ಕೃತಿಗೆ ಒಗ್ಗಿಕೊಳ್ಳಲಾಗದೆ, ತಮ್ಮದನ್ನು ಬಿಟ್ಟುಕೊಡಲಾಗದೆ, ಮಿಶ್ರ ಸಂಸ್ಕೃತಿಯೊಂದು ಹುಟ್ಟಿಕೊಂಡು, ಜನರನ್ನು ಎಲ್ಲಿಯೂ ಸಲ್ಲದ ಸ್ಥಿತಿಗೆ ತಂದುನಿಲ್ಲಿಸಿತು. ಇದು ಮತಾಂತರಕ್ಕೆ ಪ್ರಚೋದನೆ ನೀಡಿತು. ಹೀಗೆ ಮತಾಂತರಗೊಂದ ಜನ ತಮ್ಮ ಮೂಲ ಧರ್ಮದ ವಿರುದ್ಧ ಮಾತನಾಡಲಾರಂಭಿಸಿದರು. ಸ್ವಯಂ ರಕ್ಷಣೆಗೆ ಅದು ಅವರು ಆರಿಸಿಕೊಂಡ ಅಸ್ತ್ರವಾಗಿತ್ತು. ಕ್ರಮೇಣ ಅದು ಅಭ್ಯಾಸವೂ ಆಗಿ ಹೋಯ್ತು.<br />
“ಒಬ್ಬ ಮತಾಂತರಗೊಂಡರೆ ಹಿಂದೂ ಧರ್ಮಕ್ಕೆ ಒಬ್ಬನ ನಷ್ಟವಲ್ಲ, ಒಬ್ಬ ವಿರೋಧಿಯ ಹೆಚ್ಚಳ!&#8221; ಸ್ವಾಮಿ ವಿವೇಕಾನಂದರು ಹೇಳಿದ ಮಾತು ಅದೆಷ್ಟು ಸತ್ಯ!<br />
~<br />
ಭೂಮಾರ್ಗದ ಮೂಲಕ ಅರಬರು ನಡೆಸಿದ ಆಕ್ರಮಣಗಳು ಈ ಬಗೆಯ ಸಾಂಸ್ಕೃತಿಕ ಪಲ್ಲಟ ಉಂಟು ಮಾಡುತ್ತಿದ್ದ ಕಾಲದಲ್ಲಿ ಶಿವಾಜಿ ಮಹಾರಾಜರಂಥವರು ಅದಕ್ಕೆ ತಕ್ಕ ಪ್ರತಿರ್‍ಓಧವೊಡ್ಡಿ ಮತ್ತೆ ಭಾರತೀಯತೆಯನ್ನು ಸ್ಥಾಪಿಸುವ ಸಾರ್ಥಕ ಯತ್ನ ನಡೆಸಿದರು. ಭರತದ ಅಂತರ್ಪ್ರವಾಹವನ್ನು ಮತ್ತೆ ಸರಿಯಾದ ದಿಕ್ಕಿನತ್ತ ಹೊರಳಿಸಿದರು.<br />
ಇದೇ ವೇಳೆಗೆ ಪಶ್ಚಿಮದ ಕಡಲ್ಗಳ್ಳರ ಸುವ್ಯವಸ್ಥಿತ ಆಕ್ರಮನ ಅದಾಗಲೇ ಆರಂಭವಾಗಿಬಿಟ್ಟಿತ್ತು!</p>
<p>ಹಡಗುಗಳ ಮೂಲಕ ಸಂಪದ್ಭರಿತ ದೇಶಗಳನ್ನು ಹುಡುಕುತ್ತಾ ಸಾಗಿ, ಅದನ್ನು ಕೊಳ್ಳೆಹೊಡೆದು, ಅಲ್ಲಿ ತಮ್ಮ ರಾಜ್ಯವನ್ನೂ, ಮತವನ್ನೂ ಸ್ಥಾಪಿಸಿ ಮೆರೆಯುತ್ತಿದ್ದ ಪಾಶ್ಚಾತ್ಯರು ಭಾರತಕ್ಕೂ ಕಾಲಿಟ್ಟರು. ವ್ಯಾಪಾರದ ಸೋಗಿನಲ್ಲಿ ಬಂದವರು, ಬರಬರುತ್ತ ನಮ್ಮ ಮೇಲೆ ಆಳ್ವಿಕೆ ನಡೆಸುವ ಉಮೇದಿಗೆ ಬಿದ್ದರು. ಭಾರತದ ಆತ್ಮವನ್ನೇ ನಾಶಗೊಳಿಸದೆ ಅದು ಸಾಧ್ಯವಿಲ್ಲ ಎಂಬ ಸತ್ಯ ಅವರಿಗೆ ಗೊತ್ತಿತ್ತು. ಅದನ್ನು ಮೆಕಾಲೆ, ವಿಲ್ಟರ್ ಫೋರ್ಸ್ ನಂಥವರು ಬೇರೆ ಬೇರೆ ಸಂದರ್ಬಗಳಲ್ಲಿ ಹೇಳಿಯೂಬಿಟ್ಟರು. ಎಲ್ಲಿಯವರೆಗೆ ಇವರ ಆತ್ಮೋನ್ನತಿಯ ಶಿಕ್ಷಣವನ್ನು ಹಾಳುಮಾಡಲಾಗುವುದಿಲ್ಲವೋ, ಅಲ್ಲಿಯವರೆಗೆ ತಮ್ಮ ಸಾಮ್ರಾಜ್ಯ ಸ್ಥಾಪನೆಯೂ ಸಾಧ್ಯವಿಲ್ಲ ಎಂಬ ಅಳಲು ಅವರಿಗಿತ್ತು!</p>
<p>ಅಸಾಮಾನ್ಯ ತಂತ್ರ ನಿಪುಣರಾಗಿದ್ದ ಆಂಗ್ಲರು ಭಾರತದ ಬೌದ್ಧಿಕ ಸಂಪತ್ತಿಗೂ ಲಗ್ಗೆ ಹಾಕಿದರು. ತಮ್ಮ ಶಿಕ್ಷಣದ ಮೂಲಕ ಒಂದು ಬುದ್ಧಿವಂತರ ವರ್ಗ ಸೃಷ್ಟಿಸಿ, ಅವರ ಮೂಲಕವೇ ಇಲ್ಲಿನ ಸಂಸ್ಕೃತಿಯನ್ನು ಹಾಳುಗೆಡವುವ, ಇಲ್ಲಿನ ಜನರು ‘ಪಶ್ಚಿಮದ ನಾಗರಿಕತೆಯೇ ಶ್ರೇಷ್ಠ’ ಎಂದು ಭ್ರಮಿಸುವಂತೆ ಮಾಡುವ ಯೋಜನೆಗಳನ್ನು ರೂಪಿಸಿದರು. ಪರಿಣಾಮವಾಗಿ, ಭಾರತೀಯ ಚಿಂತನೆಗಳು ಅನಗರಿಕ, ಕೀಳು ಅಭಿರುಚಿಯವು ಎಂದು ತಿಳಿಯುತ್ತ, ಅದನ್ನೇ ಹೇಳಿಕೊಂಡು ತಿರುಗುವ ತಥಾಕಥಿತ ಬುದ್ಧಿಜೀವಿಗಳ ವರ್ಗವೊಂದು ನಿರ್ಮಾಣವಾಗಿಯೇಬಿಟ್ಟಿತು. ನೋಡನೋಡುತ್ತ, ಮೆಕಾಲೆ ಹೇಳಿದಂತೆ, ‘ಕರಿ ಚರ್ಮದ ಆಂಗ್ಲರ’ ಸಂತತಿ ನಾವಾಗಿಬಿಟ್ಟೆವು.</p>
<p>ಇಂಗ್ಲೀಶ್ ಭಾರತದ ಪಾಲಿಗೆ ಮರ್ಮಾಘಾತವನ್ನೇ ನೀಡಿತು. ಇಲ್ಲಿನ ಸ್ಥಳೀಯ ಭಾಷೆಗಳ ನಾಶಕ್ಕೆ, ಸಂಸ್ಕೃತಿಯ ನಾಶಕ್ಕೆ ಅದರ ಕೊಡುಗೆ ಅಪಾರ! ಭಾಷೆಯೊಂದಿಗೆ ಯಾರ ದ್ವೇಷವೂ ಇಲ್ಲ. ಆದರೆ, ಅದು ಹೊತ್ತು ತರುವ ಸಂಸ್ಕೃತಿ ವಿನಾಶಕಾರಿ. ( ಇವತ್ತಿಗೂ ಹಳ್ಳಿಯವನಂತೆ ಕಾಣುವ ವ್ಯಕ್ತಿಯೊಬ್ಬ ಅತ್ಯುನ್ನತ ಮಟದ ಇಂಗ್ಲಿಶ್ ಮಾತಾಡಿದರೆ ಅದನ್ನು ಅಚ್ಚರಿಯಿಂದ ನೋಡಲಾಗುತ್ತದೆ. ಇಂಗ್ಲಿಶ್ ಮಾತಾಡುವವನು ಅಪ್ಪಟ ಭಾರತೀಯನಂತಿರಲಾರನೆಂಬುದೇ ಸುಪ್ತ ಮನಸ್ಸಿನ ಚಿಂತನೆ!). ಇಂಗ್ಲಿಶ್ ಕಲಿತ ಶ್ರೀಮಂತ ಜನಗಳು ಆಚಾರ ವಿಚಾರಗಳೆಲ್ಲದರಲ್ಲಿ ಆಂಗ್ಲರನ್ನೇ ಅನುಕರಿಸುವುದು ಯಾರೂ ಅರಿಯದ ಸಂಗತಿಯೇನಲ್ಲ. ಸ್ವತಃ ವಿಲಿಯಂ ಬೆಂಟಿಕನೇ ಪತ್ರದಲ್ಲಿ ಹೇಳಿಕೊಂಡಿದ್ದ, “ಈ ಜನರು ದಾನ, ಭಿಕ್ಷೆಗಳನ್ನು ನೀಡುವುದು ಬಿಟ್ಟು ನಮ್ಮ ಪಾರ್ಟಿಗಳಿಗೆ ಖರ್ಚು ಮಾಡುತ್ತಿರುವುದು ನೋಡಿ ನನಗೆ ವಿಪರೀತ ಖುಷಿಯಾಗುತ್ತಿದೆ&#8221; ಎಂದು!</p>
<p>ಹೌದು. ಈ ಸಾಂಸ್ಕೃತಿಕ ಆಕ್ರಮಣ ಬರಿಯ ವೇಷ ಭೂಷಣಗಳನ್ನಷ್ಟೆ ಬದಲಾಯಿಸಿಲ್ಲ. ಮನಸ್ಸುಗಳನ್ನೂ ಕಲ್ಲಾಗಿಸಿಬಿಟ್ಟಿವೆ. ಅತ್ಯಂತ ಭವುಕವಾಗಿದ್ದ, ಜಗತ್ತಿನ ನೋವಿಗೆ ಸ್ಪಂದಿಸುತ್ತಿದ್ದ ಭಾರತ ಇಂದು ತನ್ನ ನೋವಿಗೆ ಅಳುವಷ್ಟು ಕಣ್ಣೀರನ್ನೂ ಉಳಿಸಿಕೊಂಡಿಲ್ಲ. ಟೀವಿಯಲ್ಲಿ ಬಾಂಬ್ ಸ್ಫೋಟದ- ಸತ್ತವರ ದೃಶ್ಯಗಳನ್ನು ನೋಡುತ್ತಲೇ ಕೇಕು ತಿನ್ನುವವರ ಸಂಖ್ಯೆ ಕಡಿಮೆಯೇನಿಲ್ಲ. ಇದು ಸಾಂಸ್ಕೃತಿಕ ಪಲ್ಲಟದ ಪರಿಣಾಮವಲ್ಲದೆ ಮತ್ತೇನು?</p>
<p>ನಮ್ಮ ಪ್ರಾಚೀನ ಶಿಕ್ಷಣ ಪದ್ಧತಿಯನ್ನು ಹಾಳುಮಾಡಿದ್ದೇ ಇವೆಲ್ಲಕ್ಕೂ ಮೂಲ ಕಾರಣ. ಬರಿಯ ಕಾರಕೂನರ ನಿರ್ಮಾಣದ ಶಿಕ್ಷಣ ಅದೆಷ್ಟು ನಿಸ್ತೇಜವಾಯ್ತೆಂದರೆ, ಅದು ಭಾರತೀಯ ಸಭ್ಯತೆ- ಸಂಸ್ಕೃತಿಗಳ ಅಶ್ವತ್ಥ ವೃಕ್ಷವನ್ನು ಮಕ್ಕಳಿಗೆ ಪರಿಚಯ ಮಾಡಿಸಿಕೊಡುವಲ್ಲಿ ಸೋತುಹೋಯಿತು. ಹೀಗಾಗಿಯೇ ಇಂದಿನ ಶಾಲಾ ಕಾಲೇಜುಗಳಲ್ಲಿ ಭಾರತದ ಬಗ್ಗೆ ಹೆಮ್ಮೆಯಿಂದ ಮಾತಾಡಬಲ್ಲ ವಿದ್ಯಾರ್ಥಿಗಳ ಸಂಖ್ಯೆ ಅತಿ ವಿರಳ. ತಮ್ಮನ್ನು ತಾವು ಗೆದ್ದುಕೊಳ್ಳುವ ವಿದ್ಯೆಯಲ್ಲಿ ಸಿದ್ಧ ಹಸ್ತವಾಗಿದ್ದ ಭಾರತ ಇಂದು ಆತ್ಮ ವಿಶ್ವಾಸವೇ ಇಲ್ಲದ ಸ್ಥಿತಿಗೆ ಇಳಿದುಬಿಟ್ಟಿದೆ. ಅಂತರ್ಮುಖತೆಯನ್ನು ಗಳಿಸಿಕೊಂಡು, ಕಣ್ಣೂ ಮುಚ್ಚಿಯೂ ನೋಡಬಲ್ಲ ಸಮರ್ಥ್ಯ ಹೊಂದಿದ್ದ ಭಾರತೀಯರು ತೆರೆದ ಕಣ್ಣಿಂದಲೂ ನೋಡಲು ಸಾಧ್ಯವಾಗದ ಹಂತ ತಲುಪಿದ್ದಾರೆ.</p>
<p>ಸಾನೆ ಗುರೂಜಿ ಒಂದು ಮಾತು ಹೇಳುತ್ತಾರೆ. “ಹಾಗೇನಾದರೂ ಬೇರೆ ಸಂಸ್ಕೃತಿಗಳ ಆಘಾತಕ್ಕೆ ಸಿಕ್ಕಿ ನಾಶವಾಗುವ ಸಂಸ್ಕೃತಿ ನಮ್ಮದಾದರೆ, ಅದು ನಾಶವಾಗುವುದೇ ಒಳ್ಳೆಯದು. ಆದರೆ, ಹಾಗೆಲ್ಲ ಸಣ್ಣ ಗಾಳಿಗೆ ಪತರಗುಟ್ಟುವ ಸಂಸ್ಕೃತಿ ನಮ್ಮದಲ್ಲ&#8221; ಎಂದು.<br />
ಇಲ್ಲೊಂದು ಭರವಸೆ ಮೂಡುತ್ತದೆ. ‘ನಿತ್ಯ ನೂತನೇ ಸನಾತನೀ’ ಎನ್ನುವ ಮಾತಿದೆ. ಯಾವುದು ಸದಾ ಹೊಸ  ಹೊಸ ಝರಿಗಳನ್ನು ತನ್ನೊಳಗೆ ಸೇರಿಸಿಕೊಂಡು ಹರಿಯುತ್ತದೆಯೋ, ಅದರ ಸತ್ತ್ವವನ್ನು ಅರಗಿಸಿಕೊಂಡು ಪ್ರವಾಹವಾಗಿ ಮುನ್ನುಗ್ಗುತ್ತದೆಯೋ ಅದೇ ‘ಸನಾತನ’.  ಅದು, ಎಲ್ಲವನ್ನೂ ಜೀರ್ಣಿಸಿಕೊಂಡು ಬೆಳೆಯುವ ಮಹಾವೃಕ್ಷ. ನಾವಿದರ ರೆಂಬೆಗಳಾಗೋಣ. ಈ ಮಹಾಪ್ರವಾಹವನ್ನು ಸೇರುವ ಉಪನದಿಗಳಾಗೋಣ. ದಾರಿ ತಪ್ಪುವ ಕವಲುಗಳನ್ನೂ ಸೇರಿಸಿಕೊಂಡು ಮುನ್ನಡೆಯೋಣ.<br />
ಭವಿಷ್ಯದ ಅಧಿಪತಿಗಳು ನಾವು; ವರ್ತಮಾನವನ್ನೂ ನಮ್ಮದಾಗಿಸಿಕೊಳ್ಳೋಣ.</p>
]]></content:encoded>
			<wfw:commentRss>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%b8%e0%b2%be%e0%b2%82%e0%b2%b8%e0%b3%8d%e0%b2%95%e0%b3%83%e0%b2%a4%e0%b2%bf%e0%b2%95-%e0%b2%86%e0%b2%95%e0%b3%8d%e0%b2%b0%e0%b2%ae%e0%b2%a3%e0%b2%97%e0%b2%b3%e0%b3%81-%e0%b2%ae%e0%b2%a4%e0%b3%-2/feed/</wfw:commentRss>
		<slash:comments>2</slash:comments>
		</item>
		<item>
		<title>ಅಮೆರಿಕನ್ನರಿಂದ ಪಾಠ ಕಲಿಯಲಿದು ಸಕಾಲ&#8230;</title>
		<link>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%85%e0%b2%ae%e0%b3%86%e0%b2%b0%e0%b2%bf%e0%b2%95%e0%b2%a8%e0%b3%8d%e0%b2%a8%e0%b2%b0%e0%b2%bf%e0%b2%82%e0%b2%a6-%e0%b2%aa%e0%b2%be%e0%b2%a0-%e0%b2%95%e0%b2%b2%e0%b2%bf%e0%b2%af%e0%b2%b2%e0%b2%-2/</link>
		<comments>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%85%e0%b2%ae%e0%b3%86%e0%b2%b0%e0%b2%bf%e0%b2%95%e0%b2%a8%e0%b3%8d%e0%b2%a8%e0%b2%b0%e0%b2%bf%e0%b2%82%e0%b2%a6-%e0%b2%aa%e0%b2%be%e0%b2%a0-%e0%b2%95%e0%b2%b2%e0%b2%bf%e0%b2%af%e0%b2%b2%e0%b2%-2/#comments</comments>
		<pubDate>Fri, 28 Nov 2008 06:25:00 +0000</pubDate>
		<dc:creator>admin</dc:creator>
				<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>
		<category><![CDATA[ಭಯೋತ್ಪಾದನೆ]]></category>

		<guid isPermaLink="false">http://neladamaatu.wordpress.com/?p=66</guid>
		<description><![CDATA[ಮನಸ್ಸೇನೋ ಕುದಿಯುತ್ತಿದೆ. ಆದರೇನು? ಸ್ವಲ್ಪ ಕಾಲ ಸುಮ್ಮನಿರೋಣ. ಅದು ಅಮೆರಿಕ ಕಲಿಸಿದ ಪಾಠ. ವಿಶ್ವ ವ್ಯಾಪಾರಕೇಂದ್ರ ಕಟ್ಟಡಗಳು ಉರುಳಿಬಿದ್ದಾಗ ಅಮೆರಿಕನ್ನರು ಅಧ್ಯಕ್ಷರ ಮೇಲೆ ಎದುರಾಡಾಲಿಲ್ಲ. ಸುಮ್ಮನಿದ್ದರು. ಆಫ್ಘಾನಿಸ್ಥಾನದ ಮೇಲೆ ಮುಗಿಬಿದ್ದರು. ತಮ್ಮ ದೇಶದಲ್ಲಿ ಕಳಕೊಂಡ ಒಂದೊಂದು ಜೀವದ ಲೆಕ್ಕ ಚುಕ್ತಾ ಮಾಡಿದರು. ಇಷ್ಟಕ್ಕೂ ನಾವೀಗ ನೇರ ಆಕ್ರಮಣವನ್ನೇನೂ ಮಾಡಬೇಕಿಲ್ಲ. ಪಾಕಿಸ್ಥಾನದ ಮೇಲೆ ಆರ್ಥಿಕ ದಿಗ್ಬಂಧನ ಹೇರಿದರೂ ಸಾಕು. ಅದರೊಂದಿಗೆ ಸಂಬಂಧ ಹೊಂದಿರುವ ದೇಶಗಳತ್ತ ಮುನಿಸಿ ಕುಂತರೂ ಸಾಕು. ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಆಘಾತವನ್ನೇ ನೀಡಿದಂತಾಗುತ್ತದೆ. ಭಾರತದ ಹಿಂದಿನ ವೈಭವವನ್ನು [...]]]></description>
			<content:encoded><![CDATA[<blockquote><p>ಮನಸ್ಸೇನೋ ಕುದಿಯುತ್ತಿದೆ. ಆದರೇನು? ಸ್ವಲ್ಪ ಕಾಲ ಸುಮ್ಮನಿರೋಣ. ಅದು ಅಮೆರಿಕ ಕಲಿಸಿದ ಪಾಠ. ವಿಶ್ವ ವ್ಯಾಪಾರಕೇಂದ್ರ ಕಟ್ಟಡಗಳು ಉರುಳಿಬಿದ್ದಾಗ ಅಮೆರಿಕನ್ನರು ಅಧ್ಯಕ್ಷರ ಮೇಲೆ ಎದುರಾಡಾಲಿಲ್ಲ. ಸುಮ್ಮನಿದ್ದರು. ಆಫ್ಘಾನಿಸ್ಥಾನದ ಮೇಲೆ ಮುಗಿಬಿದ್ದರು. ತಮ್ಮ ದೇಶದಲ್ಲಿ ಕಳಕೊಂಡ ಒಂದೊಂದು ಜೀವದ ಲೆಕ್ಕ ಚುಕ್ತಾ ಮಾಡಿದರು. ಇಷ್ಟಕ್ಕೂ ನಾವೀಗ ನೇರ ಆಕ್ರಮಣವನ್ನೇನೂ ಮಾಡಬೇಕಿಲ್ಲ. ಪಾಕಿಸ್ಥಾನದ ಮೇಲೆ ಆರ್ಥಿಕ ದಿಗ್ಬಂಧನ ಹೇರಿದರೂ ಸಾಕು. ಅದರೊಂದಿಗೆ ಸಂಬಂಧ ಹೊಂದಿರುವ ದೇಶಗಳತ್ತ ಮುನಿಸಿ ಕುಂತರೂ ಸಾಕು. ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಆಘಾತವನ್ನೇ ನೀಡಿದಂತಾಗುತ್ತದೆ.</p></blockquote>
<p>ಭಾರತದ ಹಿಂದಿನ ವೈಭವವನ್ನು ಹೇಳಿ- ಕೇಳಿ ಸಾಕಾಗಿಹೋಗಿದೆ. ಒಂದೋ ನಾವೀಗ ಬದುಕಬೇಕು, ಇಲ್ಲವೇ ಇಡಿಯ ರಾಷ್ಟ್ರವನ್ನು ನಿರ್ನಾಮಗೊಳ್ಳಲು ಬಿಟ್ಟು ಸಾಯಬೇಕು. ಹೋರಾಡಿ ಬದುಕುವುದಕ್ಕಿಂತ ನರಸತ್ತವರ ಹಾಗೆ ಸಾಯುವುದೇ ಸರಿ ಎಂದವರ ಬಗ್ಗೆ ಯಾರೇನೂ ಮಾಡಲಾಗದು. ಅಂಥವರು ತಮ್ಮೂರ ರಸ್ತೆಗಳಲ್ಲಿ ಅಡ್ಡಾದಿಡ್ಡಿ ಹಾರಾಡುವ ಉಗ್ರರ ಗುಂಡುಗಳಿಗೆ ಹೆಣವಾಗುತ್ತಾರೆ. ಹೀಗೆ ಸತ್ತಿದ್ದಕ್ಕೆ ಸರ್ಕಾರದಿಂದ ಲಕ್ಷ ಲಕ್ಷ ರುಪಾಯಿಗಳ ಭಕ್ಷೀಸು ಪಡೆಯುತ್ತಾರೆ.<br />
ಇಂತಹ ಸಾವಿಗೆ ನಮ್ಮ ಪಾಳಿ ಎಂದು ಬಂದೀತೋ ಎಂದು ಕಾಯುತ್ತ ಕೂರೋಣವೆ?</p>
<p>ನಮ್ಮಲ್ಲಿ ಜೀವಗಳಿಗೆ ಬೆಲೆಯೇ ಇಲ್ಲ. ಇಂದು ಬಾಂಬ್ ದಾಳಿಗೆ ತತ್ತರಿಸಿದ ಮುಂಬಯಿಯಲ್ಲಿ ನಾಳೆ ಎಲ್ಲವೂ ಸರಿಯಾಗಿಯೇ ನಡೆಯುತ್ತದೆ. ಬೆಳಗಿನ ಎಕ್ಸ್ ಪ್ರೆಸ್ ರೈಲು ಸರಿಯಾದ ಸಮಯಕ್ಕೆ ಬರುತ್ತದೆ. ಕಾಲಿಗೆ ಬಿಗಿಯಾಗಿ ಲೇಸ್ ಕಟ್ಟಿಸಿಕೊಂಡ ಮಗು ತನ್ನ ಶಾಲೆಗೆ ಹೊರಡುತ್ತದೆ. ತರಕಾರಿ ಮಾರಾಟ, ಹೆಂಗಸರ ಚೌಕಶಿ, ಷೇರು ಪೇಟೆ- ಎಲ್ಲವೂ ಮಾಮೂಲಿ. ಆದರೆ, ರಾಷ್ಟ್ರದ ಅಸ್ಮಿತೆಗೆ ಆದ ಗಾಯ&#8230;? ಅದು ಮಾಯುವುದು ಯಾವಾಗ?</p>
<p>೧೯೯೩ರಲ್ಲಿ ಆದ ಮುಂಬೈ ಸರಣಿ ಸ್ಫೋಟದ ರೂವಾರಿಗಳೇ ಇನ್ನೂ ಕೈಗೆ ಸಿಕ್ಕಿಲ್ಲ. ಸಂಸತ್ತಿನ ಮೇಲೆ ಆಕ್ರಮಣ ಮಾಡಿದವರಿಗೆ ಶಿಕ್ಷೆ ಘೋಷಣೆಯಾಗಿದ್ದರೂ ಜಾರಿಯಾಗಿಲ್ಲ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ನಡೆಸಿದವರೂ ಪತ್ತೆಯಾಗಿಲ್ಲ. ಕರಾಚಿಯಿಂದ ಉಗ್ರರು ಮುಂಬೈಗೆ ರಾಜಾರೋಷವಾಗಿ ಬಂದಿದ್ದಾರೆಂದರೆ, ಇಡಿಯ ರಕ್ಷಣಾ ವ್ಯವಸ್ಥೆ ಅದೆಷ್ಟು ಹದಗೆಟ್ಟಿದೆಯೆಂದು ಕೇಳುವವರಿಲ್ಲ.<br />
ಪಟ್ಟಿ ಸಕಷ್ಟು ಉದ್ದವಿದೆ. ರಾಷ್ಟ್ರವೆಂಬ ನ್ಯಾಯಾಲಯದಲ್ಲಿ ನಾವೆಲ್ಲರೂ ಅಪರಾಧಿ ಸ್ಥಾನದಲ್ಲಿದ್ದೇವೆ. ನಿಷ್ಕ್ರಿಯತೆಯ ಕಳಂಕ ನಮ್ಮನ್ನು ಮೆತ್ತಿಕೊಂಡಿದೆ. ಇನ್ನು ಬಹುಕಾಲ ಇದು ನಡೆಯಲಾರದು. ನಮ್ಮ ದಾರಿ ನಾವು ಆರಿಸಿಕೊಳ್ಳಬೇಕಿದೆ. ಒಂದೋ ಹೇಡಿಗಳಂತೆ ಸಾಯಬೇಕು, ಇಲ್ಲವೇ ದೇಶದ್ರೋಹಿಗಳನ್ನು ಹುಡುಹುಡುಕಿ ಕೊಲ್ಲಬೇಕು. ಇದು ತುರ್ತು ಪರಿಸ್ಥಿತಿ. ಹೀನ ರಕ್ಷಣಾ ಮಂತ್ರಿ ಶಿವರಾಜ ಪಾಟೀಲರನ್ನು, ಚಮಚಾಗಿರಿಗಷ್ಟೇ ಸೂಕ್ತರಾದ ಮನಮೋಹನ ಸಿಂಗರನ್ನು ತರಾಟೆಗೆ ತೆಗೆದುಕೊಳ್ಳಲು ಇದು ಸಕಾಲವಲ್ಲ. </p>
<p>ಮನಸ್ಸೇನೋ ಕುದಿಯುತ್ತಿದೆ. ಆದರೇನು? ಸ್ವಲ್ಪ ಕಾಲ ಸುಮ್ಮನಿರೋಣ. ಅದು ಅಮೆರಿಕ ಕಲಿಸಿದ ಪಾಠ. ವಿಶ್ವ ವ್ಯಾಪಾರಕೇಂದ್ರ ಕಟ್ಟಡಗಳು ಉರುಳಿಬಿದ್ದಾಗ ಅಮೆರಿಕನ್ನರು ಅಧ್ಯಕ್ಷರ ಮೇಲೆ ಎದುರಾಡಾಲಿಲ್ಲ. ಸುಮ್ಮನಿದ್ದರು. ಆಫ್ಘಾನಿಸ್ಥಾನದ ಮೇಲೆ ಮುಗಿಬಿದ್ದರು. ತಮ್ಮ ದೇಶದಲ್ಲಿ ಕಳಕೊಂಡ ಒಂದೊಂದು ಜೀವದ ಲೆಕ್ಕ ಚುಕ್ತಾ ಮಾಡಿದರು.<br />
ನಮ್ಮ ಪ್ರಧಾನಿಗೆ ಅಷ್ಟೊಂದು ತಾಕತ್ತಿಲ್ಲ ಬಿಡಿ. ಇಷ್ಟಕ್ಕೂ ನಾವೀಗ ನೇರ ಆಕ್ರಮಣವನ್ನೇನೂ ಮಾಡಬೇಕಿಲ್ಲ. ಪಾಕಿಸ್ಥಾನದ ಮೇಲೆ ಆರ್ಥಿಕ ದಿಗ್ಬಂಧನ ಹೇರಿದರೂ ಸಾಕು. ಅದರೊಂದಿಗೆ ಸಂಬಂಧ ಹೊಂದಿರುವ ದೇಶಗಳತ್ತ ಮುನಿಸಿ ಕುಂತರೂ ಸಾಕು. ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಆಘಾತವನ್ನೇ ನೀಡಿದಂತಾಗುತ್ತದೆ.</p>
<p>ಆದರೇನು? ಅಂಥದೊಂದು ಇಚ್ಛಾಶಕ್ತಿ ಬೇಕಲ್ಲ? ಓಟಿಗಾಗಿ ಗಡ್ಡ ನೆಕ್ಕುವವರು ಬದುಕಿರುವವರೆಗೆ ಅದು ಸಾಧ್ಯವಾಗಲಾರದು. ಅವರನ್ನು ಪಕ್ಕಕ್ಕೆ ತಳ್ಳಿನಾವೇ ಮುಂದೆ ಬಂದರೆ&#8230;? ಅದು ಸರಿ. ಎದುರು ಬಂದ ಸೋಗಲಾಡಿ ಬುದ್ಧಿಜೀವಿಗಳನ್ನು, ಭಾರತೀಯತೆಯ ಬದ್ಧ ದ್ವೇಷಿಗಳನ್ನು ಹಳ್ಳದಲ್ಲಿ ಹೂತು, ರಾಷ್ಟ್ರ ರಕ್ಷಿಸುವ ಹೊಣೆ ನಮ್ಮದೇ.</p>
<p>ಈ ಬಾರಿ ಪ್ರತ್ಯುತ್ತರ ನೀಡಬೇಕಿರುವ ಹೊಣೆ ಇಂಟೆಲಿಜೆನ್ಸ್ ಅಧಿಕಾರಿಗಳದಲ್ಲ, ರಾಜಕಾರಣಿಗಳದೂ ಅಲ್ಲ. ಅದು ನಮ್ಮದು. ನಮ್ಮದೇ.<br />
ಭಯೋತ್ಪಾದಕರ ಬೆಂಬಲಿಗರು ನಮ್ಮ ನಡುವೆಯೇ ಇದ್ದಾರೆ. ಅಂಥವರ ಮೇಲೆ ದಿಗ್ಬಂಧನ ನಾವು ಹೇರೋಣ. ಒಂದೊಂದು ಅನ್ನದ ಕಾಳಿಗೂ ಅವರು ಪರಿತಪಿಸುವಂತಾಗಬೇಕು. ಅಲ್ಲಿಂದ ಹೊರಟ ಬೇಗೆ, ಭಯೋತ್ಪಾದನೆಯನ್ನು ಸುಟ್ಟು ಬೂದಿ ಮಾಡಲಿ. ನಮ್ಮಲ್ಲಿರುವ ಅಸ್ತ್ರ ಇದೊಂದೇ.<br />
ಬಳಸಿ. ಚೆನ್ನಾಗಿ ಬಳಸಿ. ಇದು ಕೊನೆಯ ಯುದ್ಧ. ಈ ಬಾರಿ ಗೆಲ್ಲೋಣ. ಇಲ್ಲವೇ ಸತ್ತು ಮಲಗೋಣ. ಆಯ್ಕೆ- ನಿಮ್ಮದು.</p>
]]></content:encoded>
			<wfw:commentRss>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%85%e0%b2%ae%e0%b3%86%e0%b2%b0%e0%b2%bf%e0%b2%95%e0%b2%a8%e0%b3%8d%e0%b2%a8%e0%b2%b0%e0%b2%bf%e0%b2%82%e0%b2%a6-%e0%b2%aa%e0%b2%be%e0%b2%a0-%e0%b2%95%e0%b2%b2%e0%b2%bf%e0%b2%af%e0%b2%b2%e0%b2%-2/feed/</wfw:commentRss>
		<slash:comments>5</slash:comments>
		</item>
		<item>
		<title>ವಿವೇಕಾನಂದನೆಂಬ ವೀರ ಸಂನ್ಯಾಸಿ</title>
		<link>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%b5%e0%b2%bf%e0%b2%b5%e0%b3%87%e0%b2%95%e0%b2%be%e0%b2%a8%e0%b2%82%e0%b2%a6%e0%b2%a8%e0%b3%86%e0%b2%82%e0%b2%ac-%e0%b2%b5%e0%b3%80%e0%b2%b0-%e0%b2%b8%e0%b2%82%e0%b2%a8%e0%b3%8d%e0%b2%af%e0%b2%be/</link>
		<comments>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%b5%e0%b2%bf%e0%b2%b5%e0%b3%87%e0%b2%95%e0%b2%be%e0%b2%a8%e0%b2%82%e0%b2%a6%e0%b2%a8%e0%b3%86%e0%b2%82%e0%b2%ac-%e0%b2%b5%e0%b3%80%e0%b2%b0-%e0%b2%b8%e0%b2%82%e0%b2%a8%e0%b3%8d%e0%b2%af%e0%b2%be/#comments</comments>
		<pubDate>Fri, 19 Sep 2008 05:25:52 +0000</pubDate>
		<dc:creator>admin</dc:creator>
				<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>
		<category><![CDATA[ಚಿಕಾಗೋ ಭಾಷಣ]]></category>
		<category><![CDATA[ವಿವೇಕಾನಂದ]]></category>
		<category><![CDATA[ಸರ್ವಧರ್ಮ ಸಮ್ಮೇಳನ]]></category>

		<guid isPermaLink="false">http://neladamaatu.wordpress.com/?p=51</guid>
		<description><![CDATA[ಸೆಪ್ಟೆಂಬರ್ ಹನ್ನೊಂದು ಅಂತಾದರೂ ಕರೆಯಿರಿ, ೯/೧೧ ಅಂತಾದರೂ ಹೇಳಿ. ಮನಸ್ಸು ಅಮೆರಿಕಾದತ್ತ ಧಾವಿಸಿಬಿಡುತ್ತದೆ. ವಿಶ್ವ ವ್ಯಾಪರ ಕೇಂದ್ರದ ಎರಡು ಕಟ್ಟಡಗಳನ್ನು ಭಯೋತ್ಪಾದಕರು ಉರುಳಿಸಿದ್ದು ಕಣ್ಮುಂದೆ ಅಲೆಅಲೆಯಾಗಿ ತೇಲಿ ಹೋಗುತ್ತದೆ. ಅಲ್ಲದೆ ಮತ್ತೇನು? ಉರುಳುವ ಕಟ್ಟಡಗಳನ್ನು ಟಿವಿಯ ಮುಂದೆ ಕುಳಿತು ನೇರ ಪ್ರಸಾರದಲ್ಲಿ ನೋಡಿದವರಲ್ಲವೆ ನಾವು!? ಆದರೆ ಈ ಅಮೆರಿಕಾ ಸೆಪ್ಟೆಂಬರ್ ಹನ್ನೊಂದರಂದೇ ಇನ್ನೊಂದು ಸಾತ್ತ್ವಿಕ ಸುನಾಮಿಗೆ ಸಿಲುಕಿ ಅಲುಗಾಡಿದ್ದು ಬಹುತೆಕರಿಗೆ ಮರೆತೇಹೋಗಿದೆ. ಅವತ್ತು ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದ ವೇದಿಕೆ ಮೆಲೆ ನಿಂತು, ಕೇವಲ ಮೂರೂವರೆ [...]]]></description>
			<content:encoded><![CDATA[<p>ಸೆಪ್ಟೆಂಬರ್ ಹನ್ನೊಂದು ಅಂತಾದರೂ ಕರೆಯಿರಿ, ೯/೧೧ ಅಂತಾದರೂ ಹೇಳಿ. ಮನಸ್ಸು ಅಮೆರಿಕಾದತ್ತ ಧಾವಿಸಿಬಿಡುತ್ತದೆ. ವಿಶ್ವ ವ್ಯಾಪರ ಕೇಂದ್ರದ ಎರಡು ಕಟ್ಟಡಗಳನ್ನು ಭಯೋತ್ಪಾದಕರು ಉರುಳಿಸಿದ್ದು ಕಣ್ಮುಂದೆ ಅಲೆಅಲೆಯಾಗಿ ತೇಲಿ ಹೋಗುತ್ತದೆ. ಅಲ್ಲದೆ ಮತ್ತೇನು? ಉರುಳುವ ಕಟ್ಟಡಗಳನ್ನು ಟಿವಿಯ ಮುಂದೆ ಕುಳಿತು ನೇರ ಪ್ರಸಾರದಲ್ಲಿ ನೋಡಿದವರಲ್ಲವೆ ನಾವು!?</p>
<p>ಆದರೆ ಈ ಅಮೆರಿಕಾ ಸೆಪ್ಟೆಂಬರ್ ಹನ್ನೊಂದರಂದೇ ಇನ್ನೊಂದು ಸಾತ್ತ್ವಿಕ ಸುನಾಮಿಗೆ ಸಿಲುಕಿ ಅಲುಗಾಡಿದ್ದು ಬಹುತೆಕರಿಗೆ ಮರೆತೇಹೋಗಿದೆ. ಅವತ್ತು ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದ ವೇದಿಕೆ ಮೆಲೆ ನಿಂತು, ಕೇವಲ ಮೂರೂವರೆ ನಿಮಿಷಗಳಲ್ಲಿ ಸಾಕ್ಷಾತ್ ಅಮೆರಿಕೆಯನ್ನೇ ಧರೆಗೆ ಕೆಡವಿದ್ದರು.</p>
<p>ಸ್ವಲ್ಪ ವಿಚಾರ ಮಾಡಿ. ಎರಡರಲ್ಲೂ ಅದೆಷ್ಟು ಅಂತರ! ರಾಕ್ಷಸೀ ವೃತ್ತಿಯಿಂದ, ಧರ್ಮಾಂಧತೆಯ ಮೂರ್ತ ರೂಪವಾಗಿದ್ದ ಲ್ಯಾಡೆನ್ ಕೆಡವಿದ್ದು ಅಮೆರಿಕೆಯ ಹೊರರೂಪದ ಎರಡು ಕಟ್ಟಡಗಳನ್ನು ಮಾತ್ರ. ಬಂದೂಕು, ಮದ್ದು ಗುಂಡುಗಳನೆಲ್ಲ ಬಳಸಿ ಲ್ಯಾಡೆನ್ ಮತ್ತವನ ಸಹಚರರು ಕಟ್ಟಡಗಳಿಗೆ ಧಕ್ಕೆ ನೀಡಿದರು, ಒಂದಷ್ಟು ಜೀವ ತೆಗೆದರು.<br />
ಆದರೆ ಸ್ವಾಮಿ ವಿವೇಕಾನಂದರು ವೇದಿಕೆಯ ಮೇಲೆ ನಿಂತು ಬರೀ ಮಾತಿನ ತುಪಾಕಿಯಿಂದ ಅಮೆರಿಕನ್ನರ ಅಂತಃಸತ್ತ್ವವನ್ನೇ ಅಲುಗಾಡಿಸಿಬಿಟ್ಟರು. ಅಲ್ಲಿನ ಜ್ಞಾನಿಗಳು, ಪಂಡಿತರು, ಅಲ್ಲಿ ನೆರೆದಿದ್ದ ಅನ್ಯ ಧರ್ಮೀಯರೆಲ್ಲರೂ ತಲೆದೂಗುವಂತೆ ಮಾಡಿಬಿಟ್ಟರು. ಆಧ್ಯಾತ್ಮಿಕತೆಯ ಗಂಧ ಗಾಳಿಯಿಲ್ಲದ ಭೋಗ ಭೂಮಿಯ ಜನತೆಗೆ ಮಾತಿನ ಅಮೃತ ಸಿಂಚನ ಹರಿಸಿ ಜೀವದಾನ ಮಾಡಿದರು.</p>
<p>ಈ ಎರಡೂ ಘಟನೆಗಳ ಪರಿಣಾಮವೂ ಸ್ವಾರಸ್ಯಕರ. ಒಂದು ಘಟನೆಯ ನಂತರ ಅಮೆರಿಕಾ ಆಫ್ಘಾನಿಸ್ತಾನಕ್ಕೆ ನುಗ್ಗಿ, ಲ್ಯಾಡೆನ್ನನ ದೇಶವನ್ನು ಸಂಪೂರ್ಣ ನಾಶಗೈದರೆ, ವಿವೇಕಾನಂದರ ಮಾತಿಗೆ ಮರುಳಾದ ಪಾಶ್ಚಾತ್ಯರನೇಕರು ಭಾರತದ ಸೇವೆಗೆ ಸಿದ್ಧರಾಗಿ ನಿಂತರು!</p>
<p>ಸ್ವಾಮಿ ವಿವೇಕಾನಂದರ ಈ ಜೈತ್ರಯಾತ್ರೆ ನಿಜಕ್ಕೂ ಅದ್ಭುತ ಪವಾಡವೇ ಸರಿ. ಪರದೇಶಗಳ ಪರಿಚಯವೇ ಇಲ್ಲದ, ಹೊಟ್ಟೆ- ಬಟ್ಟೆಗಳ ಪರಿವೆ ಇಲ್ಲದ, ಎಲ್ಲಿಗೆ ಹೇಗುವುದು, ಏನು ಮಾತನಾಡುವುದೆಂಬುದರ ಅರಿವಿಲ್ಲದ, ಕೊನೆಗೆ- ತಾನಾರೆಂಬ ಪರಿಚಯ ಪತ್ರವೂ ಇಲ್ಲದ ವ್ಯಕ್ತಿಯೊಬ್ಬ ದಿನ ಬೆಳಗಾಗುವುದರಲ್ಲಿ ವಿಶ್ವವಿಖ್ಯಾತನಾಗಿದ್ದು ಪವಾಡವಲ್ಲದೆ ಮತ್ತೇನು?</p>
<p>“ನ ರತ್ನಂ ಅನ್ವಿಷ್ಯತಿ ಮೃಗ್ಯಾತೇ ಹಿ ತತ್’ (ರತ್ನ ತಾನೇ ಯಾರನ್ನೂ ಅರಸುತ್ತ ಹೋಗುವುದಿಲ್ಲ, ಅದು ಹುಡುಕಲ್ಪಡುತ್ತದೆ) ಎನ್ನುವಂತೆ ವಿವೇಕಾನಂದರ ಪ್ರಭೆ ತಾನೇತಾನಾಗಿ ಹರಡಿತು. ಇವರ ಪ್ರಭಾವಕ್ಕೆ ಸಿಕ್ಕು ಮನೆಗೆ ಆಹ್ವಾನಿಸಿದ ಹಾರ್ವರ್ಡ್ ಯುನಿವರ್ಸಿಟಿಯ ಪ್ರೊಫೆಸರ್ ರೈಟ್ ಎರಡು ದಿನ ಇವರೊಡನೆ ಮಾತು ಕತೆಯಾಡಿ ಉದ್ಗರಿಸಿದ್ದರು- “ಅಮೆರಿಕದ ನೆಲದ ಮೇಲೆ ಕಳೆದ ನಾಲ್ಕುನೂರು ವರ್ಷಗಳಲ್ಲಿ ಇಂತಹ ಜ್ಞಾನಿ ತಿರುಗಾಡಿದ ಉಲ್ಲೇಖಗಳೇ ಇಲ್ಲ!&#8221; ಎಂದು. ಸ್ವಾಮೀಜಿ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತಮ್ಮ ಬಳಿ ಪರಿಚಯ ಪತ್ರವಿಲ್ಲ ಎಂದಾಗ ಆತ ನಕ್ಕುಬಿಟ್ಟಿದ್ದರು. “ನೀವು ಯಾರೆಂದು ಕೇಳುವುದೂ, ಸೂರ್ಯನಿಗೆ ಹೊಳೆಯಲು ಏನಧಿಕಾರ ಎಂದು ಕೇಳುವುದೂ ಒಂದೇ!!&#8221; ಎಂದಿದ್ದರು.</p>
<p>ಚಿಕಾಗೋ ವೇದಿಕೆಯ ಮೇಲಿಂದ ಭುವಿ ಬಿರಿಯುವಂತೆ ಮೊಳಗಿದ ವಿವೇಕಾನಂದನ ಪಾದ ಚುಂಬಿಸಲು ಅಮೆರಿಕವೇ ಸಿದ್ಧವಾಗಿ ನಿಂತಿತ್ತು. (ಕ್ರಿಶ್ಚಿಯನ್ ಪಾದ್ರಿಗಳನ್ನು ಬಿಟ್ಟು. ಏಕೆಂದರೆ, ಅವರ ಉದ್ಯೋಗಕ್ಕೇ ಈತ ಸಂಚಕಾರ ತಂದುಬಿಟ್ಟಿದ್ದ!). ವಿವೇಕಾನಂದ ಎಗ್ಗಿಲ್ಲದೆ ನುಡಿದ. ಕ್ರಿಶ್ಚಿಯನ್ನರ ನಾಡಿನಲ್ಲಿ ನಿಂತು, ನಮ್ಮ ನಾಡಿಗೆ ಬೇಕಾಗಿದ್ದುದು ಅನ್ನವೇ ಹೊರತು ಧರ್ಮವಲ್ಲವೆಂದ. ಸಾಧ್ಯವಿದ್ದರೆ ಅನ್ನ ಕೊಡಿ, ಇಲ್ಲವಾದರೆ ತೆಪ್ಪಗಿರಿ ಎಂದುಬಿಟ್ಟ. ತನ್ನ ರಾಷ್ಟ್ರದ ಬಗ್ಗೆ, ಧರ್ಮದ ಶ್ರೇಷ್ಠತೆಯ ಬಗ್ಗೆ ಆತನಿಗೆ ಹೆಮ್ಮೆಯಿತ್ತು. ಅವನು ಮಾತಾಡಿದ್ದು ಸಂಗೀತವಾಯ್ತು. ನುಡಿದಿದ್ದೆಲ್ಲ ತುಪಾಕಿಯ ಗುಂಡಾಯ್ತು. ಶ್ರೀಮತಿ ಅನಿಬೆಸೆಂತರು ಹೇಳಿದರು; “ಆತ ಸಂನ್ಯಾಸಿಯಲ್ಲ, ತಾಯಿ ಭಾರತಿಯ ಅಂತರಾಳದ ಮಾತುಗಳನ್ನಾಡುವ ಯೋಧ&#8221;. ಅಮೆರಿಕದ ಪತ್ರಿಕೆ ಬರೆಯಿತು;“ಇವನಂತಹ ಬುದ್ಧಿವಂತರಿರುವ ನಾಡಿಗೆ ಮಿಷನರಿಗಳನ್ನು ಕಳಿಸುವುದೇ ಮೂರ್ಖತನ. ಭರತದಿಂದ ಇವನಂತಹ ಮಿಷನರಿಗಳನ್ನು ನಾವು ಕರೆಸಿಕೊಳ್ಳಬೇಕಷ್ಟೆ!&#8221;</p>
<p>ಗುಲಾಮರ ನಾಡಿನಿಂದ ಹೊರಟಿದ್ದವ ಚಕ್ರವರ್ತಿಯಾಗಿಬಿಟ್ಟಿದ್ದ. ತನ್ನ ಹೃದಯ ತುಂಬಿದ್ದ ಪ್ರೇಮದ ಸುಧೆಯಿಂದ ಎಲ್ಲರನ್ನೂ ತೋಯಿಸಿಬಿಟ್ಟಿದ್ದ. ಜರ್ಮನಿಯ ಥಾಮಸ್ ಕುಕ್ ಹೇಳಿದ್ದರು; “ಅದೊಮ್ಮೆ ಅವರ ಕೈಕುಲುಕಿ ಮೂರು ದಿನ ಕೈ ತೊಳೆದುಕೊಂಡಿರಲಿಲ್ಲ. ಆವರ ಪ್ರೇಮದ ಸ್ಪರ್ಷ ಆರದಿರಲೆಂದು!&#8221;</p>
<p>ರಕ್ ಫೆಲ್ಲರನಂತಹ ಸಿರಿವಂತರು ಅವನಡಿಗೆ ಬಿದ್ದರು. ಪಾದಗಳಿಗೆ ಅರ್ಪಿತವಾದ ಕುಸುಮವಾದರು. ವಿವೇಕಾನಂದರು ಗರ್ವದಿಂದ ಬೀಗಲಿಲ್ಲ. ಬದಲಿಗೆ ತಾಯಿ ಭಾರತಿಯೆಡೆಗೆ ಮತ್ತಷ್ಟು ಬಾಗಿದ. ನಿಮ್ಮ ಸೇವೆ ಮಾಡಬೇಕೆಂಬ ಮನಸಿದೆ. ಏನು ಮಾಡಲಿ?&#8221; ಎಂದು ಕೇಳಿದವರಿಗೆ, “ನನ್ನ ಸೇವೆ ಮಾಡಬೇಕೆಂದರೆ ಭಾರತವನ್ನು ಪ್ರೀತಿಸಿ&#8221; ಎಂದ. ಸಿದ್ಧರಾದವರನ್ನು ಕರೆತಂದ. ಹಗಲಿರುಳು ಭಾರತದ ಏಳ್ಗೆಯ ಕುರಿತು ಚಿಂತಿಸಿದ. ಅಮೆರಿಕದ ಬೀದಿಬೀದಿಗಳಲ್ಲಿ ತನ್ನ ಆಳೆತ್ತರದ ಕಟೌಟು ರಾರಾಜಿಸುತ್ತಿದ್ದರೂ ತಾನು ಸರಳವಾಗೇ ಉಳಿದ. ಭಾರತಕ್ಕೆ ಮರಳಿದ. ಭಾರತದ ಜಪ ಮಾಡುತ್ತಲೇ ದೇಹ ತ್ಯಾಗ ಮಾಡಿದ.<br />
ಹಾಗೆ ದೇಹ ಬಿಟ್ಟ ವಿವೇಕಾನಂದರಿಗೆ ಕೇವಲ ಮೂವತ್ತೊಂಭತ್ತು ವರ್ಷ.</p>
<p>ಸ್ವಾಮೀ ವಿವೇಕಾನಂದರು ಚಿಕಾಗೋ ಭಾಷಣ ಮಾಡಿ ಸೆಪ್ಟೆಂಬರ್ ಹನ್ನೊಂದಕ್ಕೆ ನೂರಾ ಹದಿನೈದು ವರ್ಷಗಳಾದವು. ಅದಕ್ಕೇ ಇವೆಲ್ಲ ನೆನಪಾಯ್ತು. ಅಷ್ಟೇ.</p>
]]></content:encoded>
			<wfw:commentRss>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%b5%e0%b2%bf%e0%b2%b5%e0%b3%87%e0%b2%95%e0%b2%be%e0%b2%a8%e0%b2%82%e0%b2%a6%e0%b2%a8%e0%b3%86%e0%b2%82%e0%b2%ac-%e0%b2%b5%e0%b3%80%e0%b2%b0-%e0%b2%b8%e0%b2%82%e0%b2%a8%e0%b3%8d%e0%b2%af%e0%b2%be/feed/</wfw:commentRss>
		<slash:comments>7</slash:comments>
		</item>
		<item>
		<title>ಅಣು ಒಪ್ಪಂದದ ಆಜೂ ಬಾಜು- ನಮ್ಮೊಳಗಿನ ಚರ್ಚೆ</title>
		<link>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%85%e0%b2%a3%e0%b3%81-%e0%b2%92%e0%b2%aa%e0%b3%8d%e0%b2%aa%e0%b2%82%e0%b2%a6%e0%b2%a6-%e0%b2%86%e0%b2%9c%e0%b3%82-%e0%b2%ac%e0%b2%be%e0%b2%9c%e0%b3%81/</link>
		<comments>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%85%e0%b2%a3%e0%b3%81-%e0%b2%92%e0%b2%aa%e0%b3%8d%e0%b2%aa%e0%b2%82%e0%b2%a6%e0%b2%a6-%e0%b2%86%e0%b2%9c%e0%b3%82-%e0%b2%ac%e0%b2%be%e0%b2%9c%e0%b3%81/#comments</comments>
		<pubDate>Fri, 25 Jul 2008 09:06:25 +0000</pubDate>
		<dc:creator>admin</dc:creator>
				<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>
		<category><![CDATA[ಅಣು ಒಪ್ಪಂದ]]></category>
		<category><![CDATA[ಅಮೆರಿಕ]]></category>
		<category><![CDATA[ಭರತ]]></category>

		<guid isPermaLink="false">http://neladamaatu.wordpress.com/?p=38</guid>
		<description><![CDATA[ಅಣು ಒಪ್ಪಂದದ ಕುರಿತಾದ ‘ಅಧಿವೇಶನ’ ಕೊನೆಗೂ ಪ್ರಹಸನವಾಗಿಯೇಬಿಡ್ತು. ಎರಡೂ ದಿನ ಅಣು ಒಪ್ಪಂದದ ಕುರಿತು ಘನವಾದ ಚರ್ಚೆಗಳಾಗುತ್ತದೆಂದು ಭಾವಿಸಿದ್ದವರಿಗೆ ತೀವ್ರ ನಿರಾಶೆ. ಟೀವಿ ಮುಂದೆ ಕುಳಿತು ಕಲಾಪ ವೀಕ್ಷಿಸಿದ್ದವರನ್ನು ಬಿಡಿ, ಸರ್ಕಾರದ ಅನುಮತಿ ಪಡೆದು ಜೈಲಿನಿಂದ ನೇರವಾಗಿ ಬಂದು ಅಧಿವೇಶನದಲ್ಲಿ ಕುಳಿತಿದ್ದ ಎಸ್ ಪಿ ಯ ಸಂಸದ ಕೂಡ ತನಗೆ ‘ಒಪ್ಪಂದ ಏನೆಂದೇ ಅರ್ಥವಾಗಲಿಲ್ಲ’ ಎಂದಿದ್ದು ಹಾಸ್ಯಾಸ್ಪದವೇನಲ್ಲ. ಜವಾಬ್ದಾರಿಯುತವಾಗಿ ಮಾತಾಡಬೇಕಿದ್ದ ಪ್ರಧಾನ ಮಂತ್ರಿ, ರಕ್ಷಣಾ ಮಂತ್ರಿಗಳು ಯುಪಿಎ ಯ ಸಾಧನೆ ಹೇಳಲು ಸಮಯ ವ್ಯಯ ಮಾಡಿದರೆ, ಪ್ರತಿಪಕ್ಷದ [...]]]></description>
			<content:encoded><![CDATA[<blockquote><p>ಅಣು ಒಪ್ಪಂದದ ಕುರಿತಾದ ‘ಅಧಿವೇಶನ’ ಕೊನೆಗೂ ಪ್ರಹಸನವಾಗಿಯೇಬಿಡ್ತು. ಎರಡೂ ದಿನ ಅಣು ಒಪ್ಪಂದದ ಕುರಿತು ಘನವಾದ ಚರ್ಚೆಗಳಾಗುತ್ತದೆಂದು ಭಾವಿಸಿದ್ದವರಿಗೆ ತೀವ್ರ ನಿರಾಶೆ. ಟೀವಿ ಮುಂದೆ ಕುಳಿತು ಕಲಾಪ ವೀಕ್ಷಿಸಿದ್ದವರನ್ನು ಬಿಡಿ, ಸರ್ಕಾರದ ಅನುಮತಿ ಪಡೆದು ಜೈಲಿನಿಂದ ನೇರವಾಗಿ ಬಂದು ಅಧಿವೇಶನದಲ್ಲಿ ಕುಳಿತಿದ್ದ ಎಸ್ ಪಿ ಯ ಸಂಸದ ಕೂಡ ತನಗೆ ‘ಒಪ್ಪಂದ ಏನೆಂದೇ ಅರ್ಥವಾಗಲಿಲ್ಲ’ ಎಂದಿದ್ದು ಹಾಸ್ಯಾಸ್ಪದವೇನಲ್ಲ.</p></blockquote>
<p>ಜವಾಬ್ದಾರಿಯುತವಾಗಿ ಮಾತಾಡಬೇಕಿದ್ದ ಪ್ರಧಾನ ಮಂತ್ರಿ, ರಕ್ಷಣಾ ಮಂತ್ರಿಗಳು ಯುಪಿಎ ಯ ಸಾಧನೆ ಹೇಳಲು ಸಮಯ ವ್ಯಯ ಮಾಡಿದರೆ, ಪ್ರತಿಪಕ್ಷದ ನಾಯಕರು ಅರೋಪಗಳಿಗೇ ಹೆಚ್ಚಿನ ಸಮಯ ಕೊಟ್ಟು ಒಪ್ಪಂದದ ತಿರುಳೇ ಮರೆಯುವಂತೆ ನೋಡಿಕೊಂಡರು. ಇಷ್ಟಕ್ಕೂ ಒಪ್ಪಂದದ ಲಾಭವೇನು? ರಾಹುಲ್ ಗಾಂಧಿ ಮನಕಲಕುವಂತೆ ಮಾತನಾಡಿ ‘ಬಡವರಿಗೆ ಬೆಳಕಿಲ್ಲ, ಅವರಿಗೆ ಕರೆಂಟು ಕೊಡಲು ಈ ಒಪ್ಪಂದ’ ಎಂದರು. ಇದು ಕಾಂಗ್ರೆಸ್ಸಿನ ಸದಾ ಕಾಲದ ಚಾಳಿ. ಘನವಾದ ವಿಷಯ ಬಂದೊಡನೆ ಬಡವರನ್ನ ತಂದು ಎದುರಿಟ್ಟುಕೊಳ್ಳೋದು. ನಾಲ್ಕು ದಶಕದ ಹಿಂದೆ ಇಂದಿರಾ ‘ಗರೀಬೀ ಹಠಾವೋ’ ಎಂಬ ಘೋಷಣೆ ಮೊಳಗಿಸಿದ್ದು ಯಾರಿಗೆ ನೆನಪಿಲ್ಲ ಹೇಳಿ? ಪ್ರಮುಖ ಚರ್ಚೆಯನ್ನು ಭಾವುಕತೆಯತ್ತ ತಿರುಗಿಸಿ ಮಾಧ್ಯಮಗಳನ್ನು ಸೆಳೆಯುವಲ್ಲಿ ರಾಹುಲ್ ಯಶಸ್ವಿಯಾಗಿಬಿಟ್ಟರು. ಆದರೆ, ಒಪ್ಪಂದ ಜಾರಿಯಾದರೆ ಬಡವರ ಮನೆಗೆ ಕರೆಂಟು ಗ್ಯಾರೆಂಟೀನಾ? ಈ ಪ್ರಶ್ನೆಗೆ ಮಾತ್ರ ಉತ್ತರ ಸಿಗದೇ ಹೋಯ್ತು.</p>
<p style="text-align:center;">ಒಪ್ಪಂದದ ಹಿಂದಿನ ಸಂಚೇನು?</p>
<p style="text-align:left;">ಸದ್ಯದ ಮಟ್ಟಿಗೆ ನಮ್ಮಲ್ಲಿ ಉತ್ಪಾದನೆಯಾಗುತ್ತಿರುವ ಒಟ್ಟು ವಿದ್ಯುಚ್ಛಕ್ತಿಯಲ್ಲಿ ಅಣು ವಿದ್ಯುತ್ತಿನ ಪ್ರಮಾಣ ಎಷ್ಟು ಗೊತ್ತೆ? ಶೇಕಡಾ ಮೂರರಷ್ಟು ಮಾತ್ರ. ಇದಕ್ಕೆ ಪ್ರತಿಯಾಗಿ ಕಲ್ಲಿದ್ದಲು ಶೇ.೬೬ರಷ್ಟು, ಜಲ ಶಕ್ತಿ ಶೇ.೨೬ರಷ್ಟು, ಸೌರ ಶಕ್ತಿ ಶೇ.೫ರಷ್ಟು ವಿದ್ಯುತ್ ಉತ್ಪಾದಿಸುತ್ತದೆ. ಈ ದೇಶದ ಇಪ್ಪತ್ತೆರಡು ಅಣು ರಿಯಾಕ್ಟರುಗಳು ಸೇರಿ ಶೇಕಡಾ ಮೂರರಷ್ಟು ಮಾತ್ರ ವಿದ್ಯುತ್ ಉತ್ಪಾದಿಸಲು ಸಾಧ್ಯವಾಗುತ್ತಿದೆ ಎಂದಮೇಲೆ, ಅದನ್ನು ದ್ವಿಗುಣಗೊಳಿಸಲು ಮಾಡಬೇಕಾದ ಖರ್ಚು ವೆಚ್ಚವನ್ನು ಲೆಕ್ಕ ಹಾಕಿ!<br />
ಒಂದು ಅಂದಾಜಿನ ಪ್ರಕಾರ ಸುಮಾರು ಐವತ್ತು ಸಾವಿರ ಕೋಟಿ ರೂಪಾಯಿಗಳನ್ನು ವ್ಯಯಿಸಿ, ಇಂದಿನ ಪ್ರಮಾಣಕ್ಕಿಂತ ಎರಡು ಪಟ್ಟು ಹೆಚ್ಚು ಅಣು ವಿದ್ಯುತ್ ಪಡೆಯಬಹುದು. ಇಷ್ಟು ಮಾತ್ರದ ವಿದ್ಯುತ್ ಲಕ್ಷಾಂತರ ಹಳ್ಳಿಗಳಿಗೆ ಬೆಳಕು ಕೊಡುತ್ತದೆ ಎಂದು ವಾದಿಸುತ್ತಿರುವವರಿಗೆ ಏನು ಹೇಳಬೇಕು!?</p>
<p>ಈ ನಮ್ಮ ಸರ್ಕಾರಗಳು ಕಳೆದ ಕೆಲವಾರು ದಶಕಗಳಿಂದ ಜಲ ಶಕ್ತಿಯನ್ನು ಅದೆಷ್ಟು ನಿರ್ಲಕ್ಷಿಸುತ್ತಿವೆಯೆಂದರೆ, ಭೂಗರ್ಭದಲ್ಲಿ ಜಲಸ್ರೋತವನ್ನು ಹೆಚ್ಚಿಸುವ, ಸಮುದ್ರದ ಅಲೆಗಳ ಶಕ್ತಿಯನ್ನು ವಿದ್ಯುಚ್ಛಕ್ತಿಯಾಗಿ ಪರಿವರ್ತಿಸುವ ಗೋಜಿಗೇ ಹೋಗುತ್ತಿಲ್ಲ. ಸೌರ ಶಕ್ತಿಯ ವ್ಯಾಪಕ ಬಳಕೆಯ ಕುರಿತಾದ ಸಂಶೋಧನೆಗಳು, ಚಟುವಟಿಕೆಗಳು ನಡೆಯುತ್ತಿರುವುದು ತೀರಾ ಕಡಿಮೆ. ಇಂತಹ ವಿಫುಲ ಅವಕಾಶಗಳನ್ನು ಕೈಚೆಲ್ಲಿ ವಿದ್ಯುತ್ ನ ನೆಪ ಹೇಳಿ ಒಪ್ಪಂದಕ್ಕೆ ಮುಂದಾಗುತ್ತಿರುವುದು ಯಾಕೆ? ಈ ಪ್ರಶ್ನೆಗೆ ಉತ್ತರವಿಲ್ಲ. ಈ ನಡುವೆಯೇ ಇನ್ನೊಂದು ಅಂಶ ನೆನಪಿಡಬೇಕು. ಅಮೆರಿಕಾದ ಸಹಕಾರ ಮತ್ತು ಇಂಧನ ಪಡೆದು ವಿದ್ಯುತ್ ಉತ್ಪಾದಿಸುವ ಈ ಯೋಜನೆಯ ಕನಸು ನನಸಾಗೋದು ೨೦೨೦ರಲ್ಲಿ! ಅವತ್ತಿನ ಮಟ್ಟಿಗೆ ಈಗಿನ ಅವಶ್ಯಕತೆಗಿಂತ ನಾಲ್ಕು ಪಟ್ಟಾದರೂ ಹೆಚ್ಚಿನ ವಿದ್ಯುತ್ ಬೇಕಾಗುತ್ತದೆ. ಆಗ ಈ ಯೋಜನೆ ಕೊಡುವ ವಿದ್ಯುತ್ ನ ಪ್ರಮಾಣ- ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ, ಅಷ್ಟೇ.</p>
<p>ಇಷ್ಟೆಲ್ಲಾ ಅಣುವಿದ್ಯುತ್ತಿನ ಬಗ್ಗೆ ಮಾತಾಡುವ ಈ ದೇಶದ ನಾಯಕರುಗಳಿಗೆ ಗೊತ್ತೇ ಇಲ್ಲದ (ಅಥವಾ ಹಾಗೆ ನಟಿಸುವ) ಒಂದು ಅಂಶವಿದೆ. ಅದು, “ಕಳೆದ ಮುವ್ವತ್ತು ವರ್ಷಗಳಿಂದ ಅಮೆರಿಕಾ ಒಂದೇ ಒಂದು ಅಣುಶಕ್ತಿ ಘಟಕವನ್ನು ಹೊಸದಾಗಿ ಶುರು ಮಾಡಿಲ್ಲ&#8221; ಅನ್ನೋದು! ಅಷ್ಟೇ ಅಲ್ಲ, ಒಂದು ಅಣು ಘಟಕವನ್ನು ಮುಚ್ಚಲು ಹೋಗಿ ಅದು ಲಕ್ಷಾಂತರ ಡಾಲರು ವ್ಯಯಿಸಿ ಕೈಸುಟ್ಟುಕೊಂಡಿದೆ ಕೂಡಾ!!<br />
ತನ್ನ ಬೇಡಿಕೆಯ ಶೇ.೯೦ರಷ್ಟು ವಿದ್ಯುತ್ ಅಣು ರಿಯಾಕ್ಟರಿನಿಂದಲೇ ಬರುತ್ತದೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಫ್ರಾನ್ಸ್, ಕಳೆದ ಕೆಲವಾರು ವರ್ಷಗಳಿಂದ ಈ ರಿಯಾಕ್ಟರುಗಳಿಂದ ಕೈತೊಳೆದುಕೊಳ್ಳುವ ಉಪಾಯ ಹುಡುಕುತ್ತಿದೆ.  ವಿದ್ಯುತ್ ಬಳಕೆ ಕಡಿಮೆ ಮಾಡಿ ಎಂದು ಜನರಿಗೆ ಬುದ್ಧಿ ಹೇಳುತ್ತಿದೆ. ಇನ್ನೂ ಮುಂದುವರೆದು, ಈ ದೆಶಗಳೆಲ್ಲ ತಮ್ಮ ಹಳೆಯ ಹಪ್ಪಟ್ಟು ರಿಯಾಕ್ಟರುಗಳನ್ನು ನಮ್ಮ ದೇಶಕ್ಕೆ ಮಾರಲಿದ್ದಾರೆ, ತಾವು ಮಾತ್ರ ವಿದ್ಯುತ್ ಪಡೆಯಲು ಹೊಸ ಮಾರ್ಗದತ್ತ ಹೊರಳಲಿದ್ದಾರೆ.</p>
<p>ಈ ಒಪ್ಪಂದದಂತೆ ಅಮೆರಿಕಾ ಭಾರತದಲ್ಲಿ ವಿದ್ಯುತ್ ಉತ್ಪಾದನೆಯ ಕಾಂಟ್ರ್ಯಾಕ್ಟನ್ನು ಪಡೆಯುತ್ತಿಲ್ಲ, ಬದಲಿಗೆ ಉತ್ಪಾದನೆಗೆ ಬೇಕಾದ ತಂತ್ರಜ್ಞಾನವನ್ನೂ ಇಂಧನವನ್ನೂ ಪೂರೈಸುವ ಭರವಸೆ ನೀದುತ್ತಿದೆ. ಅಷ್ಟಕ್ಕೇ ಅದೆಷ್ಟು ನಿಯಮವಳಿಗಳೆಂದರೆ, ಆ ಮೂಲಕ ಭರತದ ಸಾರ್ವಭೌಮತೆಯನ್ನು ಕಸಿಯುವಷ್ಟು! ಸಾರ್ವಭೌಮತೆ ಕುರಿತಂತೆ ಆಮೇಲೆ ಚರ್ಚಿಸೋಣ. ಮೊದಲಿಗೆ ಅಣು ಇಂಧನದ ಬಗ್ಗೆ ಒಂದಷ್ಟು ಪ್ರಶ್ನೆಗೆ ಉತ್ತರ ಪಡೆಯೋಣ. ವಿಜ್ಞಾನಿಗಳು ನೀಡುವ ಅಂಕಿಅಂಶದ ಪ್ರಕಾರ ಮುಂದಿನ ನಲವತ್ತು ವರ್ಷಗಳಲ್ಲಿ ನಮಗೆ ಒಟ್ಟು ಅಣು ಇಂಧನ- ಯುರೇನಿಯಂ ೨೫ಸಾವಿರ ಮೆಗಾಟನ್ ನಷ್ಟು ಬೇಕಾಗುತ್ತದೆ. ನೀವು ನಂಬಲಾರಿರಿ. ನಮ್ಮ ಬಳಿ ಅದಾಗಲೇ ೭೮ ಸಾವಿರ ಮೆಗಾಟನ್ ನಷ್ಟು ಇಂಧನವಿದೆ. ನಮಗೆ ಸಾಲುವಷ್ಟು ಇಂಧನ ಉಳಿಸಿಕೊಂಡು ಅಮೆರಿಕಕ್ಕೂ ರಫ್ತು ಮಾಡಬಹುದಾದಷ್ಟಿದೆ! ಹೀಗಿರುವಾಗ ನಾವೇಕೆ ಅಮೆರಿಕೆಯೆದುರು ಕೈ ಚಾಚಬೇಕು?<br />
ಹಾಗೊಮ್ಮೆ ನಮ್ಮಲ್ಲಿ ಯುರೇನಿಯಂ ಖಲಿಯಾದರೂ ಥೋರಿಯಮ್ ನಿಕ್ಷೇಪ ಸಾಕಷ್ಟು ಸಮೃದ್ಧವಾಗಿದೆ. ಇಂದು ಜಗತ್ತು ಯುರೇನಿಯಂಗಿಂತಲೂ ಥೋರಿಯಂ ಸಮರ್ಥ ಅಣು ಇಂಧನವೆಂದು ಪರಿಗಣಿಸಿ ಅದರತ್ತ ವಾಲುತ್ತಿದೆ. ಇನ್ನೂ ಅಚ್ಚರಿಯ ಸಂಗತಿಯೆಂದರೆ ಇತರೆಲ್ಲೆಡೆಗಿಂತ ಅತಿ ಹೆಚ್ಚಿನ ಥೋರಿಯಂ ನಿಕ್ಷೇಪವಿರುವುದು ಭಾರತದಲ್ಲಿಯೇ! ಇದರ ಬಳಕೆಯ ಹೊಸ ಹೊಸ ಅವಿಷ್ಕಾರಗಳಾದರೆ ನಮ್ಮ ಬಲ ಅಮೆರಿಕೆಯನ್ನೂ ಹಿಂದಿಕ್ಕುವಷ್ಟು ವೃದ್ಧಿಸುವುದರಲ್ಲಿ ಸಂಶಯವಿಲ್ಲ.</p>
<p>ಎಲ್ಲ ಸರಿ, ಅಮೆರಿಕಾ ನಮ್ಮೊಂದಿಗೆ ಅಣು ಒಪ್ಪಂದ ಮಾಡಿಕೊಳ್ಳಲೇಬೇಕು ಎಂದು ಪಣ ತೊಟ್ಟಿರುವುದು ಯಾಕೆ? ಈವರೆಗಿನ ಅದರ ಇತಿಹಾಸದಲ್ಲಿ ತನಗೆ ಅತಿ ಹೆಚ್ಚಿನ ಲಾಭವಿಲ್ಲದೆ ಅದು ಯಾವ ಕೆಲಸವನ್ನೂ ಮಾಡಿದ್ದೇ ಇಲ್ಲ. ಈ ಬಾರಿಯೂ ಅಷ್ಟೇ. ಅದು ಭಾರತದ ಎಲ್ಲ ರಿಯಾಕ್ಟರುಗಳ ಮೇಲೆ ತನ್ನ ನಿಗಾ ಇಡುವುದಕ್ಕೆ, ಅಣು ಬಾಂಬು ತಯಾರಿಸದಂತೆ ತಎಯುವುದಕ್ಕೆ ಸಾಧ್ಯವಾಗುವಂತೆಯೇ ಒಪ್ಪಂದ ರೂಪಿಸಿಕೊಂಡಿದೆ. ಅದರ ನಿಯಮಗಳಂತೆ ಬಾಂಬು ತಯಾರಿಕೆಗೆ ಅಗತ್ಯವಿರುವ ಪ್ಲುಟೋನಿಯಮ್ ಅನ್ನು ಭಾರತ ಹೊಂದುವಂತೆಯೇ ಇಲ್ಲ. ಅಂದಮೇಲೆ, ಭಾರತ ಇದುವರೆಗೆ ಕಾಪಾಡಿಕೊಂಡು ಬಂದ ಸಾರ್ವಭೌಮತೆ ಮಣ್ಣುಪಾಲಾದಂತೆಯೇ ಅಲ್ಲವೆ?</p>
<p>ಹಾ! ಇನ್ನೊಂದು ವಿಷಯವಿದೆ. ಭಾರತ ಇರಾನಿನೊಂದಿಗೆ ಕೊಳವೆ ಮಾರ್ಗದ ಮೂಲಕ ಇಂಧನ ಪೂರೈಕೆಯ ಒಪ್ಪಂದ ಮಾಡಿಕೊಂಡಿತ್ತಲ್ಲ? ಆಗಲೇ ಅಮೆರಿಕಾ ಈ ಅಣುಒಪ್ಪಂದಕ್ಕೆ ಹೊಂಚು ಹಾಕಿದ್ದು. ಹಾಗೇನಾದರೂ ಇರಾನಿನಿಂದ ಕೊಳವೆ ಬಂದು ಭಾರತಕ್ಕೆ ಅನಿಲ ಪೂರೈಕೆಯಾಗಿಬಿಟ್ಟರೆ ಏಷ್ಯಾದ ಮೇಲೆ ಅಮೆರಿಕೆಯ ಹಿಡಿತ ಕಳೆದುಹೋಗಿಬಿಡುತ್ತದೆ. ಅದಕ್ಕೇ, ಅದನ್ನು ತಪ್ಪಿಸಲು ಈಗಲೂ ಅದು ತಿಪ್ಪರಲಗ ಹಾಕುತ್ತಿದೆ. ತನ್ನ ಪ್ರಬಲ ಹಿಡಿತ ಉಳಿಸಿಕೊಳ್ಳಲಿಕ್ಕಾಗಿ ಭಾರತವನ್ನು ಬಲಿ ಕೊಡುತ್ತಿದೆ.</p>
<p style="text-align:center;">ನಾವೇನು ಮಾಡಬಹುದು?</p>
<p>ಭಾರತ- ಅಮೆರಿಕಾ ಎರಡೂ ರಾಷ್ಟ್ರಗಳಿಂದ ದೂರವುಳಿದು ಮೂರನೇ ಬುದ್ಧಿವಂತ ರಾಷ್ಟ್ರವಾಗಿ ನೋಡಿದಾಗ ಅಮೆರಿಕಕ್ಕಿಂತ ಭಾರತವೇ ಹೆಚ್ಚು ಸಮರ್ಥವಾಗಿ ತೋರುತ್ತದೆ. ರಾಜಕೀಯ ಇಚ್ಛಾಶಕ್ತಿಯಲ್ಲಿ ಮಾತ್ರ ಅಮೆರಿಕ ನಮಗಿಂತ ಮುಂದಿದೆ. ಆದರೆ, ಈ ಒಪ್ಪಂದ ಆಗಲೇ ಬಾರದು ಎಂದರೂ ಎಡವಟ್ಟಾದೀತು. ಒಪ್ಪಂದ ಆಗಬೇಕು, ಆದರೆ ಅದರ ನಿಯಮಾವಳಿಗಳು ನಮಗೆ ಅನುಕೂಲಕರವಾಗಿರಬೇಕು. ಈ ಒಪ್ಪಂದ ಮಾಡಿಕೊಂಡಿರುವ ಎಲ್ಲ ದೇಶಗಳ ೪೦೦ ರಿಯಾಕ್ಟರುಗಳಲ್ಲಿ ಕೆವಲ ಐದು ಮಾತ್ರ ಅಂತಾರಾಷ್ಟ್ರೀಯ ಸುಪರ್ದಿಗೆ ಒಳಪಟ್ಟಿದೆ. ಭಾರತದಲ್ಲಿ ಮಾತ್ರ ಹದಿನಾಲ್ಕೂ ರಿಯಾಕ್ಟರುಗಳೂ ಅದೇಕೆ ಅಮೆರಿಕದ ಕೈಗೆ ಕೀಲಿಯೊಪ್ಪಿಸಬೇಕು ಎಂಬುದು ಅರ್ಥವೇ ಆಗುತ್ತಿಲ್ಲ. ಈ ನಿಯಮ ಬದಲಾಗಬೇಕು. ಪರಮಾಣು ಶಕ್ತ ರಾಷ್ಟ್ರಗಳು ಒಪ್ಪಂದದಿಂದ ಯಾವಾಗ ಬೇಕಾದರೂ ಹಿಂದೆ ಬರುವ ನಿಯಮವಿದ್ದರೆ, ಭಾರತ ಮಾತ್ರ ಹಾಗೆ ಮಾಡುವಂತಿಲ್ಲ ಎನ್ನಲಾಗಿದೆ. ಅದೇಕೆ ಹಾಗೆ? ನಾವೂ ಫೋಖ್ರಾನ್ ನಲ್ಲಿ ಬಾಂಬ್ ಸ್ಫೋಟಿಸಲಿಲ್ಲವೇ? ನಾವೂ ಪರಮಣು ಶಕ್ತ ರಾಷ್ಟ್ರವೇ ತಾನೆ? ಅಂದಮೆಲೆ, ನಾವೇಕೆ ಒಪ್ಪಂದ ಬೇಡವಾದಾಗ ಹಿಂದೆ ಸರಿಯುವ ಹಾಗಿಲ್ಲ? ಈ ಪ್ರಶ್ನೆ ಗಟ್ಟಿಯಾಗಿ ಕೇಳಬೇಕಿದೆ. ‘ನಮ್ಮ ಆಂತರಿಕ ನೀತಿಗಳಿಗೆ ಧಕ್ಕೆ ತರುವಂತಿಲ್ಲ’ ಎಂದು ಒಪ್ಪಂದದಲ್ಲೊಂದು ಒಳ ಒಪ್ಪಂದ ಹಾಕಿರುವ ಅಮೆರಿಕೆಗೆ ‘ನಮ್ಮ ಆಂತರಿಕ ನೀತಿಗೂ ನೀವು ಧಕ್ಕೆ ತರುವಂತಿಲ್ಲ’ ಎಂದೇಕೆ ತಪರಾಕಿ ಹಾಕಬಾರದು?<br />
ಹೀಗೆ ಅಮೆರಿಕದೊಂದಿಗೆ ಜಾಗರೂಕತೆಯಿಂದ ಒಪ್ಪಂದ ಮಾಡಿಕೊಂಡರೆ ಅದು ನಮ್ಮ ಮೇಲೆ ಸವಾರಿ ಮಾಡಲಗುವುದಿಲ್ಲ. ಚೀನಾ ಕೂಡ ನಮ್ಮೊಂದಿಗೆ ಸಮಾನ ದೂರದಲ್ಲಿರಲು ಪ್ರಯತ್ನ ಪಡುತ್ತದೆ. ಒಪ್ಪಂದದ ಈಗಿನ ರೂಪ ಬದಲಿಸಿ ನಮ್ಮ ಪ್ರಗತಿಗೆ ತಕ್ಕಂತೆ ಅದನ್ನು ಪುನರ್ರಚಿಸಿ ಮುಂದುವರೆಯುವುದು ಜಾಣತನ.<br />
ಆದರೆ, ಅದನ್ನೆಲ್ಲ ಮಾಡಬಲ್ಲ, ದೇಶದ ಪ್ರಗತಿಯತ್ತ ಒಲವುಳ್ಳ ರಾಜಕಾರಣಿಗಳು ನಮ್ಮಲ್ಲಿದ್ದಾರೆಯೇ ಎನ್ನುವುದೇ ಕೋಟಿ ರುಪಾಯಿಯ ಪ್ರಶ್ನೆ!</p>
<p style="text-align:center;"><strong>ನಮ್ಮೊಳಗಿನ ಚರ್ಚೆ</strong></p>
<p>Dear Chakravarthy,</p>
<ol>
<li>I , wonder why the Nuclear deal is always discussed in terms of power generation,and our power needs. It is not at all only about our power needs and the the quantum of power we are going to generate using nuclear technology.Signing of this deal, will end the `Technology denial regime` under which we are suffering from, since the day of first test.This opens up host of employment and business opportunities for us. According a rough estimate, this development (signing of the deal)is going to create an additional one lakh new employment opportunities in next few years.</li>
<li>India can have access to Civilian Nuclear technology not only from America, but almost 42 other countries. Terms and conditions envisaged in 123 agreement are only ADVISORY in nature and not MANDATORY.Compared with the the terms and conditions mentioned in the agreements signed by Japan and China, we have the most favourable agreement.</li>
</ol>
<p style="text-align:right;"><strong>-Prasad.</strong></p>
<p><a title="Edit comment" href="http://neladamaatu.wordpress.com/wp-admin/comment.php?action=editcomment&amp;c=89"></a></p>
<p> </p>
<p>prasad why can’t we create emplyement by investing a 50000 crore that we are investing now in 123 nuke agreement in non convensinal energy source like wind mill or solar etc? have u everthing of this how much emplyemnt we can creat by 50000 crore? why we always depends on others? why we always link any forgin agreement or investment to emplyemnt? why dont we think in laterlal way. No other contry do anything better without there self interst. where in care of nuke deal there is alwyas dangerous to our nationla security. It must be tre.</p>
<p style="text-align:right;"><strong><cite>~swamy </cite> </strong></p>
<p>ಅಣು ಒಪ್ಪಂದದಿಂದ ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ಬರುವದು ಒಂದು ಅಂಶ. ಮತ್ತೊಂದು ಮಹತ್ವದ ಅಂಶವೆಂದರೆ ದುಬಾರಿ ರಿಯಾಕ್ಟರಗಳನ್ನು ಸ್ಥಾಪಿಸಿದ ಬಳಿಕ ನಾವು ಯುರೇನಿಯಮ್ ಅನ್ನು ದುಬಾರಿ ಬೆಲೆಯಲ್ಲಿ ಕೊಳ್ಳಬೇಕು. ಅಂದರೆ, ಈ ಯುರೇನಿಯಮ್ ಪೂರೈಕೆಯ ಗುಂಪು ನಮ್ಮನ್ನು ಚೆನ್ನಾಗಿ ಬೋಳಿಸುತ್ತದೆ. ಇದಕ್ಕೊಂದು ಉದಾಹರಣೆಯನ್ನು ನಿಮ್ಮ ನೆನಪಿಗೆ ತರಬಯಸುತ್ತೇನೆ. ಭಾರತವು ತನ್ನ ಕ್ಷಿಪಣಿಗಳಿಗೆ ಬೇಕಾದ ಕ್ರಯೋಜೀನ್ ಇಂಧನವನ್ನು ರಶಿಯಾದಿಂದ ಪಡೆಯುತ್ತಿತ್ತು. ಅಮೇರಿಕವು ಆ ಸಮಯದಲ್ಲಿ ಸಹ ಈ ಇಂಧನ ಪೂರೈಕೆದಾರರ ಗುಂಪನ್ನು ನಿರ್ಮಿಸಿತು. ರಶಿಯಾ ಹಿಡಿದು ಎಲ್ಲಾ ಪೂರೈಕೆದಾರರಿಗೆ ಈ ಕ್ಲಬ್ ಕಂಪಲ್ಸರಿ. ಆ ಬಳಿಕ ಇಂಧನದ ದರವನ್ನು ಸಿಕ್ಕಾಪಟ್ಟೆ ಹೆಚ್ಚಿಸಲಾಯಿತು. ಅಣು ಇಂಧನಕ್ಕೂ ಸಹ ಇದೇ ಗತಿ ಕಾದಿದೆ.</p>
<p style="text-align:right;"><cite><strong>~ </strong><a rel="external nofollow" href="http://sallaap.blogspot.com/"><span style="color:#b54141;"><strong>sunaath</strong></span></a><strong> </strong></cite></p>
<p> </p>
<p>ನಮಸ್ತೇ,</p>
<p>ಪ್ರಸಾದ್,<br />
ಅಣು ಒಪ್ಪಂದಕ್ಕೂ ವಿದ್ಯುತ್ತಿಗೂ ಸಂಬಂಧ ಕಲ್ಪಿಸಲು ಅತ್ಯಂತ ಪ್ರಮುಖ ಕಾರಣ ಏನು ಗೊತ್ತೇ? ಒಪ್ಪಂದ ಬೇಕೆಂದು ವಾದಿಸುತ್ತಿರುವವರೆಲ್ಲ ವಿದ್ಯುತ್ತಿನ ನೆವ ಹೇಳುತ್ತಲೇ ಹಾದಿ ತಪ್ಪಿಸುತ್ತಿದ್ದಾರೆ, ಅದಕ್ಕೇ.<br />
ಇರಲಿ. ಅಣು ಒಪ್ಪಂದದ ಒಳಸುಳಿಗಳನ್ನು ನೋಡಿದರೆ, ಬರಲಿರುವ ದಿನಗಳಲ್ಲಿ ಇದೆಷ್ಟು ಭಯಾನಕವಾಗಲಿದೆ ಎಂಬುದು ಸ್ಪಷ್ಟವಾಗುತ್ತದೆ. 123ಯಲ್ಲಿ ಹುದುಗಿರುವ `hide act’ ಒಂದೇ ಭಾರತದ ಗೋಣು ಮುರಿಯಲು ಸಾಕು. ಅಮೆರಿಕದ ಆಂತರಿಕ ಸುರಕ್ಷೆಗೆ ಧಕ್ಕೆ ಬರದಂತೆ ಒಪ್ಪಂದವಿರಬೇಕು ಅನ್ನುವುದು ಅದರ ತಾಕೀತು. ಅಂದರೆ, ಭಾರತದ ಸುರಕ್ಷತೆಗೆ ಧಕ್ಕೆ ಬಂದರೆ ಪರವಾಗಿಲ್ಲವೇನು? ಅದಕ್ಕೇನೂ ನಿಯಮವೇ ಇಲ್ಲವಾ?<br />
ಬಿಡಿ. ತಂತ್ರಜ್ಞಾನದ ವಿಷಯವಾಗಿ ಮಾತನಾಡುವ ನಾವು, ಅಣು ತಂತ್ರಜ್ಞಾನದಿಂದ ಮುಕ್ತಿಪಡೆಯುತ್ತಿರುವ ಮುಂದುವರಿದ ರಾಷ್ಟ್ರಗಳ ಬಗ್ಗೆ ಚರ್ಚಿಸಲು ಸಿದ್ಧರಿದ್ದೇವಾ? ಇಷ್ಟೆಲ್ಲಾ ಭಾರತದ ಬಗ್ಗೆ ಕಾಳಜಿ ತೋರುವ ಅಮೆರಿಕಾ ನಮ್ಮನ್ನೇಕೆ ‘ಪರಮಾಣು ಶಕ್ತ ರಾಷ್ಟ್ರ’ ಎಂದು ಗಣಿಸುತ್ತಿಲ್ಲ?<br />
ಇಷ್ಟಕ್ಕೂ ಉದ್ಯೋಗಾವಕಾಶ ಉಂಟಾಗುತ್ತದೆಂಬ ಮಾತು ನೂರಕ್ಕೆ ನೂರರಷ್ಟು ಸುಳ್ಳು. ಈ ಒಪ್ಪಂದದುದ್ದಕ್ಕೂ ಉದ್ಯೋಗದ ಕುರಿತಾದ ಮಾತಿಲ್ಲ. ಆದರೆ ಇಷ್ಟು ರಿಯಾಕ್ಟರುಗಳು ಕೆಲಸ ಮಾಡಲು ಶುರು ಮಾಡಿದರೆ ಇಷ್ಟು ಉದ್ಯೋಗ ಸೃಷ್ಟಿಯಾಗುತ್ತದೆಯೆಂಬ ಅಂದಾಜಿದೆಯಷ್ಟೆ.ಮತ್ತದು ವಿದ್ಯುತ್ತಿನ ಬುಡಕ್ಕೇ ಬಂದು ನಿಲ್ಲುತ್ತದೆ. ಇಷ್ಟು ಉದ್ಯೋಗ ನಿರ್ಮಾಣಕ್ಕಾಗಿ ಆಗುವ ವೆಚ್ಚ ಅದೆಷ್ಟೆಂಬ ಅಂದಾಜಿದೆಯೇ!?<br />
ಈ ಒಪ್ಪಂದದ ಒಳಸುಳಿ ಅಡಗಿರುವುದು ಭಾರತದ ಮೇಲೆ ಸಂಪೂರ್ಣ ಹಿಡಿತ ಸಾಧಿಸುವಲ್ಲಿ. ಭಾರತದ ರಿಯಾಕ್ಟರುಗಳನ್ನು, ಅಣು ಸಂಬಂಧಿ ಚಟುವಟಿಕೆಗಳನ್ನು ಅಂತಾರಾಷ್ಟ್ರೀಯ supervisionಗೆ ಒಳಪಡಿಸುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ನಾವೇ ಉತ್ತರ ಕಂಡುಕೊಳ್ಳಬೇಕು.<br />
ಅಮೆರಿಕಾ ಇಲ್ಲಿ ನೆಪ ಮಾತ್ರ. ಭಾರತವೂ ನೆಪವೇ. ಈ ಮೂಲಕ ಶ್ರೀಮಂತ ರಾಷ್ಟ್ರಗಳು ಬಡ ರಾಷ್ಟ್ರಗಳ ಮೇಲೆ ನಡೆಸುವ ದಬ್ಬಾಳಿಕೆ , ಲೂಟಿಗಳ ಸಮಗ್ರ ಪರಿಚಯವಷ್ಟೇ ಇದು. ಬರೀ ಇದಷ್ಟೇ ಅಲ್ಲ, ಕೃಷಿ ಸಬ್ಸಿಡಿಯ ವಿಷಯದಲ್ಲಿ, ರಫ್ತು &#8211; ಆಮದುಗಳ ವಿಚಾರದಲ್ಲಿ, ಪರಿಸರ ರಕ್ಷಣೆಯ ಕಾಯಿದೆ ವಿಚಾರದಲ್ಲೂ ಸಿರಿವಂತ ರಾಷ್ಟ್ರಗಳಿಗೆ ನಿಯಮಗಳು ಬೇರೆ, ತೃತೀಯ ಜಗತ್ತಿನ ರಾಷ್ಟ್ರಗಳಿಗೆ ನಿಯಮಗಳೇ ಬೇರೆ!<br />
ಇಲ್ಲಿ ‘ನಮ್ಮತನ’ದ ಪ್ರಶ್ನೆ ಬರುತ್ತದೆ. ಪ್ರಗತಿಶೀಲ ರಾಷ್ಟ್ರಗಳ ನಾಯಕನ ಸ್ಥಾನದಲ್ಲಿ ನಿಂತಿರುವ ಭಾರತ, ಎಲ್ಲರಿಗೂ ಉಪಯೋಗವಾಗುವಂಥ ನಿಯಮಾವಳಿ ರೂಪಿಸುವಂತೆ ತಾಕೀತು ಮಾಡಿ, ಹೊಸ ಸಾಧ್ಯತೆಯ ಅಧ್ವರ್ಯುವಾಗಬಾರದೇಕೆ?<br />
ಇಷ್ಟಕ್ಕೂ ‘ಒಪ್ಪಂದವೇ ಬೇಡ’ ಅಂದವರಲ್ಲ ನಾವು. ನಿಯಮಗಳು ಎಲ್ಲರಿಗೂ ಒಂದೇ ಆಗಬೇಕು ಎಂದವರು. ಇದು ತಪ್ಪಾ?</p>
<p style="text-align:right;"><strong>~ ಚಕ್ರವರ್ತಿ, ಸೂಲಿಬೆಲೆ</strong></p>
]]></content:encoded>
			<wfw:commentRss>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%85%e0%b2%a3%e0%b3%81-%e0%b2%92%e0%b2%aa%e0%b3%8d%e0%b2%aa%e0%b2%82%e0%b2%a6%e0%b2%a6-%e0%b2%86%e0%b2%9c%e0%b3%82-%e0%b2%ac%e0%b2%be%e0%b2%9c%e0%b3%81/feed/</wfw:commentRss>
		<slash:comments>9</slash:comments>
		</item>
		<item>
		<title>ಏಸು ಕ್ರಿಸ್ತ ಮತ್ತು ಭಾರತ&#8230;</title>
		<link>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%8f%e0%b2%b8%e0%b3%81-%e0%b2%95%e0%b3%8d%e0%b2%b0%e0%b2%bf%e0%b2%b8%e0%b3%8d%e0%b2%a4-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%ad%e0%b2%be%e0%b2%b0%e0%b2%a4/</link>
		<comments>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%8f%e0%b2%b8%e0%b3%81-%e0%b2%95%e0%b3%8d%e0%b2%b0%e0%b2%bf%e0%b2%b8%e0%b3%8d%e0%b2%a4-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%ad%e0%b2%be%e0%b2%b0%e0%b2%a4/#comments</comments>
		<pubDate>Fri, 16 May 2008 08:44:08 +0000</pubDate>
		<dc:creator>admin</dc:creator>
				<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>
		<category><![CDATA[ಏಸುಕ್ರಿಸ್ತ]]></category>
		<category><![CDATA[ಕ್ರೈಸ್ತ ಧರ್ಮ]]></category>
		<category><![CDATA[ಭಾರತ]]></category>

		<guid isPermaLink="false">http://neladamaatu.wordpress.com/?p=35</guid>
		<description><![CDATA[ಶಿಲುಬೆಗೇರಿಸಲಾಗಿದ್ದ ಏಸುಕ್ರಿಸ್ತರು ಮೃತರಾಗಲಿಲ್ಲ. ತಮ್ಮ ಅನುಯಾಯಿಗಳ ಸಹಾಯದಿಂದ ಬದುಕುಳಿದ ಅವರು ಗ್ರೇಟ್ ಬ್ರಿಟನ್ನಿನ ಕಡೆ ಹೊರಟರು. ಅಲ್ಲಿಂದ ಮೆಡಿಟರೇನಿಯನ್ ಪ್ರಾಂತ್ಯಕ್ಕೆ, ಅಲ್ಲಿಂದ ತಮ್ಮ ಗುರಿಯಾಗಿದ್ದ ಭಾರತಕ್ಕೆ! ಮುಂದಿನ ಓದಿಗೆ ಇಲ್ಲಿ ಕ್ಲಿಕ್ ಮಾಡಿ ಅಂದ ಹಾಗೆ, ಡಾವಿಂಚಿ ಕೋಡ್ ನೋಡಿರುವಿರಾ? ಸುಮ್ಮನೆ ಕೇಳಿದೆ. - ವಂದೇ, ಚಕ್ರವರ್ತಿ, ಸೂಲಿಬೆಲೆ]]></description>
			<content:encoded><![CDATA[<p>ಶಿಲುಬೆಗೇರಿಸಲಾಗಿದ್ದ ಏಸುಕ್ರಿಸ್ತರು ಮೃತರಾಗಲಿಲ್ಲ. ತಮ್ಮ ಅನುಯಾಯಿಗಳ ಸಹಾಯದಿಂದ ಬದುಕುಳಿದ ಅವರು ಗ್ರೇಟ್ ಬ್ರಿಟನ್ನಿನ ಕಡೆ ಹೊರಟರು. ಅಲ್ಲಿಂದ ಮೆಡಿಟರೇನಿಯನ್ ಪ್ರಾಂತ್ಯಕ್ಕೆ, ಅಲ್ಲಿಂದ ತಮ್ಮ ಗುರಿಯಾಗಿದ್ದ ಭಾರತಕ್ಕೆ!</p>
<p style="text-align:center;"><img class="aligncenter" style="vertical-align:middle;" src="http://imagecache2.allposters.com/images/pic/CLI/R40~Jesus-Christ-Posters.jpg" alt="" width="272" height="346" /></p>
<h3 style="text-align:center;"><a href="http://www.iskconbangalore.org/bvd/May2008/08-14%20cover%20story.pdf">ಮುಂದಿನ ಓದಿಗೆ ಇಲ್ಲಿ ಕ್ಲಿಕ್ ಮಾಡಿ</a></h3>
<p style="text-align:left;">ಅಂದ ಹಾಗೆ, ಡಾವಿಂಚಿ ಕೋಡ್ ನೋಡಿರುವಿರಾ? ಸುಮ್ಮನೆ ಕೇಳಿದೆ.</p>
<p style="text-align:left;">- ವಂದೇ,</p>
<p style="text-align:left;">ಚಕ್ರವರ್ತಿ, ಸೂಲಿಬೆಲೆ</p>
]]></content:encoded>
			<wfw:commentRss>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%8f%e0%b2%b8%e0%b3%81-%e0%b2%95%e0%b3%8d%e0%b2%b0%e0%b2%bf%e0%b2%b8%e0%b3%8d%e0%b2%a4-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%ad%e0%b2%be%e0%b2%b0%e0%b2%a4/feed/</wfw:commentRss>
		<slash:comments>5</slash:comments>
		</item>
		<item>
		<title>ಕ್ರಾಂತಿಯೋಗಿ ಬಾಬಾ ರಾಮದೇವ್</title>
		<link>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%95%e0%b3%8d%e0%b2%b0%e0%b2%be%e0%b2%82%e0%b2%a4%e0%b2%bf%e0%b2%af%e0%b3%8b%e0%b2%97%e0%b2%bf-%e0%b2%ac%e0%b2%be%e0%b2%ac%e0%b2%be-%e0%b2%b0%e0%b2%be%e0%b2%ae%e0%b2%a6%e0%b3%87%e0%b2%b5%e0%b3%8d/</link>
		<comments>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%95%e0%b3%8d%e0%b2%b0%e0%b2%be%e0%b2%82%e0%b2%a4%e0%b2%bf%e0%b2%af%e0%b3%8b%e0%b2%97%e0%b2%bf-%e0%b2%ac%e0%b2%be%e0%b2%ac%e0%b2%be-%e0%b2%b0%e0%b2%be%e0%b2%ae%e0%b2%a6%e0%b3%87%e0%b2%b5%e0%b3%8d/#comments</comments>
		<pubDate>Thu, 08 May 2008 13:59:17 +0000</pubDate>
		<dc:creator>admin</dc:creator>
				<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>

		<guid isPermaLink="false">http://neladamaatu.wordpress.com/?p=30</guid>
		<description><![CDATA[ಅದು ಕ್ರಾಂತಿಯ ಹೊಸ ರೂಪ. ಸಹಸ್ರ ಸಹಸ್ರ ಸಂಖ್ಯೆಯ ಜನರನ್ನು ಒಂದೇ ದಿಕ್ಕಿನೆಡೆಗೆ ಮುನ್ನಡೆಸಿ, ಜಾಗೃತಗೊಳಿಸುವ ಕ್ರಾಂತಿ ಅದು. ಬಾಬಾ ರಾಮ್ ದೇವ್, ಆ ಕ್ರಾಂತಿಯ ಹೆಸರು. ಬಾಬಾ ರಾಮ್ ದೇವ್, ಸವಾಲುಗಳನ್ನು ಕೆಚ್ಚೆದೆಯಿಂದ ಸ್ವೀಕರಿಸುವ ಸಂಕೇತ. ಬಾಬಾ ರಾಮ್ ದೇವ್, ತಾನು ನಂಬಿದ ಸತ್ಯವನ್ನು ದೃಢವಾಗಿ ಪ್ರತಿಪಾದಿಸಬಲ್ಲ ಶ್ರದ್ಧಾ ಮೂರ್ತಿ.  ದೇಶದ ಯಾವ ಭಾಗಕ್ಕೆ ನದೆದರೂ ಇಂದು ಬೆಳಗಿನ ವೇಳೆ ‘ಆಸ್ಥಾ’ ಚಾನೆಲ್ ನಲ್ಲಿ ಬಾಬಾ ರಾಮದೇವರನ್ನು ನೋಡುತ್ತ, ಅವರ ಮಾತು ಕೇಳುತ್ತ, ಯೋಗ ಮಾಡುವವರ [...]]]></description>
			<content:encoded><![CDATA[<p>ಅದು ಕ್ರಾಂತಿಯ ಹೊಸ ರೂಪ. ಸಹಸ್ರ ಸಹಸ್ರ ಸಂಖ್ಯೆಯ ಜನರನ್ನು ಒಂದೇ ದಿಕ್ಕಿನೆಡೆಗೆ ಮುನ್ನಡೆಸಿ, ಜಾಗೃತಗೊಳಿಸುವ ಕ್ರಾಂತಿ ಅದು. ಬಾಬಾ ರಾಮ್ ದೇವ್, ಆ ಕ್ರಾಂತಿಯ ಹೆಸರು. ಬಾಬಾ ರಾಮ್ ದೇವ್, ಸವಾಲುಗಳನ್ನು ಕೆಚ್ಚೆದೆಯಿಂದ ಸ್ವೀಕರಿಸುವ ಸಂಕೇತ. ಬಾಬಾ ರಾಮ್ ದೇವ್, ತಾನು ನಂಬಿದ ಸತ್ಯವನ್ನು ದೃಢವಾಗಿ ಪ್ರತಿಪಾದಿಸಬಲ್ಲ ಶ್ರದ್ಧಾ ಮೂರ್ತಿ.  ದೇಶದ ಯಾವ ಭಾಗಕ್ಕೆ ನದೆದರೂ ಇಂದು ಬೆಳಗಿನ ವೇಳೆ ‘ಆಸ್ಥಾ’ ಚಾನೆಲ್ ನಲ್ಲಿ ಬಾಬಾ ರಾಮದೇವರನ್ನು ನೋಡುತ್ತ, ಅವರ ಮಾತು ಕೇಳುತ್ತ, ಯೋಗ ಮಾಡುವವರ ಸಂಖ್ಯೆ ಲೆಕ್ಕವಿಲ್ಲದಷ್ಟು!</p>
<p><img style="vertical-align:middle;" src="http://www.thehindubusinessline.com/2006/03/31/images/2006033101272001.jpg" alt="Baba ji" width="351" height="395" /></p>
<p>ಇಂದು ಬಾಬಾ ರಾಮದೇವ್ ಎಂದು ಕರೆಸಿಕೊಳ್ಳುತ್ತಿರುವ ರಾಮಕೃಷ್ಣ ಯಾದವರು ಜನಿಸಿದ್ದು ಹರ್ಯಾಣದ ಮಹೇಂದ್ರ ಗಢ್ ಜಿಲ್ಲೆಯ ಅಲೀಪುರದಲ್ಲಿ. ಹಾಗೆ ನೋಡಿದರೆ, ಅಚ್ಚ ಕರೀಕೂದಲಿನ, ಬೆಳ್ಳಗೆ ಹೊಳೆಯುವ ಗಟ್ಟಿ ಹಲ್ಲಿನ, ಶಕ್ತಿ ಸಂಪನ್ನ ದೇಹ ಸೌಷ್ಟವದ ರಾಮದೇವರಿಗೆ ಹೆಚ್ಚುಕಡಿಮೆ ನಲವತ್ತೈದು ವರ್ಷ! ಹುಟ್ಟಿದ ಎರಡೂವರೆ ತಿಂಗಳಿಗೇ ಪಾರ್ಶ್ವ ವಾಯುವಿಗೆ ತುತ್ತಾಗಿ ಅವರ ದೇಹದ ಅರ್ಧ ಭಾಗ ಜರ್ಝರಿತವಾಗಿತ್ತು. ದೈವ ಕೃಪೆಯಿಂದ ಅಂದು ಸಾವಿನಿಂದ ಪಾರಾದರೂ ಮುಂದೆ ಮತ್ತೆ ಏಳು ಬಾರಿ ಸಾವಿನ ಮನೆ ಹೊಕ್ಕು ಮರಳಿಬಂದರು. ಹೀಗಾಗಿ ಲೌಕಿಕ ಓದಿಗಿಂತ ಅಂತರ್ಮುಖಿಯಾಗುವ ಚಿಂತನೆ ಅವರಿಗೆ ಬಹುಬೇ ಗ ಒಗ್ಗಿಕೊಂಡಿತು. ಎಂಟನೇ ತರಗತಿಯ ವರೆಗೆ ಅಧ್ಯಯನ ನಡೆಸಿದ ರಾಮಕೃಷ್ಣ ಯಾದವ್, ಆನಂತರ ಸೇರಿದ್ದು ಗುರುಕುಲಕ್ಕೆ. ಅಲ್ಲಿ ಸಂಸ್ಕೃತ ಮತ್ತು ಯೋಗದ ಅಭ್ಯಾಸ ನಡೆಸಿದರು. ಆನಂತರ ಸಂನ್ಯಾಸ ಸ್ವೀಕರಿಸಿ, ರಾಮದೇವ್ ಬಾಬಾ ಆದರು. ಅಲ್ಲಿಂದ ಜಿಂದ್ ಜಿಲ್ಲೆಯತ್ತ ಪ್ರಯಾಣ ಬೆಳೆಸಿ, ಹರ್ಯಾಣದ ಕಾಲ್ವಾ ಗುರುಕುಲದಲ್ಲಿ ಹಳ್ಳಿಯ ಜನರಿಗೆ ಯೋಗ ತರಬೇತಿ ಶುರುಮಾಡಿದರು.<br />
ಅಲ್ಲಿಂದಾಚೆಗೆ ಸತತ ಪರಿಶ್ರಮ ಮತ್ತು ಅಧ್ಯಯನಗಳಿಂದ ಯೋಗ ಕ್ಷೇತ್ರದಲ್ಲಿ ವಿಶೇಷ ಹಿಡಿತ ಸಾಧಿಸಿದ ಬಾಬಾ ಸಾಗಿದ ದಿಕ್ಕು ಅಭೂತಪೂರ್ವ.<br />
೧೯೯೫ರಲ್ಲಿ ಅವರು ಆಚಾರ್ಯ ಕರ್ಮವೀರ ಮತ್ತು ಆಚಾರ್ಯ ಬಾಲಕೃಷ್ಣರೊಂದಿಗೆ ಸೇರಿ ಕೃಷ್ಣ ಗಢ್, ಮಹೇಂದ್ರ ಗಢ್, ಮತ್ತು ಘಶೇರಾಗಳಲ್ಲಿ ಗುರುಕುಲಗಳನ್ನು ಸ್ಥಾಪಿಸಿದರು. ಆಗ ಅವರಿಗೆ ಬರಿಯ ಮೂವತ್ತು ವರ್ಷ!<br />
ಈ ಗುರುಕುಲವೂ ಸೇರಿದಂತೆ ಯೋಗ ಪ್ರಚಾರವನ್ನು ಮತ್ತಷ್ಟು ವ್ಯಾಪಕಗೊಳಿಸುವ ಚಿಂತನೆಯೊಂದಿಗೆ ರಾಮದೇವರು ‘ದಿವ್ಯ ಯೋಗ ಮಂದಿರ ಟ್ರಸ್ಟ್’ ಸ್ಥಾಪಿಸಿ, ಅದರ ಅಧ್ಯಕ್ಷರೂ ಆದರು. ಆಗಲೇ ಅವರ ಯೋಗ ಶಿಬಿರಗಳು ವಿಶ್ವದ್ಯಂತ ನಡೆಯಲು ಶುರುವಾಗಿದ್ದು. ಆ ಶಿಬಿರಗಳಲ್ಲಿ ಸಾರ್ವಜನಿಕವಾಗಿ ಯೋಗ ತರಬೇತಿ ನೀಡುತ್ತಿದ್ದ ಬಾಬಾ, ಇತರ ಚಿಕಿತ್ಸೆಗಳಿಂದ ಗುಣಪಡಿಸಲಾಗದ ಹಲವಾರು ರೋಗಗಳನ್ನು ಯೋಗದಿಂದ ಗುಣಪಡಿಸಲು ಸಾಧ್ಯ ಎಂಬುದನ್ನು ಸಾಧಿಸಿ ತೋರಿಸುತ್ತ, ಅದನ್ನು ಎಲ್ಲೆಡೆ ಪ್ರಚುರಪಡಿಸಲಾರಂಭಿಸಿದರು. ಅವರ ಯೋಗ ಶಿಬಿರಕ್ಕೆ ಬರುತ್ತಿದ್ದವರ ಸಂಖ್ಯೆ ನೂರರಿಂದ ಸಾವಿರಕ್ಕೇರಿತು. ಈಗಂತೂ ಪ್ರತಿದಿನ ಸುಮಾರು ಇಪ್ಪತ್ತು ಸಾವಿರದಷ್ಟು ಜನ ಶಿಬಿರಗಳಲ್ಲಿ ಭಗವಹಿಸಿ ಬಾಬಾರೊಂದಿಗೇ ಯೋಗ ಸಾಧನೆ ಮಾಡುತ್ತಿರುವುದೊಂದು ವೈಶಿಷ್ಟ್ಯ.<br />
ಇದರೊಂದಿಗೇ ಬಾಬಾ ರಾಮದೇವ್ ರಾಷ್ಟ್ರಪತಿ ಭವನದಲ್ಲಿ ಯೋಗ ಶಿಬಿರ ನಡೆಸಿ ಅನೇಕರ ಹುಬ್ಬು ಮೇಲೇರುವಂತೆ ಮಾಡಿದರು. ಲಂಡನ್ನಿನ ಹೌಸ್ ಆಫ್ ಕಾಮನ್ಸ್(ಅಲ್ಲಿನ ಸಂಸತ್ತು)ನಲ್ಲಿ ಯೋಗ ಶಿಬಿರ ನಡೆಸಿದ್ದಂತೂ ಜಾಗತಿಕ ಮಟ್ಟದಲ್ಲಿ ಅವರಿಗೆ ಸಿಕ್ಕ ಬಹುದೊಡ್ಡ ಮನ್ನಣೆ ಎನ್ನಬಹುದು.<br />
ಯೋಗ ಅನ್ನುವುದು ಸಣ್ಣಸಣ್ಣ ಕೇಂದ್ರಗಳಿಗೆ ಸೀಮಿತವಾಗಿದ್ದ ಕಾಲಕ್ಕೆ ಅದರ ಹಂದರವನ್ನು ವಿಶಾಲಗೊಳಿಸಿ, ಪ್ರತಿಯೊಬ್ಬರೂ ಯೋಗ- ಪ್ರಾಣಾಯಾಮದ ನಿತ್ಯ ಅಭ್ಯಾಸದಲ್ಲಿ ತೊಡಗುವಂತೆ ಪ್ರೇರೇಪಿಸಿದ ಕೀರ್ತಿ ಬಾಬಾ ರಾಮದೇವರಿಗೇ ಸಲ್ಲಬೇಕು. ಆಸ್ಥಾ ವಾಹಿನಿ ಅವರ ಯೋಗ ಕಾರ್ಯಕ್ರಮವನ್ನು ಪ್ರಸಾರ ಮಾಡಲು ಆರಂಭಿಸಿದಮೇಲಂತೂ ಶಿಬಿರಗಳಲ್ಲಿ ಪಾಲ್ಗೊಳ್ಳುವವರಷ್ಟೆ ಅಲ್ಲದೆ, ಟೀವಿ ನೋಡುತ್ತ, ಅವರನ್ನು ಅನುಸರಿಸುವವರ ಸಂಖ್ಯೆಯೂ ಬೆಳೆಯುತ್ತ ಸಾಗಿತು. ಈಗಂತೂ ಆಸ್ಥಾ ವಾಹಿನಿಯು ಆಫ್ರಿಕಾ, ಆಸ್ಟ್ರೇಲಿಯಾ, ಏಶಿಯಾದ ಬಹುತೇಕ ಎಲ್ಲ ರಾಷ್ಟ್ರಗಳು, ಯುರೋಪು ಮತ್ತು ಅಮೇರಿಕಾ- ಈ ಎಲ್ಲ ಕಡೆಗಳಲ್ಲೂ ರಾಮದೇವರ ಯೋಗ ಕಾರ್ಯಕ್ರಮಗಳನ್ನು ಬಿತ್ತರಗೊಳಿಸುತ್ತಿದೆ. ಮುಂಜಾನೆ ಐದರಿಂದ ಏಳೂವರೆಯವರೆಗೆ ಅವರ ಯೋಗ ಪಾಠದ ನೇರ ಪ್ರಸಾರವಿರುತ್ತದೆ. ಅದಕ್ಕಿರುವ ಜನಮನ್ನಣೆ ಕುರಿತಂತೆ ಆಸ್ಥಾ ಹೆಮ್ಮೆಯಿಂದ ಹೇಳಿಕೊಳ್ಳುತ್ತದೆ. ಜೊತೆಗೆ, ಈ ಕಾರ್ಯಕ್ರಮಕ್ಕೆ ವಿಶ್ವಾದ್ಯಂತ ಸುಮಾರು ಎರಡು ಕೋಟಿ ವೀಕ್ಷಕರಿದ್ದಾರೆ ಎನ್ನುವ ಅಂಕಿಅಂಶವನ್ನೂ ಬಿಚ್ಚಿಡುತ್ತದೆ.<br />
ನೀವು ನಂಬಲಾರಿರಿ. ಟಿವಿಯಲ್ಲಿ ಕಾರ್ಯಕ್ರಮ ನೋಡುತ್ತ, ರಾಮದೇವರ ಯೋಗ ಪಾಠಕ್ಕೆ ಶಿಷ್ಯರಾದವರು ತಾವು ರಕ್ತದೊತ್ತಡ, ಬೊಜ್ಜು, ಸಕ್ಕರೆ ಖಾಯಿಲೆ, ಹೆಪಟೈಟಿಸ್ ಇತ್ಯಾದಿ ರೋಗಗಳಿಂದ ಮುಕ್ತರಾಗಿರುವ ಬಗ್ಗೆ ದೃಢ ಧ್ವನಿಯಲ್ಲಿ ಹೇಳಿಕೊಳ್ಳುತ್ತಾರೆ. ಅಂದಮೇಲೆ, ಆರೋಗ್ಯ ಕ್ಷೇತ್ರದಲ್ಲಿ ಇದೊಂದು ಕ್ರಾಂತಿಯೆಂಬುದನ್ನು ಒಪ್ಪಲೇಬೇಕು ತಾನೆ?<br />
ಇತರರ ಯೋಗ ತರಗತಿಗಳಿಗೂ ರಾಮದೇವರ ಯೋಗ ತರಗತಿಗೂ ವ್ಯತ್ಯಾಸವೇನು? ಅವರೇಕೆ ಇಷ್ಟೊಂದು ಜನಪ್ರಿಯರು? ಈ ಪ್ರಶ್ನೆಗಳು ಸಹಜ. ರಾಮದೇವ್ ಬಾಬಾ, ಇತರರಂತೆ ಆಸನಗಳಿಗೇ ಹೆಚ್ಚು ಒತ್ತು ಕೊಟ್ಟು ಕೂರುವವರಲ್ಲ. ಅವರ ಯೋಗವೆಂದರೆ, ಬಹುತೇಕ ಪ್ರಾಣಾಯಾಮವೇ. ಉಸಿರಿನ ಮೇಲೆ ಹಿಡಿತ ಸಾಧಿಸುವುದರಿಂದ ದೇಹದ ಮೇಲೆ ಸುಲಭವಾಗಿ ಹಿಡಿತ ಸಾಧಿಸಬಹುದೆಂಬುದನ್ನು ಅವರು ಅನೇಕ ನಿದರ್ಶನಗಳ ಮೂಲಕ ಸಿದ್ಧಪಡಿಸಿದ್ದಾರೆ.  ಹೀಗಾಗಿಯೇ “ಭಾರತದಲ್ಲಿ ಯೋಗದ ಪುನರುತ್ಥಾನಕ್ಕೆ ಕಾರಣರಾದ ಒಬ್ಬ ವ್ಯಕ್ತಿಯನ್ನು ಹೆಸರಿಸಬೆಕೆಂದರೆ, ಅದು ನಿಸ್ಸಂಶಯವಾಗಿ ಬಾಬಾ ರಾಮದೇವರೇ. ಯೋಗದಿಂದ ಮಾರಕ ರೋಗಗಳನ್ನು ಗುಣಪಡಿಸಬಹುದೆಂದು ಅವರು ಮೇಲಿಂದಮೇಲೆ ನಿರೂಪಿಸುತ್ತ ಬಂದಿದ್ದಾರೆ. ಸ್ವಾಮಿ ರಾಮದೇವರು ಯೋಗವನ್ನು ಪ್ರಚುರಪಡಿಸುತ್ತಿರುವ ರೀತಿ ಹೇಗಿದೆಯೆಂದರೆ, ಆದಷ್ಟು ಬೇಗ ಪ್ರತಿಯೊಬ್ಬರಿಗೂ ಅದರ ಅರಿವು ಮೂಡಿ ಯೋಗವನ್ನು ಅಪ್ಪಿಕೊಳ್ಳುವ ದಿನ ದೂರವಿಲ್ಲ&#8221; ಎಂದು ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಉದ್ಗಾರವೆತ್ತಿದ್ದು!<br />
ಬಾಬಾ ರಾಮದೇವರದೊಂದು ಭವ್ಯ ಕನಸಿದೆ. ಅದು, ಪತಂಜಲಿ ಯೋಗ ಕೇಂದ್ರದ್ದು. ಸುಮಾರು ನೂರುಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಗ ಪೀಠ ಹರಿದ್ವಾರದಿಂದ ೨೦ ಕಿ.ಮೀ ದೂರದಲ್ಲಿ ಬಹದ್ರಾಬಾದಿನಲ್ಲಿ ನಿರ್ಮಾಣವಾಗಲಿದೆ. ಯೋಗ, ಆಯುರ್ವೇದಗಳನ್ನು ತುತ್ತತುದಿಗೊಯ್ದು ನಿಲ್ಲಿಸಿ, ಇಡಿ ಜಗತ್ತಿಗೆ ಅದರ್ ಬೆಳಕು ಹರಿಯುವಂತೆ ಮಾಡುವ ಇರಾದೆ ಬಾಬಾರದ್ದು.<br />
೨೦೦೬ರ ಆಗಸ್ಟ್ ೬ರಂದು ಈ ಯೋಜನೆಗೆ ಚಾಲನೆ ದೊರಕಿದೆ. ಬರಲಿರುವ ೨೦೦೯ರ ವೇಳೆಗೆ ಜಗತ್ತಿನ ಕಣ್ ಕುಕ್ಕುವ ಈ ಅದ್ಭುತ ಯೋಜನೆಯು ಲೋಕಾರ್ಪಣಗೊಳ್ಳಲಿದೆ. ಈ ಕೇಂಡ್ರದಲ್ಲಿ ಸಾವಿರ ರೋಗಿಗಳನ್ನು ಒಮ್ಮೆಗೇ ಗುಣಪಡಿಸಬಹುದಲ್ಲದೆ, ಐದು ಸಾವಿರ ಮಂದಿ ಒಟ್ಟಿಗೆ ಯೋಗ ನಿರತರಾಗಬಹುದಾದಷ್ಟು ಸ್ಥಳವಕಾಸವೂ ಇರಲಿದೆ. ದಿನವೊಂದಕ್ಕೆ ಒಟ್ಟಾರೆಯಾಗಿ ಐದು ಸಾವಿರ ರೋಗಿಗಳ ತಪಾಸಣೆ ಮಾಡಬಲ್ಲ ಜಗತ್ತಿನ ಅತಿ ದೊಡ್ಡ ಚಿಕಿತ್ಸಾಲಯವೂ ಇದಾಗಲಿದೆ.<br />
ಸ್ವಾಮಿ ರಾಮದೇವರ ಈ ಯೋಗ ಯಾತ್ರೆಯನ್ನು ಮೆಚ್ಚಿಯೇ ಒರಿಸ್ಸಾದ ಕಳಿಂಗ ಇನ್ಸ್ಟಿಟ್ಯೂಟ್  ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ, ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದು. ಈ ಕರ್ಯಕ್ರಮದಲ್ಲಿ ಭಾಗವಹಿಸಿದ್ದ ನೊಬೆಲ್ ಪುರಸ್ಕೃತ ರಸಾಯನ ಶಾಸ್ತ್ರ ವಿಜ್ಞಾನಿ ರಿಚರ್ಡ್ ಅರ್ನೆಸ್ಟ್, ಯೋಗ ಪದ್ಧತಿಯನ್ನೂ ಬಾಬಾರನ್ನೂ ಭಾವ ಪೂರ್ಣವಾಗಿ ಕೊಂಡಾಡಿದ್ದರು.<br />
ಬಾಬಾ ರಾಮದೇವರ ಸಾಧನೆಯ ಹಾದಿ ಹೂವಿನಿಂದಲೇ ಕೂಡಿದ್ದು ಎಂದೇನೂ ಭಾವಿಸಬೇಡಿ. ಯೋಗದ ವ್ಯಾಪಕ ಪ್ರಚಾರದಿಂದ ಹಿಂದುತ್ವದ &#8211; ಭಾರತೀಯತೆಯ ಪ್ರಚಾರವಾಗುತ್ತದೆಂದು ಕರುಬಿದ ಕಮ್ಯುನಿಸ್ಟ್ ಪಕ್ಷ ಅವರ ಮೇಲೆ ತಮ್ಮೆಲ್ಲ ಕುಯುಕ್ತಿಗಳನ್ನೂ ಪ್ರಯೋಗಿಸಿ ಗೋಳುಹೊಯ್ದುಕೊಂಡಿತು. ೨೦೦೫ರಲ್ಲಿ ೧೧೩ ಮಂದಿ ದಿವ್ಯ ಯೋಗ ಮಂದಿರದ ಉದ್ಯೋಗಿಗಳು ಪಕ್ಷದೊಂದಿಗೆ ಕೈ ಜೋಡಿಸಿ ಬಾಬಾ ವಿರುದ್ಧ ಸಮರ ಸಾರಿದರು. ಧೃತಿಗೆಡದ ರಾಮದೇವರು, ಜಿಲ್ಲಾಡಳಿತ, ಉದ್ಯೋಗಿಗಳು, ಮತ್ತು ಟ್ರಸ್ಟ್ ನ ಆಡಳಿತ ಮಂಡಳಿಯೊಂದಿಗೆ ಸೇರಿ ಒಪ್ಪಂದ ಮಾಡಿಕೊಂಡರು. ಆನಂತರ, ಉದ್ಯೋಗಿಗಳ ನಡುವೆಯಿದ್ದುಕೊಂಡು ಗಲಭೆ ಹುಟ್ಟುಹಾಕುತ್ತಿದ್ದವರನ್ನು ಗೂಂಡಾಗಿರಿಯ ಆರೋಪ ಹೊರೆಸಿ ಕೆಲಸದಿಂದು ಕಿತ್ತುಹಾಕಿದರು. ಬಾಲ ಸುಟ್ಟಂತಾದ ಪಕ್ಷ ಮತ್ತು ಅದರ ಬೆಂಬಲಿಗರು ಟ್ರೇಡ್ ಯೂನಿಯನ್ ಮೂಲಕ ಕೋರ್ಟ್ ಮೆಟ್ಟಿಲೇರಿತು. ಬಾಬಾ ಜಗ್ಗಲಿಲ್ಲ.<br />
ಕಮ್ಯುನಿಸ್ಟ್ ಪಕ್ಷದ ನಾಯಕಿ ಬೃಂದಾ ಕಾರಟ್ ದೆಹಲಿಯಲ್ಲಿ ಪತ್ರಕರ್ತರ ಸಭೆ ಕರೆದು, ಬಾಬಾ ರಾಮದೇವರ ಕಾರ್ಖಾನೆಯಲ್ಲಿ ತಯಾರಿಸಲಾಗುವ ಕೆಲವು ಔಷಧಗಳಿಗೆ ಪ್ರಾಣಿಗಳ ಮತ್ತು ಮಾನವರ ಮೂಳೆ ಪುಡಿಯನ್ನು ಬೆರೆಸಲಾಗುತ್ತಿದೆ ಎಂದು ಆರೋಪಿಸಿದರು. ಅಷ್ಟಕ್ಕೆ ಸುಮ್ಮನಾಗದೆ, ಮುಂದಿನ ಕೆಲವು ದಿನಗಳಲ್ಲಿ, ರಾಮದೇವರ ಸಂಸ್ಥೆಯಿಂದ ತಯಾರಾದ ಔಷಧಗಳನ್ನು ಔಷಧಿ ಅಂಗಡಿಗಳಿಂದ ಸಂಗ್ರಹಿಸಿ ಸರ್ಕಾರಿ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಲಾಗಿದೆಯೆಂದೂ ಅವುಗಳಲ್ಲಿ ಮೂಳೆಪುಡಿ ಬೆರೆತಿರುವುದು ಸಾಬೀತಾಗಿದೆಯೆಂದೂ ಮತ್ತೊಮ್ಮೆ ಕಾರಿಕೊಂಡರು.<br />
ಬಾಬಾ ಸುಮ್ಮನೆ ಕೂರಲಿಲ್ಲ. ತಾವೂ ಅದೇ ಔಷಧಾಲಯಗಳಿಂದ ಸ್ಯಾಂಪಲ್ ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟರು. ಅಲ್ಲಿ ಅವು ಶುದ್ಧ ಆಯುರ್ವೇದೀಯ ಮತ್ತು ಸಸ್ಯಾಹಾರಿ ಔಷಧಗಳು ಎಂದು ದೃಢವಾಯಿತು. ಬಾಬಾ, ಸುಳ್ಳು ಆರೋಪ ಮಾಡಿದ್ದನ್ನು ಪ್ರಶ್ನಿಸಿ ಬ್ರುಂದಾರನ್ನು ತರಾಟೆಗೆ ತೆಗೆದುಕೊಂಡರು. ಇದು ಯಾವ ಮಟ್ಟಕ್ಕೇರಿತೆಂದರೆ, ಮೊದಲ ಬಾರಿಗೆ ಅವರ ವಿರುದ್ಧ ವ್ಯಾಪಕ ಜನಾಭಿಪ್ರಾಯ ರೂಪಿಸುವುದು ಸಾಧ್ಯವಾಯಿತು. ಆಕೆಯಂತೂ ಇನ್ನೆಂದಿಗೂ ತಾನು ಇಂತಹ ಸಂಗತಿಗಳಲ್ಲಿ ಸಿಕ್ಕಿಬೀಳಲಾರೆ ಎಂದು ಸರ್ವಜನಿಕವಾಗಿ ಹೇಳಿಕೆ ಕೊಡಬೇಕಾಯ್ತು!<br />
ಆದರೇನು? ಬಾಬಾ ರಾಮದೇವರ ಮೇಲೆ ಈ ರೀತಿಯ ರಾಜಕೀಯ ಪ್ರೇರಿತ, ದುರುದ್ದೇಶ ಪೀಡಿತ ಆಕ್ರಮಣಗಳಾದಂತೆಲ್ಲ ಅವರ ಬಳಿ ಸಾರುವ ಜನರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಯೋಗ ಪದ್ಧತಿಯನ್ನು ಅಳವಡಿಸಿಕೊಂಡು, ಶಾಖಾಹಾರ, ಆಯುರ್ವೇದ ಚಿಕಿತ್ಸೆ ಇತ್ಯಾದಿ ಋಜು ಮಾರ್ಗಗಳನ್ನು ಅನುಸರಿಸುವವರು ಹೆಚ್ಚುತ್ತಲೇ ಇದ್ದಾರೆ.<br />
ಇರಲಿ. ಯೋಗ, ಪ್ರಾಣಯಾಮ, ಮನೆ ಮದ್ದು (ಹೋಮ್ ರೆಮಿಡಿ), ಯೋಗ ಮತ್ತು ಆರೋಗ್ಯ ವಿಜ್ಞಾನ ಎಂಬ ನಾಲ್ಕು ಪುಸ್ತಕಗಳನ್ನು ಬರೆದಿರುವ ರಾಮದೇವ್ ಬಾಬಾ, ತಮ್ಮ ಟ್ರಸ್ಟ್ ವತಿಯಿಂದ ಮಾಸಿಕ ಪತ್ರಿಕೆಯನ್ನೂ ಹೊರತರುತ್ತಿದ್ದಾರೆ. ಯೋಗ ಪ್ರದರ್ಶನ- ಪಾಠಗಳ ೪೪ ಸಿ.ಡಿ.ಗಳನ್ನೂ ಮಾರುಕಟ್ಟೆಯಲ್ಲಿರಿಸಿದ್ದಾರೆ.<br />
ತಮ್ಮ ಸಾಮರ್ಥ್ಯದ ಮೇಲಿನ ವಿಶ್ವಾಸದಿಂದಲೇ ‘ರೋಗ ಮುಕ್ತ ಭಾರತ ಮತ್ತು ವಿಶ್ವ’ದ ಕನಸು ಕಾಣುತ್ತಿರುವ ಬಾಬಾ, ಯೋಗದಿಂದಲೇ ಆರ್ಯಾವರ್ತ ದೇಶ (ಭಾರತ) ಮತ್ತೆ ಜಗದ್ಗುರುವಿನ ಪಟ್ಟವೇರಲಿದೆ ಎಂದು ಅಸೀಮ ವಿಶ್ವಾಸದಿಂದ ನುಡಿಯುತ್ತಾರೆ.<br />
ಅವರೊಂದಿಗೆ ನಾವು ಕೈ ಜೋಡಿಸಬೇಕಿದೆ, ಅಷ್ಟೇ!</p>
]]></content:encoded>
			<wfw:commentRss>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%95%e0%b3%8d%e0%b2%b0%e0%b2%be%e0%b2%82%e0%b2%a4%e0%b2%bf%e0%b2%af%e0%b3%8b%e0%b2%97%e0%b2%bf-%e0%b2%ac%e0%b2%be%e0%b2%ac%e0%b2%be-%e0%b2%b0%e0%b2%be%e0%b2%ae%e0%b2%a6%e0%b3%87%e0%b2%b5%e0%b3%8d/feed/</wfw:commentRss>
		<slash:comments>2</slash:comments>
		</item>
		<item>
		<title>ಜರಾ ಯಾದ್ ಕರೋ ಕುರ್ಬಾನಿ&#8230;.</title>
		<link>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%9c%e0%b2%b0%e0%b2%be-%e0%b2%af%e0%b2%be%e0%b2%a6%e0%b3%8d-%e0%b2%95%e0%b2%b0%e0%b3%8b-%e0%b2%95%e0%b3%81%e0%b2%b0%e0%b3%8d%e0%b2%ac%e0%b2%be%e0%b2%a8%e0%b2%bf/</link>
		<comments>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%9c%e0%b2%b0%e0%b2%be-%e0%b2%af%e0%b2%be%e0%b2%a6%e0%b3%8d-%e0%b2%95%e0%b2%b0%e0%b3%8b-%e0%b2%95%e0%b3%81%e0%b2%b0%e0%b3%8d%e0%b2%ac%e0%b2%be%e0%b2%a8%e0%b2%bf/#comments</comments>
		<pubDate>Tue, 18 Mar 2008 15:34:40 +0000</pubDate>
		<dc:creator>admin</dc:creator>
				<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>

		<guid isPermaLink="false">http://neladamaatu.wordpress.com/?p=22</guid>
		<description><![CDATA[ಅದು ೧೯೩೧ನೆ ಇಸವಿ, ಮಾರ್ಚ್ ೨೩. ಲಾಹೋರಿನ ಸೆರೆಮನೆಯ ಮುಂದೆ ಸಾವಿರಾರು ಜನ ಸೇರಿದ್ದರು. ‘ವಂದೇ ಮಾತರಂ’ ಘೋಷಣೆ ಮುಗಿಲು ಮುಟ್ಟಿತ್ತು. ಆ ಜನ ಸಂದಣಿಯಲ್ಲಿ ಎಲ್ಲರಿಗಿಂತ ವೃದ್ಧ ತಾಯ್ತಂದೆಯರು ನಿಂತಿದ್ದರು. ಅವರ ಕಂಗಳಲ್ಲಿ ಮುಂದೇನಾಗುವುದೋ ಎಂಬ ಕಾತರತೆ. ಪಾಪಿ ಬ್ರಿಟಿಷರು ತಮ್ಮ ಮಕ್ಕಳನ್ನು ನಿರ್ದಯವಾಗಿ ಗಲ್ಲಿಗೇರಿಸುತ್ತಾರಲ್ಲ ಅನ್ನುವ ದುಗುಡ. ಆದರೂ ಕಣ್ಣಲ್ಲಿ ಹನಿ ನೀರಿಲ್ಲ! ಅಂಥ ಧೀರತನ. ಹ್ಹ್! ಆ ಎದೆಗಾರಿಕೆ ಬ್ರಿಟಿಷರಿಗಿರಬೇಕಲ್ಲ? ಹೊರಗೆ ನೆರೆದ ಜನ ಸಂದಣಿಯನ್ನು ಕಂಡೇ ನಡುಗಿಹೋಗಿದ್ದರು. ಅವರೆಲ್ಲಿ ಸೆರೆಮನೆಯ ಗೋಡೆ [...]]]></description>
			<content:encoded><![CDATA[<p><a title="kakoli_withloves-842-45257.jpg" href="http://neladamaatu.files.wordpress.com/2008/03/kakoli_withloves-842-45257.jpg">ಅದು ೧೯೩೧ನೆ ಇಸವಿ, ಮಾರ್ಚ್ ೨೩. ಲಾಹೋರಿನ ಸೆರೆಮನೆಯ ಮುಂದೆ ಸಾವಿರಾರು ಜನ ಸೇರಿದ್ದರು. ‘ವಂದೇ ಮಾತರಂ’ ಘೋಷಣೆ ಮುಗಿಲು ಮುಟ್ಟಿತ್ತು. ಆ ಜನ ಸಂದಣಿಯಲ್ಲಿ ಎಲ್ಲರಿಗಿಂತ ವೃದ್ಧ ತಾಯ್ತಂದೆಯರು ನಿಂತಿದ್ದರು. ಅವರ ಕಂಗಳಲ್ಲಿ ಮುಂದೇನಾಗುವುದೋ ಎಂಬ ಕಾತರತೆ. ಪಾಪಿ ಬ್ರಿಟಿಷರು ತಮ್ಮ ಮಕ್ಕಳನ್ನು ನಿರ್ದಯವಾಗಿ ಗಲ್ಲಿಗೇರಿಸುತ್ತಾರಲ್ಲ ಅನ್ನುವ ದುಗುಡ. ಆದರೂ ಕಣ್ಣಲ್ಲಿ ಹನಿ ನೀರಿಲ್ಲ! ಅಂಥ ಧೀರತನ.</p>
<p>ಹ್ಹ್! ಆ ಎದೆಗಾರಿಕೆ ಬ್ರಿಟಿಷರಿಗಿರಬೇಕಲ್ಲ? ಹೊರಗೆ ನೆರೆದ ಜನ ಸಂದಣಿಯನ್ನು ಕಂಡೇ ನಡುಗಿಹೋಗಿದ್ದರು. ಅವರೆಲ್ಲಿ ಸೆರೆಮನೆಯ ಗೋಡೆ ಒಡೆದು ಒಳನುಗ್ಗಿ, ಯುವ ಕ್ರಾಂತಿಕಾರಿಗಳನ್ನು ಬಿಡಿಸಿ ಕರೆದೊಯ್ಯುವರೋ ಎಂಬ ಅಂಜಿಕೆ ಅವರಿಗೆ. ಅದಕ್ಕಾಗಿಯೇ ಅವರು ನಿಗದಿತ ದಿನಕ್ಕಿಂತ ಒಂದು ದಿನ ಮೊದಲೇ ತಮ್ಮ ಅಪರಾಧಿಗಳನ್ನು ಗಲ್ಲಿಗೇರಿಸುವ ತಯಾರಿಯಲ್ಲಿದ್ದರು.</p>
<p>ಇಷ್ಟಕ್ಕೂ ಆ ಅಪರಾಧಿಗಳು ಮಾಡಿದ್ದ ಅಪರಾಧ ಯಾವುದು ಗೊತ್ತೇ? ದೇಶದ ಸ್ವಾತಂತ್ರ್ಯಕ್ಕಾಗಿ ದನಿ ಎತ್ತಿದ್ದು. ಆ ದನಿ ಕಿವುಡು ಬ್ರಿಟಿಷ್ ಸತ್ತೆಗೆ ಕೇಳದಾದಾಗ ಬಾಂಬೆಸೆದು ಸದ್ದು ಮಾಡಿದ್ದರು ಅವರು!<br />
ಅವರೇ ದೇಶದಲ್ಲಿ ಕ್ರಾಂತಿ ದೀಪ ಮತ್ತಷ್ಟು ಜ್ವಾಜಲ್ಯಮನವಾಗಿ ಬೆಳಗುವಂತೆ ಮಾಡಲು ತಮ್ಮ ರಕ್ತವನ್ನೇ ಬಸಿದ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್!</p>
<p><img src="http://neladamaatu.files.wordpress.com/2008/03/bb.jpg" alt="bb.jpg" /></p>
<p>ಹಾಗೆ ಈ ಮೂವರು ಯುವ ಕ್ರಾಂತಿಕಾರಿಗಳನ್ನು ಗಲ್ಲಿಗೇರಿಸಲು ಅವರು ಕೊಟ್ಟ ಕಾರಣ ‘ರಾಜ ದ್ರೋಹ’. ಈ ಬಿಸಿ ರಕ್ತದ ಯುವಕರು ಅನ್ಯಾಯ ದರ್ಪಗಳ ಮುದ್ದೆಯಂತಿದ್ದ ಸ್ಯಾಂಡರ್ಸ್ ನ ಹತ್ಯೆ ಮಾಡಿದ್ದರು. ಅಸಲಿಗೆ ಅವರ ಗುರಿಯಾಗಿದ್ದಿದ್ದು ಸ್ಕಾಟ್. ಈತ ಲಾಲಾಜಿಯವರ ಸಾವಿಗೆ ಕಾರಣನಾಗಿದ್ದ. ಅದರ ಸೇಡು ತೀರಿಸಿಕೊಳ್ಳಲೆಂದೇ ಈ ಕ್ರಾಂತಿಕಾರಿಗಳು ಸ್ಕಾಟ್ ಹತ್ಯೆಯ ಯೋಜನೆ ರೂಪಿಸಿದ್ದರು. ಅದರ ಬದಲಿಗೆ ಮತ್ತೊಬ್ಬ ದುರಹಂಕಾರಿಯ ಸಂಹಾರವಾಗಿತ್ತು.</p>
<p>ಭಗತ್ ಸಿಂಗನ ಕಥೆ ಕೊನೆಯ ಪಕ್ಷ ಆ ಸಿನೆಮಾ ನೋಡಿದ ಹಲವು ಯುವಕರಿಗಾದರೂ ಗೊತ್ತಿರುತ್ತದೆ. ಹೌದು. ನಮ್ಮ ಪಠ್ಯಗಳಲ್ಲಿ ನಮ್ಮ ರಾಷ್ಟ್ರದ ಬಗ್ಗೆ ಹೆಮ್ಮೆ ಪಡುವಂಥ ನಮ್ಮ ಚರಿತ್ರೆಯನ್ನು ಹೇಳಿರುವುದು ಕದಿಮೆ. ಭಗತ್ ಸಿಂಗನದಾದರೂ ಕೊಂಚ ಕಂಡೀತೇನೋ, ರಾಜ ಗುರುವಿನಂಥ ಮರಾಠಾ ಕಲಿ, ಸುಖದೇವನಂತಹ ಸಮರ್ಪಣಾ ಭಾವದ ಕ್ರಾಂತಿವೀರರ ಬಗ್ಗೆ ಕೇಳುವುದೇ ಬೇಡ.</p>
<p>ಇರಲಿ. ಈ ಭಗತ್ ಸಿಂಗ್, ಬಾಲ್ಯದಲ್ಲಿ ಸ್ವಾತಂತ್ರ್ಯ ಹೋರಾಟದ ಕೆಚ್ಚು ಬೆಳೆಸಿಕೊಂಡಿದ್ದು ಜಲಿಯನ್ ವಾಲಾಭಾಗ್ ಹತ್ಯಾಕಾಂಡದ ದುರಂತದಿಂದ. ನಂತರ, ಗಾಂಧೀಜಿಯವರ ಅಸಹಕಾರ ಚಳುವಳಿ ಆತನ ಹೋರಾಟಕ್ಕೊಂದು ಮಾರ್ಗ ಹಾಕಿಕೊಟ್ಟಿತು. ಆದರೆ ಚೌರಿಚೌರಾದ ಘಟನೆಗೆ ಪ್ರತಿಕ್ರಿಯೆಯಾಗಿ ಗಾಂಧೀಜಿ ಚಳುವಳಿಯನ್ನು ಹಿಂಪಡೆದರು. ಇದರಿಂದ, ಶಾಲೆ ಬಿಟ್ಟು ಚಳುವಳಿಗೆ ಧುಮುಕಿದ್ದ ಭಗತನಿಗೆ ನಿರಾಸೆಯಾಯ್ತು. ಮುಂದೆ ಲಾಹೋರಿನ ನ್ಯಾಶನಲ್ ಕಾಲೇಜಿನಲ್ಲಿ ಓದು ಮುಂದುವರೆಸಿದ.<br />
ಕಾಲೇಜಿನ ದಿನಗಳಲ್ಲಿ ಸುಕದೇವನ ಜೊತೆಗೂಡಿ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬಿತ್ತುವ ಕೆಲಸ ಮಾಡುತ್ತಿದ್ದ ಭಗತ್, ಕ್ರಮೇಣ ಕ್ರಾಂತಿಕಾರಿಗಳೊಂದಿಗೆ ಸಂಪರ್ಕ ಪಡೆದ. ಪಂಡಿತ್ ಜೀ ಎಂದೇ ಖ್ಯಾತರಾಗಿದ್ದ ಚಂದ್ರ ಶೇಖರ ಆಜಾದರ ಸಹವಾಸಕ್ಕೆ ಬಂದಮೇಲಂತೂ ಅವನ ಕ್ರಾಂತಿ ಚಟುವಟಿಕೆಗಳು ಮತ್ತಷ್ಟು ತೀವ್ರಗೊಂಡವು. ಹಿರಿಯ ಕ್ರಾಂತಿಕಾರಿಗಳೊಡಗೂಡಿ ಕಾಕೋರಿ ಲೂಟಿಯಲ್ಲಿ ಪಾಲ್ಗೊಂಡ.</p>
<p>ಮುಂದೆ ಜೈಲಿನಲ್ಲಿ ಕೂಡ ಭಗತ್ ಸಿಂಗ್ ತನ್ನ ಸ್ವಾಭಿಮಾನ, ಸ್ವಾತಂತ್ರ್ಯ ಪ್ರಿಯತೆಯನ್ನು ಮೆರೆದ. ನಲವತ್ತು ದಿನಗಳ ಕಾಲ ಸಂಗಡಿಗರೊಂದಿಗೆ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ದೇಶ ಬಾಂಧವರಿಗೆ ಕ್ರಾಂತಿಕಾರಿಗಳ ಹೋರಾಟದ ಬಗ್ಗೆ ಇದ್ದ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸಿದ. ಆತ ಪ್ರತಿಪಾದಿಸಿದ ‘ಪೂರ್ಣ ಸ್ವರಾಜ್ಯ’ ಚಿಂತನೆಯು ಕಾಂಗ್ರೆಸ್ಸಿನ ತರುಣರನ್ನು ಸೆಳೆಯಿತು. ಆವರೆಗೂ ಡೊಮಿನಿಯನ್ ಸ್ಟೇಟಸ್ ಬಗ್ಗೆ ಮಾತಾಡುತ್ತಿದ್ದ ಕಾಂಗ್ರೆಸ್, ತಾನೂ ಪೂರ್ಣ ಸ್ವರಾಜ್ಯದ ಬಗ್ಗೆ ಘೋಷಣೆ ನೀಡಲಾರಂಭಿಸಿತು.</p>
<p>ಇನ್ನೂ ಮೂವತ್ತು ಮುಟ್ಟಿರದ ಮೂರು ರತ್ನಗಳು ಜಯಗೋಪಾಲ ಎನ್ನುವ ದ್ರೋಹಿಯ ಕಾರಣದಿಂದ ದೇಶಭಕ್ತಿಗೆ ಶಿಕ್ಷೆ ಅನುಭವಿಸಬೇಕಾಗಿ ಬಂದಿದ್ದು ನಮ್ಮ ಪಾಲಿನ ದುರಂತ. ಈ ಬಗೆಯ ದ್ರೋಹಿಗಳೇನು ಬಿಡಿ, ಸಿರಾಜುದ್ದೌಲನನ್ನು ನಂಬಿಸಿ ಕೇಡು ಬಗೆದ ಮೀರ್ ಜಾಫರನಿಂದ ಹಿಡಿದು, ಚಾಫೇಕರ್ ಸಹೋದರರ ನೇಣಿಗೆ ಕಾರಣನಾದ ದ್ರವಿಡನವರೆಗೂ ಇದ್ದೇ ಇದ್ದರು. ಯಾಕೆ? ಅಲೆಕ್ಸಾಂಡರನು ಭಾರತಕ್ಕೆ ಬಂದ ಕಾಲದಲ್ಲೇ ಪೌರವನಿಗೆ ದ್ರೋಹ ಬಗೆದ ಅಂಬಿಯೇ ಇರಲಿಲ್ಲವೇ? ನಮ್ಮ ಚೆನ್ನಮ್ಮ ಕೂಡ ಸೆರೆ ಸಿಕ್ಕಿದ್ದು ದ್ರೋಹಿಗಳ ಕಾರಣದಿಂದಲೇ. ಇಲ್ಲವಾದಲ್ಲಿ ನಮ್ಮ ಹೆಮ್ಮೆಯ ನಾಡಿನ ಕದನ ಕಲಿಗಳನ್ನು ಬಂದೂಕಿನ ತುದಿಯಿಂದ ಹೆದರಿಸಿ ಸೆರೆ ಹಿಡಿಯುವಷ್ಟು ತಾಖತ್ತು ಪರದೇಶೀಯರಿಗೆಲ್ಲಿಂದ ಬರಬೇಕು!?</p>
<p>ಇರಲಿ. ಅಂತೂ ನಮ್ಮ ಕ್ರಾಂತಿರತ್ನಗಳು ನಗುನಗುತ್ತ ಕುಣಿಕೆ ಚುಂಬಿಸಿ ‘ಇಂಕ್ವಿಲಾಬ್ ಜಿಂದಾಬಾದ್’ ಘೋಷಿಸುತ್ತ ಆತ್ಮಾಹುತಿಗೆ ಅಣಿಯಾದರು. ಕಟುಕನ ಕಾಯಕದ ಜೈಲರ್ ಕೂಡ ಇವರ ಕೆಚ್ಚು ಕಂಡು ಕಣ್ಣೀರ್ಗರೆದ. ಅಂತೂ ಇಂತೂ ಮಾರ್ಚ್ ೨೩ರ ಆ ದಿನ ಭಗತ್, ರಾಜ ಗುರು, ಸುಖದೇವರು ತಾಯಿ ಭಾರತಿಗಾಗಿ ತಮ್ಮ ಜೀವವನ್ನು ಧಾರೆ ಎರೆದರು. ಭಗತನಂತೂ ಆಜಾದರು ತಪ್ಪಿಸಿಕೊಳ್ಳುವ ಉಪಾಯ ಸೂಚಿಸಿದ್ದಾಗ ‘ನಾನು ಇದ್ದು ಮಾದುವುದಕ್ಕಿಂತ ಸತ್ತು ಇನ್ನೂ ಹೆಚ್ಚಿನದನ್ನು ಸಾಧಿಸಬಲ್ಲೆ’ ಎಂದು ದೃಢವಾಗಿ ನುಡಿದಿದ್ದ. ಅದರಂತೆ, ಲಕ್ಷಲಕ್ಷ ಭಾರತೀಯರು ದೇಶಕ್ಕಾಗಿ ಸಾಯುವ ಪಾಠವನ್ನು ಈ ನಗುಮೊಗದ ತರುಣರಿಂದ ಕಲಿತುಕೊಂಡರು. ಜೀವದ, ಸುರಕ್ಷತೆಯ, ಸ್ವಾರ್ಥದ ಹಂಗು ತೊರೆದು ಸ್ವಾತಂತ್ರ್ಯ ಪ್ರಾಪ್ತಿಯ ಮಾರ್ಗದಲ್ಲಿ ಮುಂದಡಿಯಿಟ್ಟರು.<br />
ಯುವಕರಲ್ಲಿ ಮೂಡಿದ ಈ ‘ಸಾಯುವ’ ಕೆಚ್ಚು ಮುಂದೆ ಸುಭಾಷರ ಆಜಾದ್ ಹಿಂದ್ ಫೌಜಿಗೆ  ಸಾಕಷ್ಟು ಬಲ ತಂದಿತು.</p>
<p>ಅಹಿಂಸಾಚಳುವಳಿಗೆ ಪೂರಕವಾಗಿ ನಡೆದ ಕ್ರಾಂತಿ ಚಳುವಳಿ, ನೇತಾಜಿಯ ಸೇನಾಬಲ ಮತ್ತು ಬ್ರಿಟಿಷರ ಕೆಳಗಿದ್ದ ಭಾರತೀಯ ಸೈನಿಕರು ನೇತಾಜಿಯವರತ್ತ ಬೆಳೆಸಿಕೊಳ್ಳತೊಡಗಿದ ಒಲವು, ಬ್ರಿಟಿಷರನ್ನು ಹೆದರಿಸಿತು. ಪಾಪ! ಅವರಿಗೆ ೧೮೫೭ರ ನೆನಪಾಗಿರಲೂ ಸಾಕು!! ಅಂತೂ ನಮಗೆ ಸ್ವಾತಂತ್ರ್ಯ ದಕ್ಕಿತು.</p>
<p>ಭಗತ್ ಸಿಂಗನಿಗೆ ಸ್ವಾತಂತ್ರ್ಯ ಪ್ರಾಪ್ತಿಯೊಂದೇ ಮುಖ್ಯವಾಗಿರಲಿಲ್ಲ. ಸ್ವಾತಂತ್ರ್ಯಾನಂತರದ ಭಾರತ ಹೇಗಿರಬೇಕೆನ್ನುವುದರ ಬಗ್ಗೆಯೂ ಸ್ಪಷ್ಟ ಕಲ್ಪನೆಗಳಿದ್ದವು. ಆದರೆ ಅವೆಲ್ಲವೂ ಆತನೊಂದಿಗೇ ಮಣ್ಣುಗೂಡಿ ಹೋದವು.</p>
<p>ಅಳಿದರೇನು ದೇಹವಂದು<br />
ಧ್ಯೇಯ ದೀಪ ಉರಿದಿದೆ<br />
ನವ ಜನಾಂಗ ನೆಗೆದು ಬಂದು<br />
ತೈಲವದಕೆ ಸುರಿದಿದೆ</p>
<p>- ಎಂದಿದೆ ಕವಿವಾಣಿ. ಆದರೆ ನಮ್ಮ ಯುವ ಪೀಳಿಗೆ ಅಂಥ ಯಾವ ಧ್ಯೇಯವನ್ನೂ ಕಾಯ್ದುಕೊಳ್ಳಲು ಮನಸ್ಸು ಮಾಡುತ್ತಿಲ್ಲ ಅನ್ನುವುದೇ ದುರಂತ.<br />
ಈಗಲೂ ಕಾಲ ಮಿಂಚಿಲ್ಲ. ಮಾರ್ಚ್ ೨೩ರ ಶಹೀದ್ ದಿನದಂದು ನಾವೆಲ್ಲರೂ ದೇಶಕ್ಕಾಗಿ ಪ್ರಾಣ ತೆತ್ತವರ ಹೆಸರಲ್ಲಿ ಅವರ ಹೋರಾಟವನ್ನು ಸಾರ್ಥಕಗೊಳಿಸುವ, ದೇಶದ ಸ್ವಾಭಿಮಾನ- ಸ್ವಾವಲಂಬಿತೆಗಳನ್ನು ಕಾಯ್ದಿಡುವ ದೀಕ್ಷೆ ತೊಡೋಣ. ಅವರ ಬಲಿದಾನವನ್ನು ಗೌರವಿಸೋಣ. ಆಗದೇ?<br />
 </p>
<p></a></p>
]]></content:encoded>
			<wfw:commentRss>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%9c%e0%b2%b0%e0%b2%be-%e0%b2%af%e0%b2%be%e0%b2%a6%e0%b3%8d-%e0%b2%95%e0%b2%b0%e0%b3%8b-%e0%b2%95%e0%b3%81%e0%b2%b0%e0%b3%8d%e0%b2%ac%e0%b2%be%e0%b2%a8%e0%b2%bf/feed/</wfw:commentRss>
		<slash:comments>4</slash:comments>
		</item>
		<item>
		<title>ಇತಿಹಾಸದ ಪುಟಗಳಲ್ಲಿ ಮುಲಾಜಿನ ಗೋಜಲು</title>
		<link>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%87%e0%b2%a4%e0%b2%bf%e0%b2%b9%e0%b2%be%e0%b2%b8%e0%b2%a6-%e0%b2%aa%e0%b3%81%e0%b2%9f%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%ae%e0%b3%81%e0%b2%b2%e0%b2%be%e0%b2%9c%e0%b2%bf/</link>
		<comments>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%87%e0%b2%a4%e0%b2%bf%e0%b2%b9%e0%b2%be%e0%b2%b8%e0%b2%a6-%e0%b2%aa%e0%b3%81%e0%b2%9f%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%ae%e0%b3%81%e0%b2%b2%e0%b2%be%e0%b2%9c%e0%b2%bf/#comments</comments>
		<pubDate>Thu, 07 Feb 2008 03:01:31 +0000</pubDate>
		<dc:creator>admin</dc:creator>
				<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>

		<guid isPermaLink="false">http://neladamaatu.wordpress.com/?p=17</guid>
		<description><![CDATA[ರಾಮಾಯಣದ ಅತ್ಯಂತ ಮಹತ್ವದ ತಿರುವ ಕಂಡ ಪ್ರಸಂಗ ಅದು. ದಶರಥ ತಾನು ಕೈಕೇಯಿಗೆ ಯಾವಗಲೋ ಕೊಟ್ಟ ಮಾತನ್ನು ಈಡೇರಿಸಲಿಕ್ಕಾಗಿ ಪಟ್ಟಾಭಿಷಕ್ತನಾಗಬೇಕಿದ್ದ ರಾಮನನ್ನು ಹದಿನಾಲ್ಕು ವರ್ಷ ವನವಾಸಕ್ಕೆ ತೆರಳುವಂತೆ ಕೇಳಿಕೊಳ್ಳುತ್ತಾನೆ. ರಾಮನೇನೋ ತಂದೆಯ ಆಜ್ಞಾಪಾಲನೆಗೆ ಸಿದ್ಧನಾಗಿಬಿಟ್ಟ. ಆದರೆ ಲಕ್ಷ್ಮಣನ ಮುಖ ಕೆಂಪುಕೆಂಪಾಯಿತು. &#8220;ಅಣ್ಣ, ಅಪ್ಪನನ್ನು ಕೊಂದು ರಾಜ್ಯ ವಶಪಡಿಸಿಕೊಳ್ಳೋಣ&#8221; ಎಂದ. ರಾಮ ತಮ್ಮನನ್ನು ಸಂತೈಸುತ್ತ, &#8221; ತಂದೆಯ ಮಾತನ್ನು ನಡೆಸಿಕೊದುವುದೆ ಪುತ್ರಧರ್ಮ. ಅದರಲ್ಲಿಯೆ ನಮಗೆ ಶ್ರೇಯಸ್ಸು&#8221; ಎಂದುಬಿಟ್ಟ. ತಂದೆಯ ಮಾತಿಗಾಗಿ ರಾಜ್ಯಬಿಟ್ಟು ತೆರಳಿದ ರಾಮ, ಮರಳಿ ಬರುವ ವೇಳೆಗೆ [...]]]></description>
			<content:encoded><![CDATA[<p><a title="withnehru.gif" href="http://neladamaatu.files.wordpress.com/2008/02/withnehru.gif"></a><a title="ray_sirajuddaula.jpg" href="http://neladamaatu.files.wordpress.com/2008/02/ray_sirajuddaula.jpg"></a><a title="shri_ram-20050507-103342.jpg" href="http://neladamaatu.files.wordpress.com/2008/02/shri_ram-20050507-103342.jpg"><img style="width:198px;height:255px;" src="http://neladamaatu.files.wordpress.com/2008/02/shri_ram-20050507-103342.jpg" alt="shri_ram-20050507-103342.jpg" width="198" height="268" /></a></p>
<p>ರಾಮಾಯಣದ ಅತ್ಯಂತ ಮಹತ್ವದ ತಿರುವ ಕಂಡ ಪ್ರಸಂಗ ಅದು. ದಶರಥ ತಾನು ಕೈಕೇಯಿಗೆ ಯಾವಗಲೋ ಕೊಟ್ಟ ಮಾತನ್ನು ಈಡೇರಿಸಲಿಕ್ಕಾಗಿ ಪಟ್ಟಾಭಿಷಕ್ತನಾಗಬೇಕಿದ್ದ ರಾಮನನ್ನು ಹದಿನಾಲ್ಕು ವರ್ಷ ವನವಾಸಕ್ಕೆ ತೆರಳುವಂತೆ ಕೇಳಿಕೊಳ್ಳುತ್ತಾನೆ. ರಾಮನೇನೋ ತಂದೆಯ ಆಜ್ಞಾಪಾಲನೆಗೆ ಸಿದ್ಧನಾಗಿಬಿಟ್ಟ. ಆದರೆ ಲಕ್ಷ್ಮಣನ ಮುಖ ಕೆಂಪುಕೆಂಪಾಯಿತು. &#8220;ಅಣ್ಣ, ಅಪ್ಪನನ್ನು ಕೊಂದು ರಾಜ್ಯ ವಶಪಡಿಸಿಕೊಳ್ಳೋಣ&#8221; ಎಂದ. ರಾಮ ತಮ್ಮನನ್ನು ಸಂತೈಸುತ್ತ, &#8221; ತಂದೆಯ ಮಾತನ್ನು ನಡೆಸಿಕೊದುವುದೆ ಪುತ್ರಧರ್ಮ. ಅದರಲ್ಲಿಯೆ ನಮಗೆ ಶ್ರೇಯಸ್ಸು&#8221; ಎಂದುಬಿಟ್ಟ. ತಂದೆಯ ಮಾತಿಗಾಗಿ ರಾಜ್ಯಬಿಟ್ಟು ತೆರಳಿದ ರಾಮ, ಮರಳಿ ಬರುವ ವೇಳೆಗೆ ಜಗ ಬೆಳಗುವ ರಾಮನಾಗಿ ಬಂದ. ಆದರೆ ಪತ್ನಿಯ ದಾಕ್ಷಿಣ್ಯಕ್ಕೆ ಒಳಗಾಗಿ ಮಗನನ್ನೇ ಕಾಡಿಗೆ ಅಟ್ಟಿದ ದಶರಥ, ಪುತ್ರವ್ಯಾಮೋಹದಲ್ಲಿಯೇ ಕೊನೆಯುಸಿರೆಳೆದ.</p>
<p>~</p>
<p>ಯಾರದೋ ಮರ್ಜಿಗೆ, ಮುಲಾಜಿಗೆ ಒಳಗಾಗಿ ಕೈಗೊಂಡ ನಿರ್ಣಯಗಳು ಮತ್ತೆಲ್ಲೋ ಒಳ್ಳೆಯ ಕೆಲಸ ಮಾಡಿದರೆ ಪುಣ್ಯ. ಅನೇಕ ವೇಳೆ ಅವು ಭವಿಷ್ಯವನ್ನೇ ಮೊಟಕುಗೊಳಿಸುವಂಥಹ ನಿರ್ಣಯಗಳಾಗಿಬಿಡುತ್ತವೆ.<br />
ಧೃತರಾಷ್ಟ್ರ ತನ್ನ ಮಕ್ಕಳಿಗೇ ರಾಜ್ಯ ಸಿಗಬೆಕೆಂದು ಹಟ ಹಿದಿದು ಪಾಂದವರಿಗೆ ಅನ್ಯಾಯ ಮಾಡಿದನಲ್ಲ, ಪರಿಣಾಮ ಏನಾಯ್ತು ಗೊತ್ತ? ಯುದ್ಧ ಮತ್ತು ಸರ್ವನಾಶ! ಧರ್ಮರಾಜ್ಯ ಸ್ಥಾಪನೆಯಾಗಲಿಕ್ಕೆ ಕೃಷ್ಣ ಕಾರಣನಾದ ಎನ್ನುವುದನ್ನು ಬಿಟ್ಟರೆ ಇಡಿಯ ಮಹಾಭಾರತ ಅನೇಕ ತುಮುಲಗಳ ಆಗರವಾಗಿ ಕಾಣುವುದಿಲ್ಲವೇ? ಅತ್ತ ಧೃತರಾಷ್ಟ್ರ ತನ್ನ ಪುತ್ರ ವ್ಯಾಮೋಹದ ಮುಲಾಜಿಗೆ ಒಳಗಾದರೆ, ಅವನ ಮಗ ದುರ್ಯೋಧನ ತನ್ನದೇ ಅಹಂಕಾರದ ದಾಕ್ಷಿಣ್ಯಕ್ಕೆ ಒಳಗಾಗಿದ್ದ. ಕೃಷ್ಣ ಬಂದು ಧರ್ಮೋಪದೇಶ ಮಾಡಿದರೆ,<br />
ಜಾನಾಮಿ ಧರ್ಮಂ ನ ಚ ಮೇ ಪ್ರವೃತ್ತಿಃ<br />
ಜಾನಾಮ್ಯಧರ್ಮಂ ನ ಚ ಮೇ ನಿವೃತ್ತಿಃ<br />
ಎಂದುಬಿಟ್ಟ.  &#8220;ಧರ್ಮ ಗೊತ್ತಿದ್ದರೂ ಆಚರಿಸುವ  ಮನಸಿಲ್ಲ, ಅಧರ್ಮವೆಮ್ದು ತಿಳಿದರೂ ಬಿಡಲು ಮನಸಿಲ್ಲ&#8221; ಎಂಡು ತನ್ನ ಅಹಂಕಾರಕ್ಕೆ ಶರಣಾಗಿಬಿಟ್ಟ! ಅಬ್ಬಬ್ಬ&#8230; ಈ ಪರಿಯ ದಾಸ್ಯ ಅದೆಷ್ಟು ಕಷ್ಟ, ನಿಕೃಷ್ಟ!?</p>
<p>ಹಲವು ಬಾರಿ ನಂಬಿಕೊಂಡ ಆದರ್ಶಗಳೂ ದಾಕ್ಷಿಣ್ಯವಾಗಿಯೇ ಕಾಡುತ್ತವೆ. ಬಹುಶಃ ಆದರ್ಶಗಳ ಮರ್ಜಿಗೆ ಒಳಗಾಗುವುದು ಅಂದರೆ ಅದೇ ಇರಬೇಕು.</p>
<p>~</p>
<p>ಪೃಥ್ವಿರಾಜ್ ಚೌಹಾನನ ಮೇಲೆ ಮಹಮದ್ ಘೋರಿ ದಾಳಿ ಮಾಡಿದ್ದು ನೆನಪಿಸಿಕೊಳ್ಳಿ. ನಮ್ಮ ಇತಿಹಾಸದ ಅತ್ಯಂತ ಪ್ರಮುಖ ಘಟ್ಟ ಅದು. ತರೈನ್ ಎನ್ನುವ ಪ್ರದೇಶದಲ್ಲಿ ಅವರಿಬ್ಬರಿಗೂ ಮುಖಾಮುಖಿಯಾಯ್ತು. ಪೃಥ್ವಿರಾಜನ ಸೇನೆಯೆದುರು ಘೋರಿಯ ಸೇನೆ ಪತರಗುಟ್ಟಿ ಹೋಯಿತು. ಆಮೆಲೇನು?  ಘೋರಿ ಪೃಥ್ವಿರಾಜನ ಕಾಲಿಗೆ ಬಿದ್ದು ಕ್ಷಮೆ ಯಾಚಿಸಿದ. ಕ್ಷಮೆ ಯಾರಿಗೆ? ಅದನ್ನು ಪಾತ್ರರಿಗೆ ನೀಡಬೇಕು. ಘೋರಿಯಂತಹ ಅಪಾತ್ರರಿಗಲ್ಲ. ಆದರ್ಶಗಳ ಮುಲಾಜಿಗೆ ಬಿದ್ದ ಪೃಥ್ವಿರಾಜ್ ಚೌಹಾಣ್ ಘೋರಿಯನ್ನು ಕ್ಷಮಿಸಿದ್ದಷ್ಟೇ ಅಲ್ಲ, ಗೌರವಯುತವಾಗಿ ಮರಳಲು ಅನುವು ಮಾಡಿಕೊಟ್ಟ ಕೂಡ!<br />
ಮರು ವರ್ಷವೇ ತರೈನ್ ನಲ್ಲಿ ಮತ್ತೆ ದಾಳಿಯಾಯ್ತು. ಈ ಬಾರಿ ತನ್ನವರೇ ಮೋಸ ಮಾಡಿದುದರ ಫಲವಾಗಿ ಚೌಹಾನನ ಸೇನೆ ಸೋತಿತು. ಘೋರಿಯ ಕೈ ಮೇಲಾಯ್ತು. ಆತ ಚೌಹಾನನನ್ನು ಬಂಧಿಸಿ, ತನ್ನೂರಿಗೆ ಕರೆದೊಯ್ದ. ಅಲ್ಲಿ ಅವನ ಎರಡೂ ಕಣ್ಣೂಗಳನ್ನು ಕೀಳಿಸಿ ಬರ್ಬರ ಕೊಲೆ ಮಾಡಿಸಿದ.<br />
ಅದಕ್ಕೇ ಹೇಳೋದು. ಅಯೋಗ್ಯರಿಗೆ ಒಳ್ಳೆಯದನ್ನು ಮಾಡಬಾರದೆಂಬುದೂ ಒಂದು ಆದರ್ಶ. ಏನಂತೀರಿ?</p>
<p style="text-align:center;"><img src="http://neladamaatu.files.wordpress.com/2008/02/ray_sirajuddaula.jpg" alt="ray_sirajuddaula.jpg" width="165" height="255" /></p>
<p>೧೭೫೭ರಲ್ಲೂ ಹಾಗೇ ಆಯಿತು. ಸಿರಾಜುದ್ದೌಲ ಬಂಗಾಳಾದ ನವಾಬನಾಗಿದ್ದಾಗ ಆಂಗ್ಲರ ವಿರುದ್ಧ ತಿರುಗಿ ಬಿದ್ದ. ಪೋರ್ಟ್ ವಿಲಿಯಂ ಮೇಲೆ ಏರಿ ಹೋದ. ಪತರಗುಟ್ಟಿದ ರಾಬರ್ಟ್ ಕ್ಲೈವ್, ಸಿರಾಜುದ್ದೌಲನ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್  ಜಾಫರನನ್ನು ಒಲಿಸಿಕೊಂಡ. ರಾಜ್ಯದ ಆಮಿಷ ತೋರಿದ. ಈ ಬಾರಿ ಮೀರ್ ಜಾಫರ್ ಯುದ್ಧಕ್ಕೆ ಮುನ್ನ ನವಾಬನ ಬಳಿ ಹೋಗಿ, “ನನ್ನಂತಹ ಸೇನಾಪತಿ ಇರುವಾಗ ನವಾಬರೇ ಯುದ್ಧಕ್ಕೆ ಬರುವುದು ಸರಿಯಲ್ಲ, ಹಾಗೆ ಮಾಡಿದರೆ ಅದು ನನ್ನ ಸಾಮರ್ಥ್ಯಕ್ಕೆ ಅವಮಾನ ಮಾಡಿದಂತೆ. ಬೆರಳೆಣಿಕೆಯಷ್ಟಿರುವ ಆಂಗ್ಲರನ್ನು ಸೋಲಿಸಿ ಬರುತ್ತೇನೆ&#8221; ಎಂದ. ನವಾಬನಿಗೂ ಹೌದೆನ್ನಿಸಿತು. ತನ್ನ ಸೇನಾಪತಿಗೆ ಅವಮಾನ ಮಾಡುವುದು ಸರಿಯೇ ಅನ್ನುವ ದ್ವಂದ್ವ ಅವನನ್ನು ಕಾಡಿತು. ಮೀರ್ ಜಾಫರನ ಮುಲಾಜಿಗೆ ಒಳಗಾದ. ಭಾರತದ ಇತಿಹಾಸವೇ ಬದಲಾಯ್ತು. ರಾಬರ್ಟ್ ಕ್ಲೈವ್ ಕದನದಲ್ಲಿ ಸಲೀಸಾಗಿ ಗೆದ್ದ. ನವಾಬನನ್ನು ಪದಚ್ಯುತಗೊಳಿಸಿ ಮೀರ್ ಜಾಫರನನ್ನು ಪಟ್ಟಕ್ಕೇರಿಸಲಾಯ್ತು. ಬ್ರಿಟನ್ನಿನ ಪ್ರಭುತ್ವ ಭಾರತದಲ್ಲಿ ಸ್ಥಿರವಾಗಲು ಅದೊಂದು ಹೆದ್ದಾರಿಯಾಯ್ತು. ಒಂದು ನಿರ್ಧಾರ ಇತಿಹಾಸ ಬದಲಿಸುವ ಎಂತಹ ಕೆಲಸ ಮಾಡಿತು ನೋಡಿ!</p>
<p>~</p>
<p><a title="withnehru.gif" href="http://neladamaatu.files.wordpress.com/2008/02/withnehru.gif"></a></p>
<p>ಗಾಂಧೀಜಿಯೂ ಇಂತಹ, ಇತರರಿಂದ ಪ್ರಭಾವಿತರಾದ ನಿರ್ಣಯ ಕೈಗೊಳ್ಳುತ್ತಲೇ ಇದ್ದರು. ಅವರು ನೆಹರೂರನ್ನು ತಮ್ಮ ಉತ್ತರಾಧಿಕಾರಿ ಎಂದು ಕರೆದಿದ್ದು ಏಕೆ ಎಂಬ ಪ್ರಶ್ನೆ ಒಂದು ಹಂತದ ನಂತರ ಅವರನ್ನೇ ಕಾಡಿರಲಿಕ್ಕೆ ಸಾಕು. ಮೋತೀಲಾಲ ನೆಹರೂ ಕಾಂಗ್ರೆಸ್ ಪಾರ್ಟಿಗೆ ತುಂಬಾ ದುಡಿದಿದ್ದರು ಎಂಬ ದಾಕ್ಷಿಣ್ಯವ? ಅಥವಾ ಶೋಕೀಲಾಲನಾಗಿದ್ದ ಯುವಕ ತನ್ನ ಚಿಂತನೆಗಳಿಗೆ ಮನಸೋತು ಬಂದಿದ್ದಾನೆಂಬ ಮುಲಾಜಿಗೋ? ದೇವರೇ ಬಲ್ಲ. ಹಾಗೆ ನೋದಿದರೆ ಯಾವ ಕಾರಣಕ್ಕೂ ನೆಹರೂ ಗಾಂಧೀಜಿಯ ಉತ್ತರಾಧಿಕಾರಿಯಾಗುವ ಯೋಗ್ಯತೆ ಹೊಂದಿರಲಿಲ್ಲ. ಗಾಂಧೀಜಿಯ ಸ್ವದೇಶೀ ಚಿಂತನೆಗಳು ಯೋಚಿಸಲಿಕ್ಕೂ ಅನರ್ಹ ಎಂದವರು ನೆಹರೂ. ಗಾಂಧೀಜಿಯಷ್ಟು ಸತ್ಯಪರಾಯಣತೆ, ಆದರ್ಶಗಳಿಗೆ ಬದ್ಧತೆ, ಇವ್ಯಾವುವೂ ಅವರಿಗಿರಲಿಲ್ಲ. ಅಷ್ಟಾದರೂ ಗಾಂಧೀಜಿ ಮೈಮರೆತು ನೆಹರೂಗೆ ಅಷ್ಟು ಮಹತ್ವದ ಸ್ಥಾನ ಕೊಟ್ಟರು. “ನನ್ನ ನಂತರ ನೆಹರೂ ನನ್ನ ಮಾತಾಡುತ್ತಾರೆ&#8221; ಎಂದುಬಿಟ್ಟರು. ಕಾಂಗ್ರೆಸ್ಸಿನ ಸೆಂಟ್ರಲ್ ಕಮಿಟಿ ಪಟೇಲರೇ ದೇಶದ ಪ್ರಧಾನಿಯಾಗಲಿ ಎಂದು ಘಂಟಾಘೋಷವಾಗಿ ಹೇಳಿದರೂ ಗಾಂಧೀಜಿ ಮನಸ್ಸು ಮಾಡಲಿಲ್ಲ.</p>
<p>ಪ್ರಧಾನ ಮಂತ್ರಿಗಿರಿ ಪಡೆದು ಆಳುವ ಖುರ್ಚಿಯೇರಿದ ನೆಹರೂ, ಖುರ್ಚಿ ತಪ್ಪಿಸಿಕೊಂಡ ನೆಹರೂನಷ್ಟು ಅಪಾಯಕಾರಿಯಲ್ಲ ಅಂತ ಗಾಂಧೀಜಿಗೆ ಅನಿಸಿತ್ತಾ? ಅಥವಾ ಅವರಪ್ಪನಿಗೆ ಮಾತು ಕೊಟ್ಟಿದ್ದೇನೆಂಬ ಒಂದೇ ಕಾರಣಕ್ಕೆ, ಆ ದರ್ದಿಗೆ ಅವರನ್ನು ಪ್ರಧಾನಿಯಾಗಲು ಬಿಟ್ಟರಾ?<br />
ಏನೇ ಆಗಲಿ, ಆ ನಿರ್ಣಯ ರಾಷ್ಟ್ರದ ಪಾಲಿಗೆ ಭಯಾನಕವಾಗಿದ್ದನ್ನು ಮಾತ್ರ ಯಾರೂ ಅಲ್ಲಗಳೆಯಲಾರರು.</p>
<p><a title="withnehru.gif" href="http://neladamaatu.files.wordpress.com/2008/02/withnehru.gif"><img src="http://neladamaatu.files.wordpress.com/2008/02/withnehru.gif" alt="withnehru.gif" align="right" /></a></p>
<p>ಈ ನಡುವೆ ಪಟೇಲರಿಗೆ ಯಾವ ಮುಲಾಜಿತ್ತು ಎಂಬುದೂ ಪ್ರಶ್ನೆಯೇ. ಉಗ್ರ ಪ್ರತಾಪಿಯಾಗಿದ್ದ ಪಟೇಲರು ಗಾಂಧೀಜಿಯನ್ನು ಧಿಕ್ಕರಿಸದೆ ಉಳಿದ ಕಾಅರ್ಣವೆನು? ಗಾಂಧೀಜಿಯ ಸಮಸ್ಯೆಗಳ ಅರಿವು ಪಟೇಲರಿಗಿತ್ತಾ? ಪಟೇಲರೂ ಗಾಂಧೀಜಿಯ ದಾಕ್ಷಿಣ್ಯಕ್ಕೆ ಒಳಗಾಗಿದ್ದರಾ? ಪ್ರಶ್ನೆ ಆಳಕ್ಕಿಳಿಯುತ್ತಲೇ ಹೋಗುತ್ತದೆ. ಅಲ್ಲವೇ?</p>
<p>ಈ ಕಾರಣಗಳಿಂದಾಗಿ ದೇಶ ದಾರಿ ತಪ್ಪಿತೆಂದಷ್ಟೇ ಹೇಳಬಹುದು. ದೇಶ ವಿಭಜನೆಯ ಸಂದರ್ಭದಲ್ಲಿ ಲಕ್ಷಾಂತರ ಜನರ ಆಹುತಿಯಾಯ್ತು. ಆನಂತರದ ಪಂಚವಾರ್ಷಿಕ ಯೋಜನೆಗಳ ಭಾರದಲ್ಲಿ ದೇಶ ನಲುಗಿತು. ಹಳಿ ತಪ್ಪಿದ್ದ ಶಿಕ್ಷಣ ವ್ಯವಸ್ಥೆ, ನ್ಯಾಯ ವ್ಯವಸ್ಥೆ, ಕೃಷಿ ವ್ಯವಸ್ಥೆ, ಯಾವುವೂ ಮತ್ತೆ ಸರಿದಾರಿಗೆ ಬರಲೇ ಇಲ್ಲ. ಒಂದು ತಪ್ಪು ನಿರ್ಣಯ ಭಾರತವನ್ನು ಎರಡನೇ ಬಾರಿಗೆ  ಗುಲಾಮಗಿರಿಗೆ ನೂಕಿತೆಂದರೆ ತಪ್ಪಿಲ್ಲ.</p>
<p>ದಾಕ್ಷಿಣ್ಯಕ್ಕೆ ಬಸಿರಾಗುವ ಈ ಪ್ರಕ್ರಿಯೆ ಸ್ವಾತಂತ್ರ್ಯಾನಂತರವೂ ನಿಲ್ಲಲಿಲ್ಲ. ನಮ್ಮ ಮೇಲೆ ದಾಳಿ ಮಾಡಿ ನಮ್ಮ ಭೂಮಿಯನ್ನೇ ವಶಪಡಿಸಿಕೊಂಡ ಚೀನಾದ ವಿರುದ್ಧ ನಾವು ಮಾತಾಡಲೂ ಇಲ್ಲ. ದೇಸದೊಳಗಿನ ಚೀನಾ ನಿಷ್ಠ ಕಮ್ಯುನಿಸ್ಟರು ಬೇಸರಗೊಂಡರೆ!? ಎಂಬ ನೋವು ನಮಗೆ.</p>
<p>~</p>
<p>ಕಳೆದ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನ ಸೇನೆಯನ್ನು ಬಡಿದೆವಲ್ಲ, ಆಗಲೂ ನಮ್ಮದು ದಾಕ್ಷಿಣ್ಯವೇ. ಆರಂಭದಲ್ಲಿ ನಾವು ಕೆಳಗಿದ್ದೆವು, ಉಗ್ರರು ಮೇಲಿದ್ದರು. ಆಗ ಸಂಧಾನದ ಮಾತಿರಲಿಲ್ಲ. ನಮ್ಮ ಸೈನಿಕರು ಸಾಹಸಗೈದು ಮೇಲೇರುತ್ತಿದ್ದಂತೆ ಪಾಕ್ ಸೈನ್ಯ ತತ್ತರಿಸಿಬಿಟ್ಟಿತು. ಎಂದಿನಂತೆ ನಮ್ಮ ಸರ್ಕಾರ ಅಮೆರಿಕದ ಮುಲಾಜಿಗೆ ಒಳಗಾಗಿ ಪಾಕ್ ಸೈನಿಕರಿಗೆ ಮುಕ್ತಮಾರ್ಗ ತೋರಿಸಿತು. ನಮಮ್ ಸೈನಿಕರೇ ಅವರ ರಕ್ಷಣೆಗೆ ನಿಂತು ಅವರನ್ನು ಅವರ ದೇಶಕ್ಕೆ ಕಲೀಸಬೇಕಾಯ್ತು! ಇದಕ್ಕಿಂತ ಹೀನ ಸ್ಥಿತಿ ಯಾವುದೂ ಇಲ್ಲ ಅಂದ್ಕೊಂಡ್ರಾ?</p>
<p>ಖಂಡಿತ ಇದೆ. ಮೌಲಾನಾ ಮಸೂದ್ ಅಜರ್ ಬಿಡುಗಡೆಗೆಂದು ಉಗ್ರರು ವಿಮಾನಾಪಹರಣ ಮಾಡಿದ್ದು ನೆನಪಿಸಿಕೊಳ್ಳಿ. ಅವತ್ತು ವಿಮಾನದಲ್ಲಿದ್ದ ಆ ಪ್ರಯಾಣಿಕರ ಮನೆಯವರು ಗಲಾಟೆ ಮಾಡಿದರೆಂಬ ಕಾರಣಕ್ಕೆ ಈ ದೇಶದ ವಿದೇಶಾಂಗ ಸಚಿವರು ವಿಮಾನದಲ್ಲಿ ಆ ಉಗ್ರಗಾಮಿಯನ್ನು ತಮ್ಮೊಂದಿಗೆ ಕುಳ್ಳರಿಸಿಕೊಂಡು ಬಿಟ್ಟು ಬಂದರಲ್ಲ, ಅದು ಯಾವ ಮಟ್ಟದ ಕೃತ್ಯ, ನೀವೇ ಹೇಳಿ&#8230;  ಪ್ರತಿ ಬಾರಿಯೂ ಹೀಗೇ ಆದರೆ?</p>
<p>ಇವೆಲ್ಲಕ್ಕೂ ಕಿರೀಟಪ್ರಾಯವಾದಂಥದ್ದು, ಸಂಸತ್ತಿನ ಮೇಲೆ ದಾಳಿ ಮಾಡಿದ ಅಫ್ಜಲ್ ಗುರುವಿನ ಕಥೆ. ಬರಿಯ ಓಟಿನ ದಾಕ್ಷಿಣ್ಯಕ್ಕೆ ಬಿದ್ದು ಅವನನ್ನು ನೇಣಿಗೇರಿಸದೆ ಕುಳಿತಿದ್ದಾರಲ್ಲ, ಈ ನಿರ್ಣಯ ಸರಿಯಾ?</p>
<p>ಹುಡುಕುತ್ತ ಹೋದರೆ ಅಸಂಖ್ಯ ಘಟನೆಗಳಿವೆ. ಯಾವುದೇ ನಿರ್ಧಾರದ ಹಿಂದೆ ದೂರಾಲೋಚನೆ ಇರಬೇಕು. ಹಾಗಾಗಬೇಕೆಂದರೆ ಆ ನಿರ್ಧಾರಕ್ಕೆ ದಾಕ್ಷಿಣ್ಯದ ಸೋಂಕು ತಾಕಬಾರದು. ಯಾರದೋ ಮುಲಾಜಿಗೆ, ಮರ್ಜಿಗೆ, ದರ್ದಿಗೆ ಒಳಗಾದರೆ ಅಂದುಕೊಂಡ ಕಾರ್ಯ ಯಶಸ್ವಿಯಾಗಲಾರದು. ಅಲ್ಲವೇ?</p>
]]></content:encoded>
			<wfw:commentRss>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%87%e0%b2%a4%e0%b2%bf%e0%b2%b9%e0%b2%be%e0%b2%b8%e0%b2%a6-%e0%b2%aa%e0%b3%81%e0%b2%9f%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%ae%e0%b3%81%e0%b2%b2%e0%b2%be%e0%b2%9c%e0%b2%bf/feed/</wfw:commentRss>
		<slash:comments>6</slash:comments>
		</item>
		<item>
		<title>ಗಾಂಧಿ ಎಂಬ ‘ಮಹಾತ್ಮ’</title>
		<link>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%97%e0%b2%be%e0%b2%82%e0%b2%a7%e0%b2%bf-%e0%b2%8e%e0%b2%82%e0%b2%ac-%e2%80%98%e0%b2%ae%e0%b2%b9%e0%b2%be%e0%b2%a4%e0%b3%8d%e0%b2%ae%e2%80%99/</link>
		<comments>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%97%e0%b2%be%e0%b2%82%e0%b2%a7%e0%b2%bf-%e0%b2%8e%e0%b2%82%e0%b2%ac-%e2%80%98%e0%b2%ae%e0%b2%b9%e0%b2%be%e0%b2%a4%e0%b3%8d%e0%b2%ae%e2%80%99/#comments</comments>
		<pubDate>Sat, 02 Feb 2008 17:35:07 +0000</pubDate>
		<dc:creator>admin</dc:creator>
				<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>

		<guid isPermaLink="false">http://neladamaatu.wordpress.com/?p=16</guid>
		<description><![CDATA[ಸೋಮನಾಥ ದೇವಾಲಯ ಹಿಂದೂಗಳ ಮೇಲಿನ ಅತ್ಯಾಚಾರದ ಪ್ರತೀಕವಾಗಿ ನಿಂತಿತ್ತು. ಅದನ್ನು ಮತ್ತೆ ನಿರ್ಮಣ ಮಡಿ, ದಾಳಿಕೋರರ ಅತ್ಯಾಚಾರದ ನೆನಪುಗಳನ್ನು ಮೆಟ್ಟಿನಿಲ್ಲುವ ಕೆಲಸ ಆಗಬೇಕಿತ್ತು. ವಿಷಯ ಪ್ರಧಾನಿ ನೆಹರೂ ಬಳಿ ಬಂದಾಗ, ಸರ್ಕಾರ ಒಂದು ಪೈಸೆ ಕೊಡಲಾರದು ಎಂದುಬಿಟ್ಟರು. ಸೋಮನಾಥ ಮಂದಿರ ಕಟ್ಟುವುದರಿಂದ ಮುಸಲ್ಮಾನರಿಗೆ ನೋವಾದೀತೆಂಬ ಭಯ ಅವರಿಗಿತ್ತು. ಗೃಹ ಮಂತ್ರಿ ಪಟೇಲರು ಕಂಗಾಲಾದರು, ಗಾಂಧೀಜಿ ಬಳಿ ಓಡಿದರು. ನೆಹರೂಗೆ ಬುದ್ಧಿ ಹೇಳುವಂತೆ ಗೋಗರೆದರು. ಆಗ ‘ಸೋಮನಾಥ ದೇವಾಲಯ ಹಿಂದೂಗಳ ಶ್ರದ್ಧೆಯ ತಾಣ. ಅದರ ನಿರ್ಮಾಣಕ್ಕೆ ಸರ್ಕಾರ ಹಣ [...]]]></description>
			<content:encoded><![CDATA[<h4>ಸೋಮನಾಥ ದೇವಾಲಯ ಹಿಂದೂಗಳ ಮೇಲಿನ ಅತ್ಯಾಚಾರದ ಪ್ರತೀಕವಾಗಿ ನಿಂತಿತ್ತು. ಅದನ್ನು ಮತ್ತೆ ನಿರ್ಮಣ ಮಡಿ, ದಾಳಿಕೋರರ ಅತ್ಯಾಚಾರದ ನೆನಪುಗಳನ್ನು ಮೆಟ್ಟಿನಿಲ್ಲುವ ಕೆಲಸ ಆಗಬೇಕಿತ್ತು. ವಿಷಯ ಪ್ರಧಾನಿ ನೆಹರೂ ಬಳಿ ಬಂದಾಗ, ಸರ್ಕಾರ ಒಂದು ಪೈಸೆ ಕೊಡಲಾರದು ಎಂದುಬಿಟ್ಟರು. ಸೋಮನಾಥ ಮಂದಿರ ಕಟ್ಟುವುದರಿಂದ ಮುಸಲ್ಮಾನರಿಗೆ ನೋವಾದೀತೆಂಬ ಭಯ ಅವರಿಗಿತ್ತು. ಗೃಹ ಮಂತ್ರಿ ಪಟೇಲರು ಕಂಗಾಲಾದರು, ಗಾಂಧೀಜಿ ಬಳಿ ಓಡಿದರು. ನೆಹರೂಗೆ ಬುದ್ಧಿ ಹೇಳುವಂತೆ ಗೋಗರೆದರು. ಆಗ ‘ಸೋಮನಾಥ ದೇವಾಲಯ ಹಿಂದೂಗಳ ಶ್ರದ್ಧೆಯ ತಾಣ. ಅದರ ನಿರ್ಮಾಣಕ್ಕೆ ಸರ್ಕಾರ ಹಣ ಕೊಡಲಾರದೆಂದರೆ ತಿರಸ್ಕರಿಸೋಣ. ಒಬ್ಬೊಬ್ಬ ಹಿಂದೂವಿನಿಂದಲೂ ಹಣ ಸಂಗ್ರಹಿಸೋಣ. ಅಲ್ಲಿನ ಒಂದೊಂದು ಇಟ್ಟಿಗೆಯೂ ಹಿಂದೂವಿನದೇ ಆಗಿರಲಿ’ ಎಂದವರು ಗಾಂಧೀಜಿ! ಪಟೇಲರ ಶಕ್ತಿ ನೂರ್ಮಡಿಯಾಯಿತು. ಸೋಮನಾಥ ದೇವಾಲಯದ ನಿರ್ಮಾಣಕ್ಕೆ ಮುಂದಡಿಯಿಟ್ಟರು.</h4>
<h4>ಸ್ವಾತಂತ್ರ್ಯ ಹೋರಾಟದ ಅಂತಿಮ ಹಂತದ ಸಮಯ. ನೌಖಾಲಿಯಲ್ಲಿ ಇದ್ದಕ್ಕಿದ್ದ ಹಾಗೆ ದೊಂಬಿಗಳು ಶುರುವಿಟ್ಟವು. ಮುಸಲ್ಮಾನರು ಹಿಂದೂಗಳ ಮೇಲೆ ಆಘಾತಕಾರಿ ದಾಳಿ ನಡೆಸಿದರು. ಅದಕ್ಕೆ ಪ್ರತಿಯಾಗಿ ಹಿಂದೂಗಳು ತಿರುಗಿಬೀಳುವ ಹೊತ್ತಿಗೆ ಸರಿಯಾಗಿ ಈಗಿನ ಬಾಂಗ್ಲಾ ಪ್ರಾಂತ್ಯದಲ್ಲಿ ಬಹು ಸಂಖ್ಯಾತ ಮುಸಲ್ಮಾನರು ಹಿಂದೂಗಳನ್ನು ಕೊಲ್ಲತೊಡಗಿದರು. ಮೌಂಟ್ ಬ್ಯಾಟನ್ ೧೫ ಸಾವಿರ ಸೈನಿಕರನ್ನು ಅತ್ತ ಕಳಿಸಿಕೊಟ್ಟ. ನೌಖಾಲಿಗೆ ಗಾಂಧೀಜಿ ಒಬ್ಬಂಟಿ ಹೊರಟರು. “ಅಲ್ಲಿನ ಹಿಂದೂಗಳನ್ನು ನೀವು ರಕ್ಷಿಸಿ, ಇಲ್ಲಿನ ಮುಸಲ್ಮಾನರನ್ನು ರಕ್ಷಿಸುವ ಹೊಣೆ ನನಗಿರಲಿ&#8221; ಎಂದರು. ರಕ್ತಪಾತ ನಿಲ್ಲುವವರೆಗೆ ಉಪವಾಸ ಕುಳೀತುಕೊಳ್ಳುತ್ತೇನೆ ಎಂದರು. ಸೇಡಿನ ಕಿಚ್ಚಿನಿಂದ ಹಪಹಪಿಸುತ್ತಿದ್ದವರೂ ಗಾಂಧೀಜಿಯ ಮುಂದೆ ಮಂಡಿಯೂರಿ ಕುಳಿತರು. ಮೌಂಟ್ ಬ್ಯಾಟನ್ ಉದ್ಗರಿಸಿದ. “ದಂಗೆ ನಿಯಂತ್ರಿಸಿದ್ದು ಎರಡು ಸೇನೆಗಳು. ಒಂದೆಡೆ ೧೫ಸಾವಿರ ಸೈನಿಕರ ಸಮೂಹ, ಇನ್ನೊಂದೆಡೆ ಸಿಂಗಲ್ ಮ್ಯಾನ್ ಆರ್ಮಿ- ಗಾಂಧೀ!!&#8221;</h4>
<h4><img border="0" width="492" src="http://www.unityofthevalley.org/Gandhi.jpg" height="534" style="width:278px;height:307px;" /></h4>
<h4> ಇವು ಅಷ್ಟಾಗಿ ಚರ್ಚೆಗೆ ಬರದ ಗಾಂಧೀಜಿಯವರ ಚಿತ್ರಣಗಳು. ಗಾಂಧೀಜಿಗೆ ಹಿಂದೂ ಧರ್ಮ ಗ್ರಂಥಗಳ ಬಗ್ಗೆ ಅಪಾರ ಗೌರವ. ಗೀತೆಯ ಬಗ್ಗೆ ಅವರು ಸೊಗಸಾಗಿ ಬರೆದಿದ್ದಾರೆ. ರಾಷ್ಟ್ರದ ಸಮಸ್ಯೆಗಳಿಗೆ ಅದರಿಂದಲೇ ಪರಿಹಾರ ಹೇಳುತ್ತಾರೆ. ಇಷ್ಟಾಗಿಯೂ ಹಿಂದೂಗಳು ಅವರನ್ನು ತಮ್ಮ ನಾಯಕರೆಂದು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಅತ್ತ ಮುಸಲ್ಮಾನರು ಗಾಂಧೀಜಿಯನ್ನು ಹಿಂದೂಗಳ ನಾಯಕರೆಂದು ದೂರೀಕರಿಸುತ್ತಾರೆ. ಯಾವ ಹರಿಜನರ ಉದ್ಧಾರಕ್ಕಾಗಿ ತಮ್ಮ ಬದುಕಿನ ಪ್ರತಿಯೊಂದು ಹನಿ ಬೆವರನ್ನೂ ಸುರಿಸಿದರೋ, ಅದೇ ಹರಿಜನರ ಪಾಲಿಗೆ ಗಾಂಧೀಜಿ ಮೆಚ್ಚಿನ ನಾಯಕರಲ್ಲ. ಇತ್ತ ಮೇಲ್ವರ್ಗದ ಜನ ಕೂಡ ಅವರನ್ನು ಆರಾಧಿಸುವುದಿಲ್ಲ. ಸಮಾಜದ ಎಲ್ಲ ವರ್ಗದವರಿಗೂ ಗಾಂಧೀಜಿಯೇ ಅಸ್ಪೃಶ್ಯರಾಗಿಬಿಟ್ಟರು!</h4>
<h4>ದೇಶ- ಧರ್ಮಗಳ ಚಿಂತನೆ ಮಾಡದೇ, ಅನ್ಯಾಯವನ್ನು ಪ್ರತಿಭಟಿಸದೇ ಎಲ್ಲರಂತೆ ಇದ್ದುಬಿಟ್ಟಿದ್ದರೆ ಅವರೊಬ್ಬ ಶ್ರೀಮಂತ ಬ್ಯಾರಿಸ್ಟರ್ ಆಗಿರುತ್ತಿದ್ದರು. ಹಾಗಾಗಲಿಲ್ಲ. ಶ್ರೀಮಂತಿಕೆಯ ಬದುಕಿಗೊಂದು ಸಲಾಮು ಹೊಡೆದು, ತುಂಡು ಧೋತಿ ಧರಿಸಿ ರಾಷ್ಟ್ರ ಸೇವೆಗೆ ಧುಮುಕಿದರು. ಯಾವ ವರ್ಗವನ್ನು ವಿವೇಕಾನಂದರ ನಂತರ ಯಾರೂ ಪ್ರತಿನಿಧಿಸಿರಲಿಲ್ಲವೋ ಅಂಥಹ ಬಡ- ದರಿದ್ರರ ದನಿಯಾದರು. ವಿದೇಶದಲ್ಲಿರುವಾಗಲೇ ಬಿಳಿಯರು ಕರಿಯರ ಮೇಲೆ ನಡೆಸುತ್ತಿದ್ದ ದಬ್ಬಾಳಿಕೆಯನ್ನು ವಿರೋಧಿಸಿದರು. “ಹೊಡೆದರೆ ಹೊಡೆಸಿಕೊಳ್ಳಿ. ಬಡಿದರೆ ಬಡಿಸಿಕೊಳ್ಳಿ. ಬಡಿಯುವವರು ಎಷ್ಟೂಂತ ಬಡಿದಾರು? &#8221; ಎಂಬ ಸಿದ್ಧಾಂತವನ್ನು ಹೋರಾಟಗಾರರ ಕೈಗಿತ್ತರು. ದಬ್ಬಾಳಿಕೆಗೆ ಒಳಗಾದವರೂ ಮೊದಲು ಇವರನ್ನು ವಿರೋಧಿಸಿದರು. ಆಮೇಲೆ ಅಪಹಾಸ್ಯಗೈದರು. ಇಷ್ಟಾದರೂ ಆಸಾಮಿ ಜಗ್ಗದಿದ್ದಾಗ ಅವರನ್ನೇ ಅನುಸರಿಸಿದರು! ತಮ್ಮ ನಾಯಕನಾಗಿ ಸ್ವೀಕರಿಸಿದರು. ದೂರ ದೇಶದಿಂಡ ಬಂದವನೊಬ್ಬ ನೊಂದವರ ಕಣ್ಣೀರೊರೆಸುವುದು ತಮಾಷೆಯ ಕೆಲಸವಲ್ಲ. ಇಡೀ ಬ್ರಿಟಿಷ್ ಸಮುದಾಯ ಹೋರಾಟಾದ ಈ ಹೊಸ ಅಸ್ತ್ರಕ್ಕೆ ಬೆದರಿತು. ಇಂಗ್ಲೆಂಡಿನ ಪತ್ರಿಕೆಗಳೂ ಅವರನ್ನು ಹಾಡಿ ಹೊಗಳಿದವು. ನೋಡನೋಡುತ್ತಿದ್ದಂತೆಯೇ ಗಾಂಧೀಜಿ ಕಣ್ಣೂಕೋರೈಸುವಷ್ಟು ಎತ್ತರಕ್ಕೆ ಬೆಳೆದುಬಿಟ್ಟಿದ್ದರು.</h4>
<h4>ಇದೇ ಜಾಗತಿಕ ಖ್ಯಾತಿಯೊಂದಿಗೆ ಅವರು ಭಾರತಕ್ಕೆ ಬಂದಾಗ ಇಲ್ಲಿನ ಎಲ್ಲ ವರ್ಗಗಳೂ ಆಸಕ್ತಿಯಿಂದ ಕಾದಿದ್ದವು. ಗಾಂಧೀಜಿ ಅದ್ಭುತ ವಾಗ್ಮಿಯೇನಲ್ಲ. ಆದರೂ ಅವರು ಮಾತಾಡಲಿಕ್ಕೆ ನಿಂತರೆ ಜನಸ್ತೋಮವಿಡೀ ನಿಶ್ಶಬ್ದವಾಗುತ್ತಿತ್ತು. ಗಾಂಧೀಜಿಯವರ ಒಂದೊಂದು ಮಾತನ್ನೂ ವ್ಯರ್ಥವಾಗಲು ಬಿಡದೆ ಕೇಳಿಸಿಕೊಳ್ಳುವ ಶ್ರದ್ಧೆಯಿರುತ್ತಿತ್ತು. ಅದು, ಗಾಂಧೀಜಿ ವ್ಯಕ್ತಿತ್ವದ ತಾಖತ್ತು.</h4>
<h4>ಕ್ರಾಂತಿಕಾರಿಗಳ ಹೋರಾಟ ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿದ್ದಾಗ, ಗಾಂಧೀಜಿ ರಾಷ್ಟ್ರೀಯ ಚಳುವಳಿಯನ್ನು ಅತಿ ಕೆಳ ವ್ಯಕ್ತಿಯವರೆಗೂ ಕೊಂಡೊಯ್ದಿದ್ದರು. ಅಸಹಕಾರ ಚಳುವಳಿಗೆಂದು ಗಾಂಧೀಜಿ ನೀದಿದ ಒಂದೇ ಕರೆಗೆ ದೇಶದ ಎಲ್ಲ ವರ್ಗದ ಜನ ಸೆಟೆದು ನಿಂತಿದ್ದರು. ತಿಲಕರು ಸ್ವರಾಜ್- ಸ್ವದೇಶ್ ಪದಗಳನ್ನು ಹುಟ್ಟುಹಾಕಿದರು. ನಿಜ. ಗಾಂಧೀಜಿ ಅವುಗಳ ಕಲ್ಪನೆಯನ್ನು ಸಾಕಾರಗೊಳಿಸುವ ಮಾರ್ಗವನ್ನು ಜನರ ಮುಂದಿಟ್ಟರು.</h4>
<h4>ಗಾಂಧೀಜಿ ಮತ್ತು ಸುಭಾಷರ ಬಾಂಧವ್ಯದ ಬಗ್ಗೆಯೂ ಒಂದಷ್ಟು ವಿಷಯಗಳನ್ನು ಬೇಕೆಂದೇ ಮುಚ್ಚಿಡಲಾಗುತ್ತದೆ. ಅವರಿಬ್ಬರ ಸಂಬಂಧ ತಂದೆ- ಮಗನಂತಿತ್ತು ಅನ್ನೋದು ಬಹಳ ಜನರಿಗೆ ಗೊತ್ತೇ ಇಲ್ಲ. ಪತ್ರ ಬರೆವಾಗಲೆಲ್ಲ ಗಾಂಧೀಜಿ “ನಮ್ಮಲ್ಲಿನ ವೈಚಾರಿಕ ಭೇದ ನಮ್ಮ ಸಂಬಂಧಕ್ಕೆ ಧಕ್ಕೆ ತರಬಾರದು&#8221; ಎನ್ನುತ್ತಿದ್ದರು. ಒಮ್ಮೆಯಂತೂ ಪತ್ರದಲ್ಲಿ “ನನ್ನ ನಿನ್ನ ವಿಚಾರಗಳು ವಿಮುಖವಾದವು. ನಾನು ಮುದುಕ, ನೀನು ತರುಣ. ನಿನ್ನ ಚಿಂತನೆ- ವಾದಗಳೇ ಸರಿಯಾಗಿರಲಿ ಎಂದು ಆಶಿಸುತ್ತೆನೆ. ನಿನ್ನ ವಾದದಿಂದಲೇ ದೇಶಕ್ಕೆ ಲಾಭ ಎನ್ನುವುದಾದರೆ ನಾನು ಮಾಜಿ ಸತ್ಯಾಗ್ರಹಿಯಾಗಿ ನಿಷ್ಠೆಯಿಂದ ನಿನ್ನನ್ನು ಅನುಸರಿಸುತ್ತೇನೆ&#8221; ಎಂದಿದ್ದರು. ನಮ್ಮ ಸುಭಾಷ್ ದೇಶಭಕ್ತರ ಗುಂಪಿನಲ್ಲಿ ಮಿಂಚುವ ವೀರ ಎಂದು ಹೆಮ್ಮೆಪಡುತ್ತಿದ್ದರು. ಇನ್ನೊಂದೆಡೆ ಸುಭಾಷರು ಗಾಂಧೀಜಿ ರಾಷ್ಟ್ರಕ್ಕೇ ತಂದೆಯಿದ್ದಂತೆ, ಅವರೇ ‘ರಾಷ್ಟ್ರ ಪಿತ’ ಎಂದು ಹೇಳಿದ್ದರು!</h4>
<h4>ನಮ್ಮ ಕ್ರಾಂತಿಕಾರಿಗಳೆಲ್ಲ ಫ್ರಾನ್ಸು, ಅಮೆರಿಕ, ಜರ್ಮನಿ, ಇಟಲಿಗಳಿಂದ ಸ್ಫೂರ್ತಿಪಡೆದವರು, ಅಲ್ಲಿನ ಹೋರಾಟ ಕ್ರಮವನ್ನು ಅನುಸರಿಸಿದವರು. ಆದರೆ ಗಾಂಧೀಜಿ ಮಾತ್ರ ಈ ದೇಶದ ಸಂಸ್ಕೃತಿಯ ಆಳದಿಂದೆದ್ದು ಬಂದ ಸತ್ಯ- ಅಹಿಂಸೆಗಳೊಂದಿಗೆ ಹೋರಾಟ ಸಂಘಟಿಸಿದವರು. ಅದನ್ನು ಜಗತ್ತಿಗೆ ತೋರಿಸಿಕೊಟ್ಟವರು!</h4>
<h4>ಅವರ ಆತ್ಮ ಕಥೆಯಲ್ಲಿ ಗಾಂಧೀಜಿ ಬರೆದುಕೊಂಡಿದ್ದಾರೆ, “ತಂದೆಸಾವಿನ ಜೊತೆ ಸೆಣಸುತ್ತಿದ್ದಾಗ, ನಾನು ಅವರ ಕಾಲು ಒತ್ತುವುದು ಬಿಟ್ಟು ಹೆಂಡತಿಯೊಡನೆ ಸರಸದಲ್ಲಿದ್ದೆ. ತಂದೆ ಸತ್ತ ವಿಷಯ ತಿಳಿದಿದ್ದೂ ಆಗಲೇ! ನನಗೆ ಅಂದು ನನ್ನ ಮೇಲೇ ಅಸಹ್ಯವಾಗಿತ್ತು&#8221; ಅಂತ. ಆ ಪರಿ ಎತ್ತರಕ್ಕೇರಿರುವ ಮನುಷ್ಯ ಈ ಪರಿಯ ಸತ್ಯಗಳನ್ನು ಹೇಳಬಹುದು ಅನ್ನಿಸುತ್ತಾ? ಯೋಚಿಸಿ. ಅದು ಗಾಂಧೀಜಿಗೆ ಮಾತ್ರ ಸಾಧ್ಯ. ಅದಕ್ಕೇ, ಅವರು ‘ಮಹಾತ್ಮ’!</h4>
]]></content:encoded>
			<wfw:commentRss>http://vivekabharata.net/%e0%b2%a6%e0%b2%bf%e0%b2%b2%e0%b3%8d-%e0%b2%b9%e0%b3%88-%e0%b2%b9%e0%b2%bf%e0%b2%82%e0%b2%a6%e0%b3%82%e0%b2%b8%e0%b3%8d%e0%b2%a5%e0%b2%be%e0%b2%a8%e0%b2%bf/%e0%b2%97%e0%b2%be%e0%b2%82%e0%b2%a7%e0%b2%bf-%e0%b2%8e%e0%b2%82%e0%b2%ac-%e2%80%98%e0%b2%ae%e0%b2%b9%e0%b2%be%e0%b2%a4%e0%b3%8d%e0%b2%ae%e2%80%99/feed/</wfw:commentRss>
		<slash:comments>10</slash:comments>
		</item>
	</channel>
</rss>

